ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್


Team Udayavani, Jun 2, 2023, 6:48 PM IST

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಸರ್ಕಾರದಿಂದ ನಿರ್ದೇಶಕರಾಗಿ ನಾಮನಿರ್ದೇಶನಗೊಂಡು ಅಧ್ಯಕ್ಷರಾಗಿದ್ದ ಸೇಡಂ ಕ್ಷೇತ್ರದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ತೆರವು ಆಗಿರುವ ಸ್ಥಾನಕ್ಕೆ ಬ್ಯಾಂಕ್ ನ ಹಾಲಿ ಉಪಾಧ್ಯಕ್ಷರಾಗಿರುವ ಸುರೇಶ ಸಜ್ಜನ ಹಂಗಾಮಿ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡರು.

ಹಂಗಾಮಿ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ನಂತರ ಬ್ಯಾಂಕ್ ನ ಆಡಳಿತ ಮಂಡಳಿ ಸಭೆ ನಡೆಸಿದ ಸಜ್ಜನ್ ಅವರು, ಬ್ಯಾಂಕ್ ನ ಆರ್ಥಿಕ ಸ್ಥಿತಿ ಹಾಗೂ ಸಾಲ ವಸೂಲಾತಿ ಮತ್ತು ವಿತರಣೆ ಬಗ್ಗೆ ಮಾಹಿತಿ ಪಡೆದುಕೊಂಡರು.

ರೈತರಿಗೆ ಹೊಸದಾಗಿ ಸಾಲ ವಿತರಿಸುವ ಹಾಗೂ ಸಾಲ‌ ಮರುಪಾವತಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ವ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಬೆಂಬಲ ಅಗತ್ಯವಾಗಿದೆ ಎಂದು ಸಜ್ಜನ್ ಹೇಳಿದರು.

ನಿಯೋಗ: ರೈತರಿಗೆ ಹೊಸದಾಗಿ ಸಾಲ ವಿತರಿಸಲು ಅಪೆಕ್ಸ್ ಮತ್ತು ನಬಾರ್ಡ್ ದಿಂದ ಸಾಲ ದೊರಕುವಂತಾಗಲು ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರ ಬಳಿ ಎರಡು ವಾರದೊಳಗೆ ನಿಯೋಗ ಹೋಗಲಾಗುವುದು ಎಂದು ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಸುರೇಶ ಸಜ್ಜನ್ ಪ್ರಕಟಿಸಿದರು.

ಸಾಲ ನೀಡುವಿಕೆ ಹಾಗೂ ವಸೂಲಾತಿ ಬಗೆಗೆ ಹಾಗೂ ಸರ್ಕಾರದಿಂದ ಇರುವ ಸಾಲ‌ ಸೌಲಭ್ಯಗಳ ಕುರಿತಾಗಿ ರೈತರು ಮತ್ತು ಜನರಲ್ಲಿ ಅರಿವು‌ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ನಗರದ ಗಾಜಿಪುರದಲ್ಲಿರುವ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿದ ಎಲ್ಲ ನಿರ್ದೇಶಕರ ಸಭೆಯಲ್ಲಿ ಚರ್ಚೆ ನಡೆಸಿ ನಿಯಮದಂತೆ ಹಾಲಿ ಉಪಾಧ್ಯಕ್ಷ ಸುರೇಶ ಸಜ್ಜನ ಅವರನ್ನು ಸರ್ವಾನುಮತದಿಂದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಆಯ್ಕೆಯಾಗುತ್ತಲೇ ಎಲ್ಲ ನಿರ್ದೇಶಕರು ಹಾಗೂ ಅಧಿಕಾರಿಗಳು ಸಜ್ಜನ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಬ್ಯಾಂಕಿನ ಮುಂಭಾಗದಲ್ಲಿ ಜಮಾಗೊಂಡಿದ್ದ ಅವರ ಬೆಂಬಲಿಗರು ಸುರೇಶ ಸಜ್ಜನ ಆಯ್ಕೆ ಘೋಷಣೆ ಮಾಡುತ್ತಲೇ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಶಿವಾನಂದ ಮಾನಕರ್, ಕೆವೈಡಿಸಿಸಿ ನಿರ್ದೇಶಕರಾದ  ಸೋಮಶೇಖರ ಗೋನಾಯಕ, ಶರಣಬಸಪ್ಪ ಪಾಟೀಲ್ ಅಷ್ಟಗಿ, ಬಾಪುಗೌಡ ಪಾಟೀಲ್ ಹುಣಸಗಿ, ಸಿದ್ರಾಮರಡ್ಡಿ ಕೌಳೂರ ಯಾದಗಿರಿ, ಗೌತಮ ಪಾಟೀಲ್ ಚಿಂಚೋಳಿ, ಬಸವರಾಜ ಪಾಟೀಲ್ ಹೇರೂರ, ಅಶೋಕ ಸಾವಳೇಶ್ವರ ಆಳಂದ, ಚಂದ್ರಶೇಖರ ತಳ್ಳಳ್ಳಿ, ನಿಂಗಣ್ಣ ದೊಡ್ಡಮನಿ, ಉತ್ತಮ ಬಜಾಜ ಮೊದಲಾದವರಿದ್ದರು. ಸಿಇಒ ಮತ್ತು ಎಂಡಿ ವಿಶ್ವನಾಥ ಮಲಕೂಡ ಅವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ತದನಂತರ ನಡೆದ ಸಂಭ್ರಮಾಚರಣೆಯಲ್ಲಿ ಕಿಶೋರ ಸೇಠ ಸುರಪುರ, ಪ್ರಕಾಶ ಸಜ್ಜನ, ರಾಜಾ ಮುಕುಂದ ನಾಯಕ, ಮಂಜುನಾಥ ಗುಳಗಿ, ಮಲ್ಲಿಕಾರ್ಜುನ ರಡ್ಡಿ ಹತ್ತಿಕುಣಿ, ಶಾಂತರಡ್ಡಿ ಚೌಧರಿ ಮುದನೂರ, ವಿಶ್ವರಾಧ್ಯ ಸತ್ಯಂಪೇಟೆ, ರೇವಣಸಿದ್ದಪ್ಪ ಸಂಕಾಲಿ, ಶರಣು ಬಿಲ್ಲಾಡ, ಚಂದ್ರಕಾಂತ ಗೌಡರ ಸೇರಿದಂತೆ ಅನೇಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Suspended

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

8-chincholi

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ‌ನಡೆಸಿದ ಜಿಲ್ಲಾಧಿಕಾರಿ

4-wadi

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Farmer: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

8-bangalore

Crime: ಹಣಕಾಸಿನ ವಿಚಾರಕ್ಕೆ ಸಹೋದ್ಯೋಗಿ ಕೊಲೆ ಮಾಡಿದ್ದ ಆರೋಪಿ ಬಂಧನ

7-bangalore

Bangalore: ಹೋಟೆಲ್‌ ಧ್ವಂಸ ಮಾಡಿದವರ ಸೆರೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

6-bangalore

Bangalore: ಟ್ರಾಫಿಕ್‌ ಜಾಮ್‌ಗೆ ಸಿಲಿಕಾನ್‌ ಸಿಟಿ ಹೈರಾಣ!

garadi

Sandalwood: ‘ಗರಡಿ’ ಮನೆಯಲ್ಲಿ ಪಾಟೀಲ್ ಖದರ್; ನ.10ಕ್ಕೆ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.