ಸ್ವಚ್ಛ ಸರ್ವೇಕ್ಷಣೆ: ಕಲಬುರಗಿ ಪಾಲಿಕೆಗೆ ಕೊಂಚ ನೆಮ್ಮದಿ


Team Udayavani, Aug 21, 2020, 6:04 PM IST

ಸ್ವಚ್ಛ ಸರ್ವೇಕ್ಷಣೆ: ಕಲಬುರಗಿ ಪಾಲಿಕೆಗೆ ಕೊಂಚ ನೆಮ್ಮದಿ

ಕಲಬುರಗಿ: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ ನಗರಗಳ ಪಟ್ಟಿಯಲ್ಲಿ ಮಹಾನಗರ ಪಾಲಿಕೆಯ ಸ್ಥಾನ ತುಸು ಏರಿಕೆ ಕಂಡಿದ್ದು, ಪಾಲಿಕೆ ಅಧಿಕಾರಿಗಳಿಗೆ ಕೊಂಚ ನೆಮ್ಮದಿ ತರಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರ ಸ್ವಚ್ಛ ನಗರಗಳನ್ನು ಪಟ್ಟಿ ಮಾಡಿ ರ್‍ಯಾಂಕಿಂಗ್‌ ನೀಡುತ್ತಿದೆ. ಕಳೆದ ದೇಶದ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 366ನೇ ಸ್ಥಾನ ಪಡೆದಿದ್ದ ಇಲ್ಲಿನ ಈ ವರ್ಷ ಮಹಾನಗರ ಪಾಲಿಕೆ ಸ್ವಲ್ಪ ಸುಧಾರಣೆ ಕಂಡಿದೆ. ಈ ಬಾರಿ 312ನೇ ಸ್ಥಾನ ಪಾಲಿಕೆಗೆ ದಕ್ಕಿದೆ. ದೇಶಾದ್ಯಂತ 3ರಿಂದ 10 ಲಕ್ಷ ಜನ ಸಂಖ್ಯೆ ಹೊಂದಿರುವ ಒಟ್ಟು 382 ನಗರ ಪೈಕಿ ಕಲಬುರಗಿ ಪಾಲಿಕೆ 312ನೇ ಸ್ಥಾನ ಪಡೆದಿದೆ. ರಾಜ್ಯದ 25 ಪಾಲಿಕೆಗಳ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿ ಇದೆ. ರಾಷ್ಟ್ರ ಮತ್ತು ರಾಜ್ಯಮಟ್ಟ ಎರಡರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಹೋಲಿಕೆ ಮಾಡಿದರೂ ವಿಭಾಗೀಯ ಕೇಂದ್ರವಾದ ಕಲಬುರಗಿಯದ್ದು ಕಳಪೆ ಸಾಧನೆ. ಆದರೆ, ರ್‍ಯಾಂಕಿಂಗ್‌ನಲ್ಲಿ ಸುಧಾರಣೆ ಕಂಡಿರುವುದೇ ಸಮಾಧಾನದ ಸಂಗತಿ. ಬೀದರ ಪಾಲಿಕೆ ರಾಷ್ಟ್ರ ಮಟ್ಟದಲ್ಲಿ 213 ಮತ್ತು ರಾಜ್ಯದಲ್ಲಿ 11ನೇ ಸ್ಥಾನ ಗಳಿಸಿದೆ. ಬಳ್ಳಾರಿ ಪಾಲಿಕೆ ರಾಷ್ಟ್ರ ದಲ್ಲಿ 219 ಹಾಗೂ ರಾಜ್ಯ ಮಟ್ಟದಲ್ಲಿ 16ನೇ ಸ್ಥಾನ ಪಡೆದುಕೊಂಡಿದೆ.

ಹೇಗೆ ಸಿಗುತ್ತದೆ ರ್‍ಯಾಂಕ್‌?: ಸ್ವಚ್ಛ ಸರ್ವೇಕ್ಷಣೆಗೆ ಪ್ರಮುಖವಾದ ನಾಲ್ಕು ಮಾನದಂಡಗಳನ್ನು ಪಾಲಿಸಲಾಗುತ್ತದೆ. ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮತ್ತು ಬಯಲು ಮುಕ್ತ ಶೌಚಾಲಯ ಪ್ರಮುಖವಾದ ಪಾತ್ರ ವಹಿಸುತ್ತದೆ. ನಗರದ  ಸ್ವಚ್ಛತೆ ಬಗ್ಗೆ ಪಾಲಿಕೆ ಅಧಿಕಾರಿಗಳಿಂದ ಕೇಂದ್ರದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಾರೆ. ಯಾರಿಗೂ ಮಾಹಿತಿ ನೀಡದೆ ಖುದ್ದು ನಗರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುತ್ತಾರೆ. ಜತೆಗೆ ಸಾರ್ವಜನಿಕರ ಅಭಿಪ್ರಾಯ ಸಹ ಸಂಗ್ರಹಿಸಲಾಗುತ್ತದೆ. ಪ್ರಸಕ್ತ ಸರ್ವೆಯಲ್ಲಿ 606 ಜನರು ಪಾಲ್ಗೊಂಡು ನಗರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪಾಲಿಕೆ ಹಿನ್ನಡೆಗೆ ಕಾರಣವೇನು?: ಕಲಬುರಗಿ ಪಾಲಿಕೆ ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾಗಿದೆ. ಆದರೆ, ಸ್ವತ್ಛತೆ ವಿಷಯದಲ್ಲಿ ತೀರಾ ಹಿಂದೆ ಉಳಿದಿದೆ. ಒಣ ಕಸ ಮತ್ತು ಹಸಿ ಕಸ ವಿಂಗಡಣೆ ಸರಿಯಾಗಿ ಆಗುತ್ತಿಲ್ಲ. ಹಲವು ಬಡಾವಣೆಗಳಲ್ಲಿ ಇನ್ನೂ ಬಯಲು ಶೌಚಾಲಯ ಇದೆ. ಈ ಎರಡೂ ಸುಧಾರಣೆ ಕಂಡಲ್ಲಿ 100ರೊಳಗೆ ಕಲಬುರಗಿ ಸ್ಥಾನ ಪಡೆಯುವ ನಿರೀಕ್ಷೆ ಮಾಡಬಹುದು ಎಂದು ಹೇಳಲಾಗುತ್ತಿದೆ.

ಗುರುವಾರ ಬಿಡುಗಡೆಗೊಂಡ ಸ್ವಚ್ಛ ಸರ್ವೇಕ್ಷಣೆ ಪಟ್ಟಿಯಲ್ಲಿ ಕಲಬುರಗಿ ಪಾಲಿಕೆ ತುಸು ಏರಿಕೆ ಕಂಡಿದೆ. ಈ ಬಾರಿ 312ನೇ ರ್‍ಯಾಂಕ್‌ ಬಂದಿದ್ದು, ಕಳೆದ ವರ್ಷ 366ನೇ ಸ್ಥಾನದಲ್ಲಿತ್ತು. ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ಬಯಲು ಮುಕ್ತ ಶೌಚಾಲಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ತಾರ್‌ಫೈಲ್‌ ಬಡಾವಣೆಯಲ್ಲಿ 500 ಶೌಚಾಲಯಗಳನ್ನು ಕಟ್ಟಿಸಲಾಗಿದೆ. ಮುಂದಿನ ದಿನಗಳನ್ನು ಮತ್ತಷ್ಟು ಸುಧಾರಣೆಗೆ ಒತ್ತು ನೀಡಲಾಗುತ್ತದೆ.-ರಾಹುಲ್‌ ಪಾಂಡ್ವೆ, ಆಯುಕ್ತರು, ಮಹಾನಗರ ಪಾಲಿಕ

 

-ವಿಶೇಷ ವರದಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.