ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ
Team Udayavani, Apr 21, 2017, 3:28 PM IST
ಕಲಬುರಗಿ: ಡಾ| ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ರೈತ ಸಮ್ಮೇಳನದ ಅಂಗವಾಗಿ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.
ತೊಗರಿಗೆ ಪ್ರತಿ ಕ್ವಿಂಟಾಲ್ಗೆ 7500 ರೂ.ಗಳ ಬೆಂಬಲ ಬೆಲೆ ಘೋಷಿಸಬೇಕು, ರೈತರು ಬೆಳೆದ ಎಲ್ಲ ತೊಗರಿಯನ್ನು ಖರೀದಿಸುವಂತೆ, ಬೆಳೆ ವಿಮೆಯನ್ನುರೈತರಿಗೆ ಅನುಕೂಲವಾಗುವಂತೆ ಜಾರಿಗೆ ತರಬೇಕು, ರೈತರ ಸಾಲ ಮನ್ನಾ ಮಾಡಬೇಕು, ಬಡವರು ಉಳುಮೆ ಮಾಡುತ್ತಿರುವ ಜಮೀನಿನ ಹಕ್ಕುಪತ್ರ ವಿತರಿಸಬೇಕು,
ನರೇಗಾ ಯೋಜನೆಯಡಿ 200 ದಿನಗಳ ಕೆಲಸಕ್ಕಾಗಿ 300 ರೂ.ಗಳ ಕೂಲಿ ಹೆಚ್ಚಿಸಬೇಕು, ಮುಪ್ಪಾದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ 3000 ರೂ. ಮಾಸಾಶನ ನೀಡಬೇಕು, ನಿವೇಶನ ರಹಿತರಿಗೆ ಮನೆ ಹಾಗೂ ನಿವೇಶನ ಒದಗಿಸುವಂತೆ ರೈತರು ಆಗ್ರಹಿಸಿದರು. ನೆಹರೂ ಗಂಜ್ನಲ್ಲಿ ಬಹಿರಂಗ ಸಭೆ ನಡೆಯಿತು.
ಮಾಜಿ ಶಾಸಕ ಶೀÅರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರುತ್ತಿಲ್ಲ. ಉಭಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ನೆಹರೂ ಗಂಜ್ವರೆಗೆ ನಡೆದ ಮೆರವಣಿಗೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಶಾಂತಪ್ಪ ಪಾಟೀಲ, ವಿಠಲ ಆಲಗೂಡೆ, ಮಲ್ಲಣ್ಣಗೌಡ ಪಾಟೀಲ, ಸಿದ್ದಾರ್ಥ ಠಾಕೂರ ಚಿಂಚೋಳಿ, ದೇವಿಂದ್ರಪ್ಪ ಪಾಟೀಲ ಕೊರವಿ, ಲಕೀಪುತ್ರ ಹೇಮಾಜಿ ಆಳಂದ,
ಕಲ್ಯಾಣಿ ತುಕ್ಕಾಣಿ, ಸಾಯಬಣ್ಣ ಗುಡಬಾ ಚಿತ್ತಾಪುರ, ರಸೂಲ್ ಪಟೇಲ್, ಅಶೋಕ ಮ್ಯಾಗೇರಿ, ಗ್ರಾ.ಪಂ.ನೌಕರರ ಸಂಘದ ಅಧ್ಯಕ್ಷ ಬಾಬುರಾವ್ ಧುತ್ತರಗಾಂವ, ಸಿಐಟಿಯುನ ಗಂಗಮ್ಮಾ ಬಿರಾದಾರ, ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಶಾಂತಾ ಘಂಟಿ, ಆನಂದ ಎನ್.ಜೆ., ರಾಮು, ಪವನಕುಮಾರ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್