ಸ್ನಾತಕೋತ್ತರ ಕೇಂದ್ರದ ಲಾಭ ಪಡೆಯಿರಿ


Team Udayavani, Mar 22, 2018, 2:47 PM IST

gul-4.jpg

ಆಳಂದ: ಹಿಂದುಳಿದ ಆಳಂದ ಗಡಿಭಾಗದಲ್ಲಿ ಗುಲಬರ್ಗಾ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನಾಂದಿಯಾಗಿದೆ. ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು ಎಂದು ಗುಲಬರ್ಗಾ ವಿಶ್ವ ವಿದ್ಯಾಲಯ ಪ್ರಭಾರ ಕುಲಪತಿ ಡಾ| ದೇವಿದಾಸ ಮಾಲೆ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಗುಲಬರ್ಗಾ ವಿಶ್ವ ವಿದ್ಯಾಲಯ, ಕಲಬುರಗಿ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ನಾತಕೋತ್ತರ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಜ್ಞಾನ ಆಯೋಗದ ಶಿಫಾರಸಿನಂತೆ ಪ್ರತಿ ಜಿಲ್ಲೆಗೊಂದು ವಿಶ್ವವಿದ್ಯಾಲಯ ಹಾಗೂ ತಾಲೂಕಿಗೊಂದು ಸ್ನಾತಕೋತ್ತರ ಕೇಂದ್ರದ ಬಯಕೆಯಂತೆ, ಸುದೈವಕ್ಕೆ ಶಾಸಕ ಬಿ.ಆರ್‌. ಪಾಟೀಲ ಅವರ ಕೋರಿಕೆಯಂತೆ ಸ್ನಾತಕೋತ್ತರ ಕೇಂದ್ರ ಪ್ರಾರಂಭಗೊಂಡಿದೆ ಎಂದರು.
 
ವಿವಿ ವ್ಯಾಪ್ತಿಯಲ್ಲಿ 560 ಕಾಲೇಜು ಪೈಕಿ ಬೀದರ್‌ 132, ಕಲಬುರಗಿ, ಯಾದಗಿರಿ 306, ರಾಯಚೂರು 122 ಪದವಿ ಕಾಲೇಜುಗಳು ನಡೆಯುತ್ತಿವೆ. ಅಲ್ಲದೆ, ಡಾ| ಬಿ.ಆರ್‌. ಅಂಬೇಡ್ಕರ್‌, ನಿಜಶರಣ ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ ಹೀಗೆ 32 ಅಧ್ಯಯನ ಪೀಠಗಳಿದ್ದು, ವಿವಿ ಕೇಂದ್ರ ವ್ಯಾಪ್ತಿಗೆ ಈಗ ಹೊಸದಾಗಿ ಆಳಂದ ಸೇರ್ಪಡೆಯಾಗಿ ಐತಿಹಾಸಿಕ ಕೆಲಸವಾಗಿದೆ. ಇಲ್ಲಿ ಪ್ರಾರಂಭಿಸಿದ ಸ್ನಾತಕೋತ್ತರ ಕೇಂದ್ರಗಳಲ್ಲಿ ಸ್ಪರ್ಧಾತ್ಮಕವಾಗಿ ಹೊಸ ಕೋರ್ಸ್‌ಗಳು ಸೇರಿ ವೃತಿ ಕೌಶಲ್ಯ ತರಬೇತಿ ಪ್ರಾರಂಭಿಸುವುದು ಅಗತ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿ, ಗಡಿಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವ ಮಹತ್ವದ ಗುರಿ, ಉದ್ದೇಶ ಹೊಂದಿದ್ದು, ತಾಲೂಕಿನ ಜನರಿಗೆ ಆರ್ಥಿಕವಾಗಿ ಯಾವುದೇ ಸಾಧನವಿಲ್ಲ. ಶಿಕ್ಷಣ ಬಿಟ್ಟರೆ ಬೇರೆ ದಾರಿಯೇ ಇಲ್ಲವಾಗಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ಮತ್ತು ವಿವಿ ಕುಲಪತಿಗಳ ಮನವೊಲಿಸಿದಾಗ ಸ್ನಾತಕೋತ್ತರ ಕೇಂದ್ರ ಮಂಜೂರಾಗಿದೆ ಎಂದರು.
 
ಇಂಗ್ಲಿಷ್‌, ಎಂಸಿ, ಎಂಕಾಂ, ಗಣಿತ ವಿಷಯಗಳ ಸ್ನಾತಕೋತರ ತರಬೇತಿ ಪ್ರಾರಂಭಿಸಬೇಕು. ಅಗತ್ಯ ಬಿದ್ದಲ್ಲಿ ಮರಾಠಿ ಮತ್ತು ಉರ್ದು ವಿಭಾಗವನ್ನು ಪ್ರಾರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಬೇಕು ಎಂದು ಶಾಸಕರು ಕುಲಪತಿಗಳಿಗೆ ಮನವಿ ಮಾಡಿದರು. ಗುಲಬರ್ಗಾ ವಿಶ್ವ ವಿದ್ಯಾಲಯ ಕುಲಸಚಿವ ಪ್ರೊ| ದಯಾನಂದ ಅಗಸರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಲಾ ನಿಕಾಯದ ಪರಿಮಳಾ ಅಂಬೇಕರ್‌, ವಿತ್ತಾಧಿ ಕಾರಿ ಪ್ರೊ| ರಾಜನಾಳ್ಕರ್‌ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವ ಪ್ರೊ| ಡಿ.ಎಂ. ಮದರಿ, ಪುರಸಭೆ ಉಪಾಧ್ಯಕ್ಷ ಅಜಗರ ಅಲಿ ಹವಾಲ್ದಾರ, ವಾರ್ಡ್‌ ಸದಸ್ಯ ರಾಮ ಹತ್ತರಕಿ, ಡಿಗ್ರಿ ಕಾಲೇಜು ಪ್ರಾಚಾರ್ಯರಾದ ಡಾ| ಕಾಶಿನಾಥ ಬಿರಾದಾರ, ಡಾ| ಎಸ್‌.ಎಸ್‌. ಪಾಟೀಲ, ಓಂ ಪ್ರಕಾಶ ರಾಜೋಳ, ಸೇಡಂನ ಎಸ್‌. ಎಸ್‌. ದಾಭಾ, ಅಧಿಕಾರಿ ಡಾ| ಸಂಜಯ ರೆಡ್ಡಿ, ಪ್ರೊ| ಶಿವಶರಣಪ್ಪ ಬಿರಾದಾರ ಪಾಲ್ಗೊಂಡಿದ್ದರು.

ವಿವಿ ಸಮಾಜ ವಿಜ್ಞಾನ ನಿಕಾಯದ ಡೀನ್‌ ಪ್ರೊ| ಎಸ್‌.ಪಿ. ಮೇಲಿನಕೇರಿ ಸ್ವಾಗತಿಸಿದರು. ಉಪನ್ಯಾಸಕ ರಮೇಶ ಮಾಡಿಯಾಳ ನಿರೂಪಿಸಿದರು. ಶಿಕ್ಷಣ ನಿಕಾಯದ ಪ್ರೊ| ಸುರೇಖಾ ಕ್ಷೀರಸಾಗರ ವಂದಿಸಿದರು. ಶಿವಶರಣಪ್ಪ ಪೂಜಾರಿ, ಶಂಕರ ಹೂಗಾರ ಸಂಗೀತ ನಡೆಸಿಕೊಟ್ಟರು.

ಈ ಮೊದಲು ಸಾರೋಟದಲ್ಲಿ ಪ್ರಮುಖ ರಸ್ತೆಗಳ ಮೂಲಕ ವಿದ್ಯಾರ್ಥಿನಿಯರು ವಿದ್ಯಾ ಕುಂಬದ ಮೆರವಣಿಗೆ ನಡೆಸಿದರು. ವಿವಿಧ ಕಲಾವಿದರು ಕೈಗೊಂಡ ಸಾಂಸ್ಕೃತಿಕ ನೃತ್ಯ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಕುಲಪತಿಗಳು, ಶಾಸಕರು, ಪ್ರಾಧ್ಯಾಪಕರು ವಿವಿಧ ಪದವಿ ಕಾಲೇಜುಗಳ ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.