ಕ್ಯಾನ್ಸರ್‌ ಕೇಂದ್ರದ ಲಾಭ ಪಡೆಯಿರಿ


Team Udayavani, Nov 16, 2018, 10:45 AM IST

gul-3.jpg

ಕಲಬುರಗಿ: ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗೆ ಬೇಕಾದ ಆತ್ಯಾಧುನಿಕ ಸೌಲಭ್ಯಗಳನ್ನು ನಗರದ ವಿಟಿಎಸ್‌ಎಂ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರಒಳಗೊಂಡಿದ್ದು, ಸರ್ಕಾರ ಮತ್ತು ಸಂಘ-ಸಂಸ್ಥೆಗಳು ಒದಗಿಸುವ ಸೌಕರ್ಯಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಕ್ಯಾನ್ಸರ್‌ ಆಸ್ಪತ್ರೆ ನಿರ್ದೇಶಕ ಡಾ| ಸಿ. ರಾಮಚಂದ್ರ ಹೇಳಿದರು. ನಗರದ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್‌) ಕಟ್ಟಡದ ಹಿಂಭಾಗದಲ್ಲಿರುವ ವಿಠ್ಠಲರಾವ ತುಕಾರಾಂ ಮೆಮೋರಿಯಲ್‌ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರದ ಆವರಣದಲ್ಲಿ ಗುರುವಾರ ಇನ್ಫೋಸಿಸ್‌ ಫೌಂಡೇಶನ್‌ನಿಂದ ಕ್ಯಾನ್ಸರ್‌ ರೋಗಿಗಳು ಮತ್ತವರ ಸಂಬಂಧಿಕರು ತಂಗಲು ಆರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ “ಧರ್ಮಶಾಲೆ’ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. 

ಕ್ಯಾನ್ಸರ್‌ ಕಾಯಿಲೆ ಗುಣಪಡಿಸುವ ಎಲ್ಲ ತರಹದ ಆತ್ಯಾಧುನಿಕ ಯಂತ್ರಗಳು, ಲ್ಯಾಬ್‌ಗಳನ್ನೊಗೊಂಡ ಸುಸಜ್ಜಿತ ಕ್ಯಾನ್ಸರ್‌ ಕೇಂದ್ರ ಇದಾಗಿದೆ. ಹೈ-ಕದಲ್ಲಿ ಬಡವರೇ ಹೆಚ್ಚಾಗಿದ್ದು, ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಉಪಯೋಗವಾಗಲಿ
ಎಂಬ ಮುತುವರ್ಜಿಯಿಂದಲೇ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೇಳಿದರು. 

ಒಳ ರೋಗಿಗಳ 80 ಹಾಸಿಗೆ ಹೊಂದಿರುವ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರಕ್ಕೆ ಲೀನಿಯರ್‌ ಅಕ್ಷಲೇಟರ್‌ ಚಿಕಿತ್ಸೆ, ಸರ್ಜಿಕಲ್‌ ಅಂಕಾಲಾಜಿಸ್ಟ್‌ ವಿಭಾಗ, ಶಸ್ತ್ರಚಿಕಿತ್ಸೆ ವಿಭಾಗ, ವಿಕಿರಣ ವಿಭಾಗ ಮತ್ತು ತಜ್ಞ ವೈದ್ಯರು ಮತ್ತು ಸಿಬ್ಬಂದಿ ಒದಗಿಸಲಾಗಿದೆ. ಆದರೆ, ನಿರೀಕ್ಷಿಸಿದ ಮಟ್ಟದಲ್ಲಿ ಜನರು ಕೇಂದ್ರ ಉಪಯೋಗ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮತ್ತಷ್ಟು ಸೌಲಭ್ಯಗಳನ್ನು ಕೇಂದ್ರಕ್ಕೆ ಕೊಡಿಸುವ ಪ್ರಯತ್ನ ನಡೆಯುತ್ತಿದೆ. ಆದ್ದರಿಂದ ಕೇಂದ್ರದ ಸಿಬ್ಬಂದಿ ಜವಾಬಾರಿ ಯಿಂದ ಬಡವರಿಗೆ ಉಪಯೋಗವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಡಾ| ಸಿ.ರಾಮಚಂದ್ರ ತಾಕೀತು ಮಾಡಿದರು.

ಇನ್ಫೋಸಿಸ್‌ ಫೌಂಡೇಶನ್‌ ಕಾರ್ಯನಿರ್ವಾಹಕ ಉಪಾಧ್ಯಕ್ಷ ಬಿನೋದ ಹಂಪಪುರ ಮಾತನಾಡಿ, ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರಕ್ಕೆ ಬರುವ ರೋಗಿಗಳು ಮತ್ತು ಸಂಬಂಧಿಕರು ಉಳಿದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ 14 ತಿಂಗಳಲ್ಲಿ “ಧರ್ಮಶಾಲೆ’ ನಿರ್ಮಾಣ ಮಾಡಲಾಗಿದೆ. ಕ್ಯಾನ್ಸರ್‌ ರೋಗಿಗಳು ಹೆಚ್ಚಾಗಲಿ ಎಂಬ ಉದ್ದೇಶದಿಂದ ಕಟ್ಟಲಾಗಿಲ್ಲ. ಚಿಕಿತ್ಸೆ ಗೆ ಬರುವ ರೋಗಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಟ್ಟಡ ನಿರ್ಮಾಣ ಮಾಡಲಾಗಿದೆ.

ಎಲ್ಲರೂ ಈ “ಧರ್ಮಶಾಲೆ’ಯನ್ನು ಉಪಯೋಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ವಿಟಿಎಸ್‌ ಎಂ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರದ ಉಸ್ತುವಾರಿ ಡಾ| ಗುರುರಾಜ ದೇಶಪಾಂಡೆ, ಜಿಮ್ಸ್‌ ನಿರ್ದೇಶಕ ಡಾ| ಉಮೇಶ ಎಸ್‌.ಆರ್‌., ಇನ್ಫೋಸಿಸ್‌ ಫೌಂಡೇಶನ್‌ ಖರೀದಿ ವಿಭಾಗದ ಮುಖ್ಯಸ್ಥ ಸಂಜಯ ಭಟ್‌, ಬೆಂಗಳೂರಿನ ಎಂಇ ನಿರ್ಮಾಣ ಸಂಸ್ಥೆಯ ರಮೇಶ, ಡಾ| ವಸಂತ ಹರಸೂರ, ಡಾ| ನವೀನ್‌ ಇದ್ದರು.

ವಿಟಿಎಸ್‌ಎಂ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರದ ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಇರಲಿ. ಅನ್ನ ನೀಡುವ ಸಂಸ್ಥೆ ಹೆತ್ತ ತಾಯಿಗೆ ಸಮಾನ. ಸೇವೆಯಲ್ಲಿ ಬದ್ಧತೆ ಕಳೆದುಕೊಂಡು ತಾಯಿಗೆ ಮೋಸ ಮಾಡಬೇಡಿ. ನಿಮಗೆ ಎಲ್ಲವೂ ಸರಿಯಾಗಿ ಸಿಗುತ್ತಿರುವಾಗ ಕಡಿಮೆಯಾಗಿದ್ದೇನು? ಬಡವರು ನಿಮ್ಮ ಮೇಲೆ ನಂಬಿಕೆ ಇಟ್ಟುಕೊಂಡು ಬರುತ್ತಾರೆ. ಅವರ ನಂಬಿಕೆ ಕಳೆದುಕೊಳ್ಳಬೇಡಿ.
 ಡಾ| ಸಿ. ರಾಮಚಂದ್ರ, ನಿರ್ದೇಶಕ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್‌ ಆಸ್ಪತೆ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.