ತಾಂಡಾ ಮಕ್ಕಳ ಕಲಿಕೆಗಿಲ್ಲ ಅಂಗನವಾಡಿ ಅಂಗಳ

ಗಿಡದ ಕೆಳಗೆ ಆಟವಾಡಿ ಮಣ್ಣಲ್ಲೇ ಮಲಗುತ್ತಿವೆ: ಪೋಷಕರು ಮರಳುವವರೆಗೂ ಆಟವೇ ದಿಕ್ಕು

Team Udayavani, Mar 28, 2022, 10:50 AM IST

3childrens

ವಾಡಿ: ಪೂರ್ವ ಪ್ರಾಥಮಿಕ ಶಿಕ್ಷಣ ಕಲಿಕೆ ಜತೆಗೆ ಮಕ್ಕಳ ದೈಹಿಕ ಆರೋಗ್ಯ ಕಾಪಾಡುವ ಮತ್ತು ಅಪೌಷ್ಟಿಕತೆ ಅಳಿಸುವ ಉದ್ದೇಶದಿಂದ ಸರ್ಕಾರ ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಇಲಾಖೆ ಸ್ಥಾಪಿಸಿದೆ. ಬಡಾವಣೆಗೊಂದು ಅಂಗನವಾಡಿ ಕೇಂದ್ರ ತೆರೆದು ಮಕ್ಕಳಿಗೆ ಪೋಷಕಾಂಶ ಭರಿತ ಆಹಾರ ವಿತರಿಸುತ್ತಿದೆ. ಆದರೆ, ಇದಕ್ಕೆ ಅಪವಾದ ಎಂಬಂತೆ ಚಿತ್ತಾಪುರ ತಾಲೂಕಿನ ತಾಂಡಾವೊಂದರ ಮಕ್ಕಳು ಅಂಗನವಾಡಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಕಮರವಾಡಿ ಗ್ರಾಪಂ ವ್ಯಾಪ್ತಿಯ ಮೌಳಿ ತಾಂಡಾದಲ್ಲಿ ಲಂಬಾಣಿ ಸಮುದಾಯದ ನೂರಾರು ಕುಟುಂಬಗಳು ವಾಸ ಮಾಡುತ್ತಿವೆ. ಕೃಷಿ ಕೆಲಸವನ್ನೇ ಅವಲಂಬಿಸಿರುವ ಇಲ್ಲಿನ ತಾಂಡಾ ಜನರ ಮಕ್ಕಳಿಗಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ತೆರೆಯಲಾಗಿದೆ. ಗ್ರಾಪಂ ಕೇಂದ್ರ ಸ್ಥಾನವಾದ ಕಮರವಾಡಿ ಗ್ರಾಮದಿಂದ ಮೂರು ಕಿ.ಮೀ ಅಂತರದಲ್ಲಿರುವ ಈ ತಾಂಡಾಕ್ಕೆ ಹೋಗಲು ಕಚ್ಚಾ ರಸ್ತೆ ನಿರ್ಮಿಸಲಾಗಿದೆ. ಇಲ್ಲಿ ಆರು ವರ್ಷದೊಳಗಿನ ಸುಮಾರು 30ಕ್ಕೂ ಹೆಚ್ಚು ಮಕ್ಕಳಿರುವುದು ಸ್ಥಳೀಯರಿಂದ ತಿಳಿದುಬಂದಿದೆ.

ಕಿರಿಯ ಪ್ರಾಥಮಿಕ ಶಾಲೆಗೆ ಸೌಲಭ್ಯ ಒದಗಿಸಿಕೊಟ್ಟ ಸರ್ಕಾರ, ಪುಟಾಣಿ ಮಕ್ಕಳ ಅಕ್ಷರ ಕಲಿಕೆಗಾಗಿ ಮತ್ತು ದೈಹಿಕ ಅಪೌಷ್ಟಿಕತೆ ನಿವಾರಣೆಗಾಗಿ ಅಂಗನವಾಡಿ ಕೇಂದ್ರ ತೆರೆಯದೇ ಅನ್ಯಾಯ ಮಾಡಿದೆ. ಬೆಳಗಾದರೆ ಸಾಕು ಪೋಷಕರು ಕಾಯಕ ಬೆನ್ನಟ್ಟಿ ಜಮೀನುಗಳಿಗೆ ಹೋದರೆ, ಆರು ವರ್ಷ ಮೇಲ್ಪಟ್ಟ ಮಕ್ಕಳು ಶಾಲೆಗೆ ಹೋಗುತ್ತಾರೆ. ಇನ್ನುಳಿದ ಐದು ವರ್ಷದೊಳಗಿನ ಮಕ್ಕಳು ತಾಂಡಾ ಪರಿಸರದ ಗಿಡ, ಮರಗಳ ಕೆಳಗೆ ಆಟವಾಡಿ ಮಲಗುತ್ತಿವೆ.

ಮಣ್ಣು -ಮರಳಿನಲ್ಲಿ ಹೊರಳಾಡಿ ಅನಾಥರಂತೆ ಕುಳಿತು ದಿನಗಳೆಯುತ್ತಾರೆ. ಇವರಿಗಾಗಿ ಅಂಗನವಾಡಿ ಕೇಂದ್ರವೊಂದು ಇದ್ದಿದ್ದರೆ ಊಟದ ಜತೆಗೆ ಆಟವನ್ನು ಅಪ್ಪಿಕೊಂಡಿರುತ್ತಿದ್ದರು. ದುರಾದೃಷ್ಟವೆಂದರೆ ಮೌಳಿ ತಾಂಡಾ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕಮರವಾಡಿ ಗ್ರಾಪಂ ಆಡಳಿತವಾಗಲಿ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಕಿಂಚಿತ್ತೂ ಚಿಂತಿಸಿಲ್ಲ.

ಅಂಗನವಾಡಿ ಕೇಂದ್ರ ತೆರೆಯಲು ಎಲ್ಲ ಸಾಧ್ಯತೆಗಳಿದ್ದರೂ ಇಲಾಖೆಗಳು ಮನಸ್ಸು ಮಾಡಿಲ್ಲ. ನಮ್ಮ ಮಕ್ಕಳಿಗೆ ಅಂಗನವಾಡಿ ಸೌಲಭ್ಯ ಯಾಕಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ತಾಂಡಾ ನಿವಾಸಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಬಂಜಾರಾ ಜನಾಂಗದವರೇ ಹೆಚ್ಚಾಗಿ ವಾಸಿಸುವ ಮೌಳಿ ತಾಂಡಾ, ಕಮರವಾಡಿ ಗ್ರಾಮ ಸಮೀಪದಲ್ಲಿದೆ. ಅಲ್ಲಿರುವ ಒಟ್ಟು ಮಕ್ಕಳ ಮಾಹಿತಿ ಸಂಗ್ರಹ ಮಾಡಿದ್ದೇವೆ. 25ರಿಂದ 30 ಮಕ್ಕಳು ಅಂಗನವಾಡಿ ಶಿಕ್ಷಣ ಪಡೆಯಲು ಅರ್ಹರಾಗಿದ್ದಾರೆ. ತಾಂಡಾದಲ್ಲಿ ಅಂಗನವಾಡಿ ಕೇಂದ್ರ ಸ್ಥಾಪಿಸುವ ಅಗತ್ಯವಿರುವುದನ್ನು ಗಮನಿಸಿದ್ದೇನೆ. ಈ ಕುರಿತು ಆರು ತಿಂಗಳ ಹಿಂದೆಯೇ ಮೇಲ ಧಿಕಾರಿಗಳಿಗೆ ಪತ್ರ ಬರೆದು ಮೌಳಿ ತಾಂಡಾ, ಸೂಲಹಳ್ಳಿ ಮತ್ತು ಚಾಮನೂರಿಗೆ ಅಂಗನವಾಡಿ ಕೇಂದ್ರಗಳ ಅತ್ಯವಶ್ಯಕವಿದೆ ಎಂಬುದನ್ನು ವಿವರಿಸಿದ್ದೇನೆ. ಇದಕ್ಕೆ ಇನ್ನೂ ಪ್ರತಿಕ್ರಿಯೆ ಬಂದಿಲ್ಲ. -ಇಂದಿರಾ ಕುಲಕರ್ಣಿ, ಅಂಗನವಾಡಿ ಮೇಲ್ವಿಚಾರಕಿ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.