ತಾಂಡಾಗಳು ಸಾರಾಯಿ ಮುಕ್ತವಾಗಲಿ


Team Udayavani, Feb 5, 2018, 11:11 AM IST

gul-6.jpg

ವಾಡಿ: ಕಳ್ಳಬಟ್ಟಿ ಸಾರಾಯಿ ದಂಧೆಯಿಂದ ತಾಂಡಾಗಳು ಮುಕ್ತವಾಗಬೇಕು. ಲಂಬಾಣಿಗರ ಆರ್ಥಿಕ ಪ್ರಗತಿಗಾಗಿ ಕಸೂತಿ ಕೇಂದ್ರ ತೆರೆದು, ಶಾಲೆಯುಕ್ತ ತಾಂಡಾಗಳನ್ನಾಗಿ ಪರಿವರ್ತಿಸಲು ಸರಕಾರ ಮುಂದಾಗಬೇಕು ಎಂದು ಬಂಜಾರಾ ಸೇವಾ ಸಂಘದ ಸ್ಥಳೀಯ ಘಟಕದ ಅಧ್ಯಕ್ಷ ಶಿವರಾಮ ಪವಾರ ಒತ್ತಾಯಿಸಿದರು. ಪಟ್ಟಣದ ಸೇವಾಲಾಲ ನಗರದ ಭವನದಲ್ಲಿ ಏರ್ಪಡಿಸಲಾಗಿದ್ದ ಸಂತ ಶ್ರೀಸೇವಾಲಾಲ ಮಹಾರಾಜರ 279ನೇ ಜಯಂತ್ಯುತ್ಸವದ
ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಬಂಜಾರಾ ಅಭಿವೃದ್ಧಿ ನಿಗಮ ಸ್ಥಾಪಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಸೇವಾಲಾಲ ಜಯಂತಿಯನ್ನು ಸರಕಾರಿ ಆಚರಣೆಯನ್ನಾಗಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಸ್ಮರಿಸಿದರು.

ಸಾಕಷ್ಟು ತಾಂಡಾಗಳಲ್ಲಿ ಲಂಬಾಣಿ ಜನರು ಉಪಜೀವನ ನಡೆಸಲಾಗದೆ ಪರದಾಡುತ್ತಿದ್ದಾರೆ. ಅವರಿಗಾಗಿ ಗುಡಿ ಕೈಗಾರಿಕೆ ತೆರೆಯಬೇಕು. ಕಸೂತಿ ಕೇಂದ್ರ ಆರಂಭಿಸಬೇಕು. ಒಕ್ಕಲುತನ ಸೌಲಭ್ಯ ಒದಗಿಸಿಕೊಡಬೇಕು. ಕಳೆದ
ಹಲವು ವರ್ಷಗಳಿಂದ ಬೇಡಿಕೆ ಎತ್ತುತ್ತಿದ್ದರೂ ಸರಕಾರಗಳು ಮಾತ್ರ ನಿರ್ಲಕ್ಷ ವಹಿಸಿವೆ ಎಂದು ದೂರಿದ ಶಿವರಾಮ ಪವಾರ, ವಾಡಿ ಪಟ್ಟಣದ ಹೊರ ವಲಯದ ಸೇವಾಲಾಲ ನಗರ ಸಮೀಪವಿರುವ ರೈಲು ನಿಲ್ದಾಣಕ್ಕೆ ಸೇವಾಲಾಲ
ನಿಲ್ದಾಣ ಎಂದು ನಾಮಕರಣ ಮಾಡಬೇಕು. ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ ಹೆಸರಿಡಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಫೆ. 15ರಂದು ಸೇವಾಲಾಲ ಮಹಾರಾಜರ 279ನೇ ಜಯಂತ್ಯುತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ಏರ್ಪಡಿಸಲಾಗಿದೆ. ವಿವಿಧ ತಾಂಡಾಗಳ ಲಂಬಾಣಿ ಜನರು ಪಾಲ್ಗೊಳ್ಳಲಿದ್ದಾರೆ. ಜಗದಂಬಾ ಮಾತೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ಶ್ರೀ ಜೇಮಸಿಂಗ್‌ ಮಹಾರಾಜ, ಬಳಿರಾಮ ಮಹಾರಾಜ, ಶ್ರೀ ಸೋಮಶೇಖರ ಸ್ವಾಮೀಜಿ ಚಿತ್ತಾಪುರ, ಶ್ರೀ ಮುನೀಂದ್ರ ಸ್ವಾಮೀಜಿ, ಸೈಯ್ಯದ್‌ ನುಶ್ರತ್‌ ಶಹಾ ಚಿಸ್ತಿ, ಫಾದರ್‌ ಡೇವಿಡ್‌, ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕ ಉಮೇಶ ಜಾಧವ, ಮಾಜಿ ಶಾಸಕ ವಾಲ್ಮೀಕಿ ನಾಯಕ, ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ಸುಭಾಶ ರಾಠೊಡ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು. 

ಜಯಂತ್ಯುತ್ಸವದ ಅಧ್ಯಕ್ಷ ಗಣೇಶ ಚವ್ಹಾಣ, ಮುಖಂಡರಾದ ರವಿ ಚವ್ಹಾಣ, ರಮೇಶ ಕಾರಬಾರಿ, ರಾಮಚಂದ್ರ ರಾಠೊಡ, ವಿಠ್ಠಲ ನಾಯಕ, ನೀಲಸಿಂಗ ಚವ್ಹಾಣ, ಶಂಕರಸಿಂಗ್‌ ರಾಠೊಡ, ವಿಠuಲ ರಾಠೊಡ, ಚಂದ್ರಾಮ ಚವ್ಹಾಣ, ತುಕಾರಾಮ ರಾಠೊಡ, ಪ್ರಕಾಶ ನಾಯಕ, ಹಣಮಂತ ಚವ್ಹಾಣ ಸೇರಿದಂತೆ ವಿವಿಧ ತಾಂಡಾಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮೋಹನ ಕಾರಬಾರಿ ಬಂಜಾರಾ ಜನಾಂಗ ಬೆಳೆದುಬಂದ ಸಂಕ್ಷಿಪ್ತ ಮಾಹಿತಿ ಓದಿದರು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.