ಜಲಜೀವನ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿ ನೀರು ಪೂರೈಕೆ: ಡಾ| ಅಜಯಸಿಂಗ್
Team Udayavani, Sep 3, 2022, 3:08 PM IST
ಜೇವರ್ಗಿ: ಜಲಜೀವನ ಮಿಷನ್ ಯೋಜನೆಯಡಿ ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ಸೇರಿದಂತೆ ಒಟ್ಟು 64 ಹಳ್ಳಿಗಳಿಗೆ ಮನೆ-ಮನೆಗೆ ನಲ್ಲಿ ನೀರು ಪೂರೈಸಲಾಗುತ್ತಿದೆ ಎಂದು ಶಾಸಕ ಡಾ|ಅಜಯಸಿಂಗ್ ಹೇಳಿದರು.
ತಾಲೂಕಿನ ಹಂದನೂರ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿ ಮನೆ-ಮನೆಗೆ ನಲ್ಲಿ ನೀರು ಪೂರೈಕೆ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ತರವಾಗಿದ್ದು, ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹಂದನೂರ ಗ್ರಾಮದಲ್ಲಿ ಈ ಯೋಜನೆಯಡಿ 402 ಮನೆಗಳಿಗೆ ಕುಡಿಯುವ ನೀರು ಕಲ್ಪಿಸಲು 1.43ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಈ ಯೋಜನೆಯಡಿ 64 ಹಳ್ಳಿಗಳನ್ನು ತೆಗೆದುಕೊಳ್ಳಲಾಗಿದೆ. ಹಲವಾರು ಕಡೆ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನುಳಿದೆಡೆ ಪ್ರಗತಿ ಹಂತದಲ್ಲಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ರಾಜಶೇಖರ ಸೀರಿ, ಕಾಶಿರಾಯಗೌಡ ಯಲಗೋಡ, ಬಸಣ್ಣಗೌಡ ಮಾಲಿಪಾಟೀಲ, ಗ್ರಾ.ಪಂ ಅಧ್ಯಕ್ಷೆ ಗೌರಮ್ಮ ಶಾಂತಪ್ಪ, ಉಪಾಧ್ಯಕ್ಷ ತಿಪ್ಪಣ್ಣ ಕರಕಿಹಳ್ಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ಮಾಳಿಂಗರಾಯ, ಕಿರಿಯ ಅಭಿಯಂತರ ಅಜಮೀರ ಅಲಿ, ಮಲ್ಲಪ್ಪ, ಹಣಮಂತ, ಮಲ್ಲಪ್ಪ ಕರಕಿಹಳ್ಳಿ, ಬಾಷಾ ಪಟೇಲ್ ಬಣಮಗಿ, ರುಕುಂ ಪಟೇಲ ಪೊಲೀಸ್ ಪಾಟೀಲ, ಅಹ್ಮದ್ ಅಲಿ ಹಳ್ಳಿ, ಲಾಲಸಾಬ್ ಜೇರಟಗಿ, ಚಂದರಶೇಖರ ನೇರಡಗಿ, ರಾಜಶೇಖರ ಮುತ್ತಕೋಡ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್