ಸುಂಕ ಪಡೆದು ಸೌಲಭ್ಯ ನೀಡದ ಜಿವಿಆರ್‌


Team Udayavani, Aug 11, 2017, 4:13 PM IST

sedam.jpg

ಸೇಡಂ: ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ಸರಿಯಾದ ನಿರ್ವಹಣೆ ಇಲ್ಲದೆ ತಗ್ಗು, ದಿನ್ನೆಗಳ ನಿರ್ಮಾಣ. ಆದರೆ ಸುಂಕ ಮಾತ್ರ ಬಿಡಂಗಿಲ್ಲ. ರಸ್ತೆ ಪಕ್ಕ ನಿರ್ಮಿಸಿದ ಗೂಡಂಗಡಿಗಳ ಪೈಕಿ ಒಬ್ಬೊಬ್ಬರಿಗೆ ಒಂದೊಂದು ಷರತ್ತು. ಇದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ
ನಿಗಮದಡಿ ವಾಗ್ಧಾರಿಯಿಂದ ರಿಬ್ಬನಪಲ್ಲಿವರೆಗೆ ನಿರ್ಮಿಸಿದ ರಸ್ತೆಯನ್ನು ನಿರ್ವಹಿಸುವ ಜಿವಿಆರ್‌ ಇನ್ಫ್ರಾನವರ ಕಾರ್ಯವೈಖರಿ ಒಂದು ಝಲಕ್‌. ಮಹಾರಾಷ್ಟ್ರದ ವಾಗ್ಧಾರಿಯಿಂದ ತೆಲಂಗಾಣದ ರಿಬ್ಬನಪಲ್ಲಿವರೆಗೆ 120 ಕಿಮೀ ರಸ್ತೆ ನಿರ್ಮಿಸಿರುವ ಜಿವಿಆರ್‌ ಇನ್ಫ್ರಾ ಪ್ರೈವೇಟ್‌ ಲಿಮಿಟೆಡ್‌ ಎಂಬ ಗುತ್ತಿಗೆ ಕಂಪನಿ ಪ್ರತಿನಿತ್ಯ ಲಕ್ಷಾಂತರ ರೂ. ಟೋಲ್‌ ವಸೂಲಿ ಮಾಡುತ್ತಿದೆ. ಆದರೆ ರಸ್ತೆಯನ್ನು
ಸರಿಯಾದ ನಿಟ್ಟಿನಲ್ಲಿ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ಎಡವಿದೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಡಿ ರಸ್ತೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇದ್ದ ಪಕ್ಷದಲ್ಲಿ ಟೋಲ್‌ ಸಹ ವಸೂಲಿ ಮಾಡುವಂತಿಲ್ಲ. ಆದರೆ ನೀಲಹಳ್ಳಿ, ಹೂಡಾ ಗೇಟ್‌, ಆಡಕಿ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳ ರಾಜ್ಯ ಹೆದ್ದಾರಿಯಲ್ಲಿ ತಗ್ಗು, ದಿನ್ನೆಗಳು ನಿರ್ಮಾಣಗೊಂಡಿವೆ. ಅಲ್ಲದೆ ರಸ್ತೆಯಲ್ಲಿ
ಪ್ರಯಾಣಿಸುವಾಗ ಹಡಗಿನಲ್ಲಿ ಪ್ರಯಾಣಿಸಿದ ಅನುಭವವಾಗುತ್ತಿದೆ ಎಂಬುದು ನಿತ್ಯ ಸಂಚಾರಿಗಳ ದೂರಾಗಿದೆ. ಅಲ್ಲದೆ ರಾಜ್ಯ ಹೆದ್ದಾರಿ ಯಿಂದ 150 ಮೀ. ದೂರದಲ್ಲಿ ಗೂಡಂಗಡಿಯಾಗಲಿ, ಹೋಟೆಲ್‌ ಅಥವಾ ಯಾವುದೇ ವ್ಯಾಪಾರ ನಡೆಸಲು ಅನುಮತಿ ಪಡೆಯಬೇಕು. ಆದರೆ ವಾಗ್ಧಾರಿಯಿಂದ ರಿಬ್ಬನಪಲ್ಲಿವರೆಗೆ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಅನೇಕ ಗೂಡಂಗಡಿಗಳು ತಲೆ ಎತ್ತಿವೆ. ಜಿವಿಆರ್‌ ಅಧಿಕಾರಿಗಳು ಮಾತ್ರ ಬೆರಳೆಣಿಕೆಯಷ್ಟು ಅಂಗಡಿಗಳಿಗೆ ಸೂಚನೆ ನೀಡಿ ಒಂದು ಕಣ್ಣಿಗೆ ಸುಣ್ಣ ಮತ್ತೂಂದು ಕಣ್ಣಿಗೆ ಬೆಣ್ಣೆ ಸವರುವ ಕೆಲಸ ಮಾಡುತ್ತಿದ್ದಾರೆ. ಅಂಬುಲೆನ್ಸ್‌ ಸೇವೆ ಎಂದರೆ ?: ರಾಜ್ಯ ಹೆದ್ದಾರಿ ಸುರಕ್ಷತೆ ದೃಷ್ಟಿಯಿಂದ ರಸ್ತೆಯನ್ನು ನಿರ್ವಹಿಸುವ
ಗುತ್ತಿಗೆ ಕಂಪನಿಗಳು ಅಂಬುಲೆನ್ಸ್‌ ಸೇವೆ ಕಲ್ಪಿಸಬೇಕು. ಆದರೆ ಜಿವಿಆರ್‌ ಮಾತ್ರ ನಾಮಕಾವಾಸ್ತೆ ಎಂಬಂತೆ ಅಂಬುಲೆನ್ಸ್‌ ಸೇವೆ ಒದಗಿಸುತ್ತಿದೆ. ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಬಹುತೇಕ ಅಪಘಾತಗಳಲ್ಲಿ ಸರ್ಕಾರದ ಅಂಬುಲೆನ್ಸ್‌ಗಳೇ ಹೆಚ್ಚು ಸೇವೆ ನೀಡಿವೆ.
ಶೌಚಾಲಯ ಎಲ್ಲಿ?: ರಾಜ್ಯ ಹೆದ್ದಾರಿಗಳಲ್ಲಿ ಬೃಹತ್‌ ಗಾತ್ರದ ವಾಹನಗಳ ಚಾಲಕರ ಅನುಕೂಲಕ್ಕೆಂದು ಲಾರಿ ಯಾರ್ಡ್‌ ಹೆಸರಿನಲ್ಲಿ
ಹೆಚ್ಚಿನ ರಸ್ತೆ ನಿರ್ಮಿಸಲಾಗುತ್ತದೆ. ಅದರಲ್ಲಿ ಸೂಕ್ತ ರೀತಿಯ ಶೌಚಾಲಯವನ್ನು ಕಲ್ಪಿಸಬೇಕು. ಅದರಂತೆ ಮೊದಲಿಗೆ ಜಿವಿಆರ್‌ ಶೌಚಾಲಯ ನಿರ್ಮಿಸಿದ್ದು, ಮೂರೇ ತಿಂಗಳಲ್ಲಿ ನೆಲಕಚ್ಚಿದೆ. ಒಟ್ಟಾರೆಯಾಗಿ ರಸ್ತೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಪ್ರಯಾಣಿಕರಿಂದ ಟೋಲ್‌ ವಸೂಲಿ ಮಾಡುತ್ತಿರುವ ಜಿವಿಆರ್‌ ಇನ್ಫ್ರಾ ಪ್ರೈ.ಲಿ. ವಿರುದ್ಧ ಜನ ಹಿಡಿಶಾಪ ಹಾಕುತ್ತಿದ್ದಾರೆ.

ಶಿವಕುಮಾರ ಬಿ. ನಿಡಗುಂದಾ 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.