ದಿಗ್ಗಾಂವ ಮಠದ ಬಾವಿಯಲ್ಲಿ ಬಿದ್ದು ಶಿಕ್ಷಕಿ ಸಾವು
Team Udayavani, Mar 27, 2022, 11:29 AM IST
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಆವರಣದಲ್ಲಿನ ಬಾವಿಯಲ್ಲಿ ಬಿದ್ದು ಅತಿಥಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.
ಭೂಮಿಕಾ ಶರಣಪ್ಪ ಊಡಗಿ (26) ಮೃತಪಟ್ಟ ಮಹಿಳೆ. ದಿಗ್ಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದ ಭೂಮಿಕಾ ಅವರು, ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರ ಆಪ್ತಸಹಾಯಕರಾಗಿ ಕೆಲಸ ಮಾಡುತ್ತಿದ್ದ ಶರಣಪ್ಪ ಊಡಗಿ ಎನ್ನುವರ ಪತ್ನಿ ಎಂದು ತಿಳಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಹೋದ ಭೂಮಿಕಾ ವಾಪಸ್ ಬರಲಿಲ್ಲ. ಅತ್ತ ಶಾಲೆಗೂ ಹೋಗಿರಲಿಲ್ಲ. ಈ ಬಗ್ಗೆ ಮನೆಯ ಅಕ್ಕಪಕ್ಕದವರನ್ನು ವಿಚಾರಿಸಿದಾಗ, ಮಠದ ಹತ್ತಿರ ಹೋಗಿರುವ ವಿಷಯ ತಿಳಿಯಿತು. ಮಠದ ಆವರಣದಲ್ಲಿರುವ ಬಾವಿ ಬಳಿ ಅವರ ಚಪ್ಪಲಿಗಳು ಪತ್ತೆಯಾದವು. ಅಲ್ಲದೇ ಬಾವಿಗೆ ಅಳವಡಿಸಿದ್ದ ತಂತಿ ಜಾಲಿ ಕೂಡ ತೆರೆದುಕೊಂಡಿತ್ತು. ಇದರಿಂದ ಅನುಮಾನಗೊಂಡು ಹುಡುಕಿದಾಗ ಭೂಮಿಕಾ ಅವರ ಶವ ದೊರೆಯಿತು ಎಂದು ಚಿತ್ತಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.
ಭೂಮಿಕಾ ಅವರ ತವರು ಮನೆಯವರು ಬರುವವರೆಗೂ ಕಾಯ್ದ ಪೊಲೀಸರು, ನಂತರ ಮರಣೋತ್ತರ ಪರೀಕ್ಷೆಗೆ ದಿಗ್ಗಾಂವನ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ತದನಂತರ ಬೀದರ್ ಜಿಲ್ಲೆಯ ಹಾರಕೂಡದಿಂದ ದಿಗ್ಗಾಂವ ಗ್ರಾಮಕ್ಕೆ ಬಂದ ಪಾಲಕರು ಮಗಳ ಶವ ಪಡೆದರು.
ಭೂಮಿಕಾ ಅವರಿಗೆ ಮದುವೆಯಾಗಿ ಆರು ವರ್ಷವಾಗಿತ್ತು. ಆದರೆ ಮಕ್ಕಳು ಆಗಿರಲಿಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ