ದೊಡ್ಡಪ್ಪಅಪ್ಪ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
Team Udayavani, Sep 8, 2018, 10:20 AM IST
ಕಲಬುರಗಿ: ಜೀವನದಲ್ಲಿ ತಂದೆ, ತಾಯಿ ಮತ್ತು ಗುರು ಮುಖ್ಯ. ಆದ್ದರಿಂದ ಅವರನ್ನು ಸದಾ ಗೌರವಿಸಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಬಿ.ಡಿ. ಕಲಬುರಗಿ ಹೇಳಿದರು.
ನಗರದ ದೊಡ್ಡಪ್ಪ ಅಪ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಗುವಿಗೆ ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ
ಗುರು. ವಿದ್ಯೆ ಕಲಿಸುವ ಶಿಕ್ಷಕ ಕರುಣಾಮಯಿ ಆಗಿರುತ್ತಾನೆ ಎಂದರು.
ಶರಣಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಣಿ ಶಾಸ್ತ್ರಾ ವಿಭಾಗದ ಮುಖ್ಯಸ್ಥ ಡಾ| ರಾಮಕೃಷ್ಣರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮ್ರಾಣಿ ವ್ಯಕ್ತಿತ್ವ ವಿಕಸನದ ತರಬೇತಿ ನೀಡಿದರು. ಪ್ರಾಚಾರ್ಯ ವಿನೋದಕುಮಾರ ಎಲ್. ಪತಂಗೆ ಅಧ್ಯಕ್ಷೀಯ ನುಡಿಗಳನ್ನಾಡಿದರು. ಅರ್ಚನಾ ಎಸ್.ಪಿ. ನಿರ್ವಹಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಹಾಜರಿದ್ದರು. ಕುಮಾರಿ ಪೂಜಾ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಕುಮಾರಿ ವೈಷ್ಣವಿ ಪಾಟೀಲ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ