ಶಿಕ್ಷಕರು-ಪ್ರಾಚಾರ್ಯರಾಗಿ ಪಾಠ ಮಾಡಿದ ಮಕ್ಕಳು
Team Udayavani, Sep 8, 2017, 12:40 PM IST
ಕಲಬುರಗಿ: ನಗರದ ಶರಣಬಸವೇಶ್ವರ ರೆಸಿಡೆನ್ಸಿಯಲ್ ಪಬ್ಲಿಕ್ ಶಾಲೆ (ಎಸ್.ಬಿ.ಆರ್)ಯಲ್ಲಿ ವಿಶಿಷ್ಠ ರೀತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳೇ ಎಲ್ಲ ಜವಾಬ್ದಾರಿ ವಹಿಸಿಕೊಂಡಿದ್ದರು. ವಿದ್ಯಾರ್ಥಿಗಳೇ ತಮ್ಮ ಕಿರಿಯ ವಿದ್ಯಾರ್ಥಿಗಳ ತರಗತಿಗಳಿಗೆ ಹೋಗಿ ತಮ್ಮ ಮೆಚ್ಚಿನ ವಿಷಯದ ಪಾಠ ಮಾಡಿದರು. ಶಿಕ್ಷಕರು ಪ್ರೇಕ್ಷಕರಾಗಿದ್ದರು.
ವಿದ್ಯಾರ್ಥಿಗಳೇ ಪ್ರಾಚಾರ್ಯರಾಗಿ, ಶಿಕ್ಷಕರಿಗಾಗಿ ಕೆಲಸ ಮಾಡಿದರು. ಆಡಳಿತ ಜವಾಬ್ದಾರಿಯ ಅರಿವು ವಿದ್ಯಾರ್ಥಿಗಳಲ್ಲಿ
ಮೂಡಲೆಂಬುದೇ ಇದರ ಮೂಲ ಉದ್ದೇಶ ಎಂಬುದಾಗಿ ತಿಳಿಸಲಾಯಿತು.
ಶಾಲೆಯ ಎಲ್ಲಾ ಕಾರ್ಯ ವಿಧಾನಗಳೆಲ್ಲವನ್ನು ವಿದ್ಯಾರ್ಥಿಗಳೇ ನಡೆಸಿಕೊಟ್ಟರು. ಬೆಳಗ್ಗೆ ಶಾಲೆ ಪ್ರಾರಂಭವಾಗುತ್ತಲೇ
ವಿದ್ಯಾರ್ಥಿಗಳೇ ತಾವೇ ಆಯ್ಕೆ ಮಾಡಿಕೊಂಡಿದ್ದ ತರಗತಿಗಳಿಗೆ ತೆರಳಿದರು. ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಶಿಕ್ಷಕರ ಮೆಚ್ಚುಗೆಗೂ ಪಾತ್ರರಾದರು. ನಂತರ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಿತು.
ವಿದ್ಯಾರ್ಥಿಗಳು ಡಾ| ಎಸ್.ರಾಧಾಕೃಷ್ಣನ್ ಅವರ ಸಾಧನೆಗಳ ಮೇಲೆ ಬೆಳಕು ಚೆಲ್ಲಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ಸಹ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಯಾಗಿದ್ದ ಭಾಲ್ಕಿ ಸಂಸ್ಥಾನ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ವಿ.ಎ. ಪಾಟೀಲ ಮಾತನಾಡಿ, ಮಕ್ಕಳಲ್ಲಿ ಮೌಲ್ಯಗಳನ್ನು ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಶೈಕ್ಷಣಿಕ ಅರ್ಹತೆಗಿಂತಲೂ ಜ್ಞಾನ ಅಗತ್ಯವಾಗಿದೆ.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ತಯಾರಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ ಎಂದರು. ನಿವೃತ್ತ ಇಂಗ್ಲಿಷ್ ಉಪನ್ಯಾಸಕಿ ಶಶಿಕಲಾ ಲಾಖೆ ಅವರನ್ನು ಸತ್ಕರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಶಾರದಾ ರಾಂಪುರೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ನಾಯಕ ಆದಿತ್ಯ ಮದರಿ ಮತ್ತು ವಿದ್ಯಾರ್ಥಿ ನಾಯಕಿ ಶ್ರೇಯಾ ಚಿಂತಿ ಮುಂತಾದವರಿದ್ದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ವೀರೇಂದ್ರ ಡೆಂಗೆ, ಅನನ್ಯಾ ಪೂಜಾರಿ ನಿರೂಪಿಸಿದರು. ಶಿಕ್ಷಕರಾದ ವಿಶ್ವೇಶ್ವರ
ಹೊನಗುಂಟಿಕರ್, ಜಿ.ಕೆ. ಪ್ರಸಾದ, ಶಂಭುಲಿಂಗಪ್ಪ, ಅನಿಲಕುಮಾರ, ನಂದಾ ಪಾಟೀಲ, ಸುರೇಖಾ ಖೇಣಿ,
ಸಂಗೀತಾ ಸಾಹು, ಮೇಘಲತಾ ಬಿರಾದಾರ, ದಿಗಂಬರ ಕುಲಕರ್ಣಿ, ಚಂದ್ರಲೇಖಾ, ಸುಗಂಧಾ ಪ್ರಸಾದ, ಕೋಮಲಾ
ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ