ಕಲಬುರಗಿಯಲ್ಲಿ ಒಂದೇ ದಿನ 10 ಜನರಿಗೆ ಕೋವಿಡ್: ಶತಕದ ಗಡಿದಾಟಿದ ಸೋಂಕಿತರ ಸಂಖ್ಯೆ!
Team Udayavani, May 17, 2020, 1:49 PM IST
ಕಲಬುರಗಿ: ದೇಶದಲ್ಲೇ ಕೋವಿಡ್-19 ಸೋಂಕಿಗೆ ಮೊದಲು ಬಲಿಯಾದ ಕಲಬುರಗಿಯಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ರವಿವಾರ ಒಂದೇ ದಿನ ಹತ್ತು ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.
ಈಗಾಗಲೇ ಕೋವಿಡ್ ಹೆಮ್ಮಾರಿಯಿಂದ ತತ್ತರಿಸಿರುವ ಕಲಬುರಗಿಯಲ್ಲಿ ಮಹಾರಾಷ್ಟ್ರದ ಮುಂಬೈನಿಂದ ಬಂದ ವಲಸಿಗರಿಂದಲೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರವಿವಾರ ಸೋಂಕು ಪತ್ತೆಯಾದ 10 ಜನರಲ್ಲಿ ಆರು ಜನರು ಮುಂಬೈಯಿಂದ ಬಂದವರಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಅತ್ಯಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೊದಲು ಒಂದು ದಿನಕ್ಕೆ ಅತಿ ಹೆಚ್ಚು ಎಂದರೆ ಎಂಟು ಜನರಿಗೆ ಸೋಂಕು ಪತ್ತೆಯಾಗಿತ್ತು.
ಮಕ್ಕಳಿಗೂ ಸೋಂಕು: ಮುಂಬೈಯಿಂದ ಮರಳಿದ ಆರು ಜನ ಸೋಂಕಿತರ ಪೈಕಿ ಮೂವರು ಮಕ್ಕಳೂ ಸೇರಿದ್ದು, ಆತಂಕ ಹೆಚ್ಚಿಸುವಂತೆ ಮಾಡಿದೆ.
ಜಿಲ್ಲೆಯ ವಿವಿಧ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 10 ವರ್ಷದ ಬಾಲಕ (ಪಿ-1131), 36 ವರ್ಷದ ಪುರುಷ (ಪಿ-1133), 13 ವರ್ಷದ ಬಾಲಕ (ಪಿ-1135), 7 ವರ್ಷದ ಬಾಲಕ (ಪಿ-1136), 40 ವರ್ಷದ ಪುರುಷ (ಪಿ-1137) ಮತ್ತು 55 ವರ್ಷದ ಪುರುಷ (ಪಿ-1138)ನಿಗೆ ಸೋಂಕು ದೃಢಪಟ್ಟಿದೆ.
ವೃದ್ಧನಿಂದ ಮತ್ತಿಬ್ಬರಿಗೆ: ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ಮೇ 11ರಂದು ಮೃತಪಟ್ಟ 60 ವರ್ಷದ ವೃದ್ಧ (ಪಿ-927) ಸಂಪರ್ಕದಿಂದಲೂ ಮತ್ತೆ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 55 ವರ್ಣದ ಪುರುಷ (ಪಿ-1132) ಹಾಗೂ 50 ವರ್ಷದ ಮಹಿಳೆ (ಪಿ-1134)ಗೆ ಹರಡಿದೆ.
ಇನ್ನೊಂದು ಪ್ರಕರಣದಲ್ಲಿ ಕಂಟೈನ್ಮೆಂಟ್ ಝೋನ್ ಸಂಪರ್ಕಕ್ಕೆ ಬಂದ 55 ವರ್ಷದ ಪುರುಷ (ಪಿ-1130)ನಿಗೆ ಕೋವಿಡ್ ಕಾಣಿಸಿಕೊಂಡಿದೆ. ಮತ್ತೊಂದು ಪ್ರಕರಣದಲ್ಲಿ 35 ವರ್ಷದ ಪುರುಷ (ಪಿ-1129)ನಿಗೆ ಸೋಂಕು ಪತ್ತೆಯಾಗಿದ್ದು, ಈತನಿಗೆ ಹೇಗೆ ಸೋಂಕು ಹರಡಿತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ
ಒಟ್ಟು 104 ಕೋವಿಡ್ ಸೋಂಕಿತರಲ್ಲಿ 47 ಜನರು ಗುಣಮುಖರಾಗಿದ್ದಾರೆ. 7 ಸೋಂಕಿತರು ಮಹಾಮಾರಿಗೆ ತುತ್ತಾಗಿದ್ದಾರೆ. ಉಳಿದಂತೆ 50 ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ