ರೈತರ ಮಕ್ಕಳ ಕೋಟಾ ಸೀಟಿಗೆ ಪರೀಕ್ಷೆ


Team Udayavani, Jun 18, 2021, 6:51 PM IST

Test for quota

ಕಲಬುರಗಿ: ಮಹತ್ವದ ಇಂಜಿನಿಯರಿಂಗ್‌, ಬಿಎಸ್ಸಿ ಕೃಷಿ (ಕೃಷಿ ವಿಜ್ಞಾನ)ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಿಇಟಿಪರೀಕ್ಷೆ ಗೊಂದಲದ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಬಿಎಸ್ಸಿ ಕೃಷಿ, ಪಶು ಸಂಗೋಪನಾ ಹಾಗೂ ತೋಟಗಾರಿಕೆ ಸೇರಿ ಇತರ ಕೋರ್ಸುಗಳಲ್ಲಿ ರೈತರ ಮಕ್ಕಳಿಗೆ ಶೇ. 40ರಷ್ಟು ಮೀಸಲಾತಿ ಸೀಟುಗಳಿಗೆ ಪರೀಕ್ಷೆ ನಡೆಸಲು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿಗೆ ಮುಂಚೆರೈತರ ಮಕ್ಕಳ ಕೋಟಾದಡಿ ಸೀಟುಗಳಿಗೆ ಈ ಹಿಂದಿನಿಂದಲೂ ಪರೀಕ್ಷೆ ನಡೆಸಿ, ಈ ಫ‌ಲಿತಾಂಶದೊಂದಿಗೆ ಸಿಇಟಿ ಫ‌ಲಿತಾಂಶಆಧರಿಸಿ ರ್‍ಯಾಂಕ್‌ ಪ್ರಕಟಿಸುತ್ತಾ ಬರಲಾಗುತ್ತಿದೆ.ಆದರೆ ಕಳೆದ ವರ್ಷ ಈ ಪರೀಕ್ಷೆಯನ್ನೇರದ್ದುಪಡಿಸಲಾಗಿತ್ತು.

ಪ್ರಸಕ್ತ ವರ್ಷ ಪರೀಕ್ಷೆ ನಡೆಸುವುದನ್ನು ಚಾಲ್ತಿಗೆ ತರಲಾಗಿದೆ.ಬಿಎಸ್ಸಿ ಕೃಷಿ, ಪಶು ಸಂಗೋಪನಾಹಾಗೂ ತೋಟಗಾರಿಕಾ ಪದವಿಗಳಪ್ರವೇಶಾತಿಯಲ್ಲಿ ಶೇ. 25ರಷ್ಟು ಸಿಇಟಿ ಅಂಕ,ಶೇ. 25ರಷ್ಟು ಪಿಯುಸಿಯಲ್ಲಿನ ವಿಷಯಗಳ ಥೇರಿಅಂಕಗಳನ್ನು ಪರಿಗಣಿಸಿದರೆ ಇನ್ನುಳಿದ ಶೇ. 50ರಷ್ಟು ಅಂಕಗಳನ್ನುರೈತರ ಮಕ್ಕಳಿಗೆ ಪ್ರಾತ್ಯಕ್ಷಿಕವಾಗಿ(ಪ್ರಾಯೋಗಿಕ) ಪರೀಕ್ಷೆ ನಡೆಸಿ ಅಂಕಗಳನ್ನು ನಿಗದಿ ಮಾಡಲಾಗುತ್ತದೆ.ಆದರೆ ಕಳೆದ ವರ್ಷ ಮಾತ್ರ ರೈತರ ಮಕ್ಕಳ ಕೋಟಾ ಪರೀಕ್ಷೆಯನ್ನೇರದ್ದು ಮಾಡಲಾಗಿತ್ತು. ಕೊವಿಡ್‌-19 ಹಿನ್ನೆಲೆಯಲ್ಲಿ ಪ್ರಾಯೋಗಿಕಪರೀಕ್ಷೆಯನ್ನೇ ನಡೆಸಿರಲಿಲ್ಲ.

ಪರೀಕ್ಷೆ ರದ್ದಾದ ಕುರಿತು ಕಳೆದ2020ರ ಆಗಸ್ಟ್‌ 21ರಂದು “ಉದಯವಾಣಿ’ಯಲ್ಲಿ ವಿಶೇಷ ವರದಿಪ್ರಕಟಿಸಲಾಗಿತ್ತು. ಪರೀಕ್ಷೆ ರದ್ದಾಗಿರುವುದಕ್ಕೆ ರೈತ ವಲಯದಿಂದ ತೀವ್ರಆಕ್ರೋಶ ವ್ಯಕ್ತವಾಗಿತ್ತು. ಆದರೆ ಈ ವರ್ಷದಿಂದ ಮತ್ತೆ ಪರೀಕ್ಷೆ ಜಾರಿಗೆತರಲಾಗಿದೆ.ರೈತರ ಮಕ್ಕಳು ನಗರ ಪ್ರದೇಶದಲ್ಲಿ ಓದುತ್ತಿದ್ದಾರೆ. ಆದರೆ ಗ್ರಾಮೀಣಭಾಗದಲ್ಲಿದ್ದುಕೊಂಡು ಪಿಯುಸಿಯಲ್ಲಿ ಉತ್ತಮ ಫ‌ಲಿತಾಂಶಪಡೆದಿರುವ ಮಕ್ಕಳು ವಿವಿಗಳು ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿಕೃಷಿ ಉಪಕರಣಗಳು, ರಸಗೊಬ್ಬರ ಸೇರಿ ಕೃಷಿಗೆ ಸಂಬಂಧಿಸಿದಂತೆ ಎಲ್ಲಮಾಹಿತಿಯನ್ನು ಸರಳವಾಗಿ ಹೇಳುತ್ತಾರೆ. ಆದರೆ ನಗರದಲ್ಲಿದ್ದುಕೊಂಡುಓದಿದ ಮಕ್ಕಳಿಗೆ ಕಷ್ಟವಾಗುತ್ತದೆ.

ರೈತರ ಮಕ್ಕಳಿಗೆ ಅನುಕೂಲವಾಗಲೆಂದೇನಿಯಮ ಹಾಗೂ ಕಾನೂನು ಜಾರಿಗೆ ತರಲಾಗಿದೆ. ಆದರೆ ಕಳೆದ ವರ್ಷಅನೇಕ ಕಾರಣಗಳನ್ನು ನೀಡಿ ಪರೀಕ್ಷೆ ರದ್ದುಪಡಿಸಲಾಗಿತ್ತು. ಈ ವರ್ಷಸಿಇಟಿ ನಡೆಸುವ ಮುಂಚೆಯೇ ರೈತರ ಮಕ್ಕಳ ಕೋಟಾದಡಿ ಪರೀಕ್ಷೆನಡೆಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯಾದ್ಯಂತ ರೈತ ಮಕ್ಕಳಿಗೆ ಸುಮಾರು ಮೂರು ಸಾವಿರ ಬಿಎಸ್ಸಿ ಕೃಷಿ, ಪಶು ಹಾಗೂ ತೋಟಗಾರಿಕಾಪದವಿಗಳ ಸೀಟುಗಳು ಸಿಗಲಿವೆ.ಕಳೆದ ವರ್ಷ ರದ್ದಾದ ಮಕ್ಕಳ ಕೋಟಾದ ಸೀಟುಗಳಿಗೆ ಈ ವರ್ಷಪರೀಕ್ಷೆ ನಡೆಸಲು ಮುಂದಾಗಿರುವುದಕ್ಕೆ ರೈತರು ಹಾಗೂ ಬಿಎಸ್ಸಿ ಕೃಷಿ,ಪಶು ಸಂಗೋಪನಾ ಹಾಗೂ ತೋಟಗಾರಿಕೆ ಪದವಿ ಪ್ರವೇಶಾತಿಬಯಸಿರುವ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.