ಅಧಿಕಾರಿಗಳ ಗೈರು: ಬಸವಾಭಿಮಾನಿಗಳು ಆಕ್ರೋಶ
Team Udayavani, Apr 21, 2017, 3:30 PM IST
ಜೇವರ್ಗಿ: ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಗುರುವಾರ ಬಸವ ಜಯಂತಿ ನಿಮಿತ್ತ ತಹಶೀಲ್ದಾರ ಯಲ್ಲಪ್ಪ ಸುಬೇದಾರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಪಂ ಅಧಿಕಾರಿಗಳು ಹೊರತುಪಡಿಸಿ ತಾಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಗೈರು ಹಾಜರಾಗಿದ್ದರು.
ಇದಕ್ಕೆ ತಹಶೀಲ್ದಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಸವಾಭಿಮಾನಿಗಳು, ಸರ್ಕಾರ ಶರಣರ, ಸಂತರ ಜಯಂತಿ ಆಚರಿಸುತ್ತಿದೆ. ಆದರೆ ತಾಲೂಕು ಮಟ್ಟದಲ್ಲಿ ನಡೆಯುವ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಆಗಮಿಸುತ್ತಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ಹೊರತುಪಡಿಸಿ ಬೇರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸದೇ ನಿರ್ಲಕ್ಷ ವಹಿಸುತ್ತಿದ್ದಾರೆ.
ತಾಲೂಕು ಅಡಳಿತಕ್ಕೆ ಸಹಕಾರ ನೀಡಬೇಕಾದ ಅಧಿಕಾರಿಗಳು ಬೇಜವಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ. ಸಮಾನತೆ ಹರಿಕಾರ ವಿಶ್ವಗುರು ಬಸವಣ್ಣನವರಿಗೆ ಅಧಿಕಾರಿಗಳು ಅಗೌರವ ತೋರುತ್ತಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರಗೆ ಆಗ್ರಹಿಸಿದರು.
ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಿದಾಗ ಮಾತ್ರ ಪೂರ್ವಭಾವಿ ಸಭೆ ಆಯೋಜಿಸಿ. ಇಲ್ಲದಿದ್ದರೇ ನಾಮಕಾವಾಸ್ತೆ ಸಭೆ ಮಾಡಬೇಡಿ ಎಂದು ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ಧೇವಾಡಗಿ ಆಕ್ರೋಶವ್ಯಕ್ತಪಡಿಸಿದರು. ತಹಶೀಲ್ದಾರ ಯಲ್ಲಪ್ಪ ಸುಬೇದಾರ ಮಾತನಾಡಿ, ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು.
ಅಲ್ಲದೇ ಶೀಘ್ರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಆಯೋಜಿಸಿ ಜಯಂತಿಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗುವುದು. ಅಲ್ಲದೇ ಎಲ್ಲ ಬಸವಾಭಿಮಾನಿಗಳ ಹಾಗೂ ಸಮಾಜದ ಮುಖಂಡರ ಕೈಗೊಂಡ ನಿರ್ಣಯದಂತೆ ಏ. 29ರಂದು ಬೆಳಗ್ಗೆ 9:00ಕ್ಕೆ ಬಸವೇಶ್ವರ ವೃತ್ತದ ಬಳಿ ಧ್ವಜಾರೋಹಣ ನಂತರ ತಹಶೀಲ್ದಾರ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಕಾರ್ಯಕ್ರಮ ನಡೆಲಾಗುವುದು ಎಂದು ಹೇಳಿದರು.
ಗ್ರೇಡ್-2 ತಹಶೀಲ್ದಾರ ಶರಣಬಸಪ್ಪ ಮುಡುಬಿ, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಶಿವಪೂಜೆ, ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ದು ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಪ್ರವೀಣಕುಮಾರ ಕುಲಕರ್ಣಿ, ಕಸಾಪ ಅಧ್ಯಕ್ಷ ಶಿವಣಗೌಡ ಹಂಗರಗಿ, ಬಸವ ಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಬಾಪುಗೌಡ ಬಿರಾಳ, ಚಂದ್ರಶೇಖರ ಸೀರಿ, ಮಹಾಂತಗೌಡ ಚನ್ನೂರ,
ನೀಲಕಂಠ ಅವಂಟಿ, ಭೋವಿ ಸಮಾಜದ ಅಧ್ಯಕ್ಷ ಶಿವುಕುಮಾರ ಗುತ್ತೇದಾರ, ಅಬ್ದುಲ್ ರಹೇಮಾನ ಪಟೇಲ್, ದಲಿತ ಮುಖಂಡರಾದ ಮಲ್ಲಣ್ಣ ಕೊಡಚಿ, ಸಿದ್ರಾಮ ಕಟ್ಟಿ, ರವಿ ಕುಳಗೇರಿ, ಈಡಿಗ ಸಮಾಜದ ಅಧ್ಯಕ್ಷ ದೇವಿಂದ್ರ ಗುತ್ತೇದಾರ, ರವಿ ಕೋಳಕೂರ, ಸುನೀಲ ಸಜ್ಜನ, ಯಶವಂತ್ರಾಯ ಸಂಕಾ, ಬಸವರಾಜ ಜಮಶೆಟ್ಟಿ, ಸಂತೋಷ ಮಲ್ಲಾಬಾದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ