ಸಂವಿಧಾನ ವಿರೋಧಿ ಹೇಳಿಕೆ ಅಜ್ಞಾನಿಗಳದ್ದು: ಶರಣಪ್ರಕಾಶ


Team Udayavani, Jan 26, 2018, 12:29 PM IST

gul-5.jpg

ಚಿಂಚೋಳಿ: ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಬರೆದ ಸಂವಿಧಾನವನ್ನು ಇಡೀ ಜಗತ್ತೇ ಒಪ್ಪಿಕೊಂಡಿದ್ದು, ಪ್ರಜಾಪ್ರಭುತ್ವ ಗಟ್ಟಿಯಾಗಿರುವುದು ಕೇವಲ ಸಂವಿಧಾನದಿಂದಲೆ. ನಮ್ಮ ದೇಶದ ಸಂವಿಧಾನದ ಬಗ್ಗೆ ಗೊತ್ತಿಲ್ಲದ ಅಜ್ಞಾನಿಗಳು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಪರಿಜ್ಞಾನವೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಗುರುವಾರ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ಯಾವುದೇ ಒಂದು ವರ್ಗಕ್ಕೆ ಸೀಮಿತರಾದವರಲ್ಲ. ಅವರು ಎಲ್ಲ ಶೋಷಿತ ವರ್ಗದ ಮಹಾನ್‌ ನಾಯಕರಾಗಿದ್ದಾರೆ. ದೌರ್ಜನ್ಯ ಮತ್ತು ಅಸಮಾನತೆ ವಿರುದ್ಧ ಸಾಕಷ್ಟು ಹೋರಾಟ ಮಾಡಿದ್ದಾರೆ. ಸಂವಿಧಾನ ರಚಿಸುವುದಕ್ಕಾಗಿ ಅನೇಕ ದೇಶಗಳಲ್ಲಿ ಇರುವ ಸಂವಿಧಾನವನ್ನು ಹಗಲು ರಾತ್ರಿ ಕಷ್ಟಪಟ್ಟು ಓದಿ ನಮ್ಮದೇ ಆಗಿರುವ ಸಂವಿಧಾನ ರಚಿಸಿದ್ದಾರೆ. ಆದರೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನವನ್ನು ಬದಲಾಯಿಸಲು ನಾವು ಆಯ್ಕೆಗೊಂಡು ಬಂದಿದ್ದೇವೆ ಎಂದು ಹೇಳಿದ್ದಾರೆ.

ಕಲಬುರಗಿ ನಗರಕ್ಕೆ ಬಂದಾಗ ನಾಲಾಯಕ ಎಂಬ ಪದ ಬಳಸಿ ಮಾತನಾಡಿದ್ದಾರೆ ಬಹುಶಃ ಅವರು ಬಿಜೆಪಿ ನಾಯಕರೇ ನಾಲಾಯಕ ಆಗಿರಬಹುದೆಂದು ಹೀಗೆ ಮಾತನಾಡಿರಬಹುದು ಎಂದು ಟೀಕಿಸಿದರು.

ಪ್ರವಾಸೋದ್ಯಮ ಸಚಿವ ಡಾ| ಪ್ರಿಯಾಂಕ್‌ ಖರ್ಗೆ ಮಾತನಾಡಿ, ದೇಶದ ಮಹಾನ್‌ ನಾಯಕ ಆಗಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಅವರನ್ನು ದಲಿತ ನಾಯಕನೆಂದು ಬಿಂಬಿಸುತ್ತಾ ಬರುತ್ತಿದ್ದೇವೆ. ಸಂವಿಧಾನದ ಬಗ್ಗೆ ಕೆಲವರು
ಬಹಳಷ್ಟು ಹಗುರವಾಗಿ ಮಾತನಾಡುತ್ತಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ, ಆರ್‌.ಅಶೋಕ ಯಾರೂ ಈ ಕುರಿತು ಚಕಾರ ಎತ್ತಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಸದೀಯ ಕಾರ್ಯದರ್ಶಿ ಡಾ| ಉಮೇಶ
ಜಾಧವ್‌ ಮಾತನಾಡಿ ಡಾ| ಬಿ.ಆರ್‌. ಅಂಬೇಡ್ಕರ್‌ ಮತದಾನ ಹಕ್ಕು ನೀಡದಿದ್ದರೆ ಪ್ರಜಾಪ್ರಭುತ್ವ ಜೀವಂತ ಇರುತ್ತಿರಲಿಲ್ಲ ಎಂದರು.

ಸಂಘಾನಂದ ಬಂತೇಜಿ ಬುದ್ಧ ವಂದನೆ ಹೇಳಿದರು. ಜಿಪಂ ಮಾಜಿ ಅಧ್ಯಕ್ಷ ಭೀಮರಾವ್‌ ತೇಗಲತಿಪ್ಪಿ ಮಾತನಾಡಿದರು. ಹಸರಗುಂಡಿ ಗ್ರಾಪಂ ಅಧ್ಯಕ್ಷ ಶಾಂತಕುಮಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಗೌತಮ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ, ಸಂಜೀವ ಮೇತ್ರಿ, ಗೋಪಾಲರಾವ್‌ ಕಟ್ಟಿಮನಿ, ಪ್ರಭು ಲೇವಡಿ, ತಾಪಂ ಅದ್ಯಕ್ಷೆ ರೇಣುಕ ಚವ್ಹಾಣ ಇದ್ದರು. ರಾಮಣ್ಣ ಗೌತಮ ಸ್ವಾಗತಿಸಿದರು, ಜಗದೇವ ಗೌತಮ ನಿರೂಪಿಸಿದರು, ಕಾಶಿನಾಥ ಸಿಂಧೆ ವಂದಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.