ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದವರ ಬಂಧನ


Team Udayavani, Jul 30, 2018, 10:21 AM IST

gul-2.jpg

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿ 65 ವರ್ಷದ ವೃದ್ಧೆ ಮೇಲೆ ಜು.26ರಂದು ಸಂಜೆ ಅತ್ಯಾಚಾರ ನಡೆಸಿ, ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು 48 ಗಂಟೆಯಲ್ಲಿ ಮಾಡಬೂಳ ಪೊಲೀಸರು ಬಂಧಿಸಿದ್ದಾರೆ. ಸೇಡಂ ತಾಲೂಕಿನ ಸೂರವಾರ್‌ ಗ್ರಾಮದ ಮಲ್ಲಪ್ಪ ಈಶ್ವರಪ್ಪ ತಳವಾರ (26), ದಂಡೋತಿ ಗ್ರಾಮದ ಗಜೇಂದ್ರ ಶಿವಶರಣಪ್ಪ ಬಲಮದೇವರ (24) ಬಂಧಿತ ಆರೋಪಿಗಳು.

ಇಬ್ಬರು ಗುರುವಾರ ಮಧ್ಯಾಹ್ನ ಗ್ರಾಮದ ಹೊರವಲಯದಲ್ಲಿ ಕಂಠ ಪೂರ್ತಿ ಮದ್ಯ ಕುಡಿದಿದ್ದರು. ಇದೇ ಹೊತ್ತಿನಲ್ಲಿ ಹೊಲದ ಕೆಲಸ ಮುಗಿಸಿ ತಲೆ ಮೇಲೆ ಉರುವಲು ಕಟ್ಟಿಗೆಯ ಸಣ್ಣ ಮೂಟೆ ಹೊತ್ತುಕೊಂಡು ಮರಳಿ ಮನೆಗೆ ಬರುತ್ತಿದ್ದ 65ರ ವೃದ್ಧೆಯನ್ನು ಎಳೆದಾಡಿ ರಸ್ತೆಯ ಪಕ್ಕದಲ್ಲಿನ ತೆಗ್ಗಿನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಮಲ್ಲಪ್ಪ ಈಶ್ವರಪ್ಪ ತಳವಾರ ಶುಕ್ರವಾರ ಬೆಳಗ್ಗೆ ಗ್ರಾಮದ ಹೊರವಲಯದಲ್ಲಿ ಕೊಳವೆ ಬಾವಿ ಹತ್ತಿರ ರಕ್ತಸಿಕ್ತವಾದ ಮತ್ತು ಕೆಸರು ತಗುಲಿದ ಬಟ್ಟೆ ತೊಳೆದುಕೊಳ್ಳುತ್ತಿರುವುದನ್ನು ಗ್ರಾಮದ ಯುವಕರು ನೋಡಿದ್ದರು. ನಂತರ ಎಲ್ಲಿ ನನ್ನನ್ನು ಹಿಡಿಯುವರೋ ಎನ್ನುವ ಭಯದಿಂದ ಓಡಲು ಶುರು ಮಾಡಿದ್ದ.

ಈತನೇ ಕೊಲೆ ಮಾಡಿರಬೇಕು ಎಂದು ಶಂಕಿಸಿ ಯುವಕರು ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು. ಕೂಡಲೇ ಅಲ್ಲಿಂದ ಓಡಿ ಹೋದ ಆರೋಪಿ ಗ್ರಾಮದ ಕಾಗಿಣಾ ನದಿಯ ಹುಲ್ಲಿನಲ್ಲಿ ಅಡಗಿ ಕುಳಿತುಕೊಂಡಿದ್ದ. ಸ್ಥಳಕ್ಕೆ ಆಗಮಿಸಿದ ಮಾಡಬೂಳ ಪಿಎಸ್‌ಐ ಹುಸೇನ್‌ ಬಾಷಾ ಕೂಡಲೇ ಮಳಖೇಡ ಗ್ರಾಮದ ಹಂದಿ ಹಿಡಿಯುವರನ್ನು ಕರೆಯಿಸಿ ಸಿಬ್ಬಂದಿಯೊಂದಿಗೆ ಸಂಜೆವರೆಗೆ ಹುಡುಕಾಟ ನಡೆಸಿದ್ದರು. ಗ್ರಾಮದ ನೂರಾರು ಜನರು ಆರೋಪಿಯ ಹುಡುಕಾಟಕ್ಕೆ ಪೊಲೀಸರಿಗೆ ಸಾಥ್‌ ನೀಡಿದರು.

ಪೊಲೀಸರು ಸಿಡಿ ಮದ್ದು ಸಿಡಿಸಿ ಕಾರ್ಯಚರಣೆ ನಡೆಸಿದರು. ಆದರೆ, ನದಿಯಲ್ಲಿ ದಟ್ಟವಾಗಿ ಬೆಳೆದ ಜೇಕು ಮತ್ತು ಹುಲ್ಲಿನಲ್ಲಿ ಅಡಗಿ ಕುಳಿತ ಆರೋಪಿ ರಾತ್ರಿ ಹೊತ್ತಿನಲ್ಲಿ ಮಳಖೇಡ ಸಮೀಪದ ಬ್ರಿಡ್ಜ್ ಮೇಲಿಂದ ಸೇಡಂ ತಾಲೂಕಿನ ಸೂರವಾರ್‌ ಗ್ರಾಮಕ್ಕೆ ಹೋಗಿದ್ದ. ಆರೋಪಿ ಗ್ರಾಮಕ್ಕೆ ಬರುತ್ತಿದ್ದಂತೆ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಬಂಧಿಸಿದರು. ಇನ್ನೊಬ್ಬ ಆರೋಪಿ ಗಜೇಂದ್ರ ದಂಡೋತಿ ಗ್ರಾಮದಲ್ಲೇ ಸೆರೆಸಿಕ್ಕಿದ್ದಾನೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಹೆಚ್ಚುವರಿ ಎಸ್ಪಿ ಜಯಪ್ರಕಾಶ, ಶಹಾಬಾದ ಡಿವೈಎಸ್ಪಿ ಕೆ. ಬಸವರಾಜ ಮಾರ್ಗದರ್ಶನದಲ್ಲಿ ಸಿಪಿಐ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಡಿ.ಬಿ ಕಟ್ಟಿಮನಿ ನೇತೃತ್ವದಲ್ಲಿ ಮಾಡಬೂಳ ಪಿಎಸ್‌ಐ ಹುಸೇನ್‌ ಬಾಷಾ ಅವರು ಸಿಬ್ಬಂದಿಗಳಾದ ಜಗನ್ನಾಥ ಪಾಟೀಲ, ಬಸಲಿಂಗಪ್ಪ, ರೌಫ್‌, ಮಂಜುನಾಥ ಕಾಶಿ, ಮಹ್ಮದ್‌ ಗೌಸ್‌, ವಿಠ್ಠಲ್‌ ಆರೋಪಿಗಳನ್ನು ಬಂಧಿ ಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಡಬೂಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿ ಪರಾಯಾಗಿದ್ದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುಡಿದ ಅಮಲಿನಲ್ಲಿ ಅತ್ಯಾಚಾರವೆಸಗಿ ವೃದ್ಧೆಯನ್ನು ಕೊಲೆ ಮಾಡಿದ್ದಾರೆ.
 ಹುಸೇನ್‌ ಬಾಷಾ ಮಾಡಬೂಳ, ಪಿಎಸ್‌ಐ

ಗ್ರಾಮದ ಹೊರವಲಯದಲ್ಲಿ ಹೊಲದ ಕೆಲಸ ಮುಗಿಸಿಕೊಂಡು ಬರುತ್ತಿದ್ದ 65ರ ವೃದ್ಧೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ವಿಷಯ ತಿಳಿದು ಗ್ರಾಮದಿಂದ ಹೊಲಗಳಿಗೆ ಹೋಗುವ ಜನರು ಭಯಭೀತರಾಗಿದ್ದರು. ಪೊಲೀಸರು ಆರೋಪಿಗಳನ್ನು ಹಿಡಿದಿದ್ದರಿಂದ ನಿಟ್ಟುಸಿರು ಬಿಡುವಂತಾಗಿದೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕು.
 ಅಬ್ದುಲ್‌ ಹಮೀದ್‌ ಯಾದಗಿರಿ, ದಂಡೋತಿ ಗ್ರಾಮದ ನಿವಾಸಿ

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.