ಕಲಾತ್ಮಕ ಚಿತ್ರ ಉದ್ಯಮ ಉಳಿಸೀತು:ತುಳಜಾರಾಮ


Team Udayavani, Aug 22, 2017, 10:40 AM IST

gul 3.jpg

ಕಲಬುರಗಿ: ಮೊಬೈಲ್‌ಗ‌ಳು, ಸಣ್ಣ ಕ್ಯಾಮರಾಗಳು ಮತ್ತು ಡಿಜಿಟಲೀಕರಣ ಬಂದ ಮೇಲೆ ಸ್ಟುಡಿಯೋ ಮತ್ತು ಛಾಯಾಗ್ರಾಹಕರ ಉದ್ಯಮ ಸಂಕಷ್ಟದಲ್ಲಿದೆ ಎನ್ನುವವರು ಸ್ವಲ್ಪ ತಮ್ಮ ಕೆಲಸದಲ್ಲಿ ಕಲಾತ್ಮಕತೆ, ಭಾವನಾತ್ಮಕತೆ
ರೂಢಿಸಿಕೊಂಡರೆ ಚಿತ್ರ ಉದ್ಯಮ ಉಳಿದೀತು ಎಂದು ವಾರ್ತಾ ಇಲಾಖೆ ಛಾಯಾಗ್ರಾಹಕ ತುಳಜಾರಾಮ ಪವಾರ ಅಭಿಪ್ರಾಯಪಟ್ಟರು. ನಗರದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಛಾಯಾಚಿತ್ರ ತೆಗೆಯುವುದು ಈಚೆಗೆ ತುಂಬಾ ಸುಲಭದ ಕೆಲಸವಾಗಿದೆ. ಆದರೆ, ಭಾವನಾತ್ಮಕ ಮತ್ತು ಕಲಾತ್ಮಕ ಚಿತ್ರ ಸೆರೆ ಹಿಡಿದು ಸೃಷ್ಟಿಯಲ್ಲಿನ ಚೆಲವನ್ನು ನೋಡುಗರಿಗೆ ಉಣಬಡಿಸುವುದು ಪತ್ರಿಕಾ ಛಾಯಾಗ್ರಾಹಕರಿಗೆ ಕಷ್ಟದ ಕೆಲಸ. ಸದಾ ಸುದ್ದಿ
ಹಿಂದೆ ಬೀಳುವ ಪತ್ರಿಕಾ ಛಾಯಾಗ್ರಾಹಕರು ತಾಳ್ಮೆಯಿಂದ ಸಮಯದ ಹಿಂದೆ ಓಡಿಕೊಂಡು ಕಲಾತ್ಮಕ ಚಿತ್ರ ತೆಗೆಯುವುದು ಸವಾಲಿನ ಕೆಲಸ. ಆದರೂ ಅದರ ಮಧ್ಯೆ ಅವರನ್ನು ಹಾಗೂ ಅವರ ಚಿತ್ರಕಲೆಯನ್ನು ಇಂತ
ಚಿತ್ರಗಳೇ ಬಹಳದಿನಗಳ ಕಾಲ ನೆನಪಿನಲ್ಲಿ ಉಳಿಯುವಂತೆ ಮಾಡುತ್ತವೆ ಎಂದು ಹೇಳಿದರು. ಒಂದು ವೇಳೆ ಫೋಟೋಗ್ರಫಿ ಎನ್ನುವುದು ಇಲ್ಲದೆ ಇದ್ದರೆ ನಾವು ಕೆಲವು ವಿಷಯ ಮತ್ತು ಘಟನೆಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಇರುತ್ತಿರಲಿಲ್ಲ. 1839ರಲ್ಲಿ ಮೊಟ್ಟ ಮೊದಲ ಬಾರಿಗೆ ಲೀಸ್‌ ಡಬ್ರೆ ಪ್ರಾನ್ಸ್‌ನಲ್ಲಿ ಛಾಯಾಚಿತ್ರ ಸೆರೆ ಹಿಡಿದ ದಿನವನ್ನೇ ಇಂದಿಗೂ ಛಾಯಾಚಿತ್ರಗಾರರ ದಿನವನ್ನಾಗಿ 178 ವರ್ಷಗಳಿಂದ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಾಪೌರ ಶರಣಕುಮಾರ ಮೋದಿ, ಫೋಟೋಗ್ರಾಫರ್‌ ಮತ್ತು ಫೋಟೋಗ್ರಫೀ ಎರಡು ತುಂಬಾ ಮುಖ್ಯವಾಗಿವೆ. ಇವತ್ತು ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಫೋಟೋಗ್ರಾಫರ್‌ಗಳ ಶ್ರಮವೂ ಕಾರಣವಾಗಿವೆ. ಅವರು ನನ್ನನ್ನು ಬೆಳೆಸಿದ್ದಾರೆ ಎಂದು ಧನ್ಯವಾದ ಹೇಳಿದ ಅವರು, ಪತ್ರಕರ್ತರ ಸಂಘದಿಂದ ನಿರ್ಮಾಣಗೊಳ್ಳುತ್ತಿರುವ ಪತ್ರಿಕಾಭವನದಲ್ಲಿ 10ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು. ಚೈತನ್ಯಮಯೀ ಆರ್ಟ್‌ ಗ್ಯಾಲರಿಯ ಎ.ಎಸ್‌. ಪಾಟೀಲ ಮಾತನಾಡಿ, ಪತ್ರಿಕಾ ಛಾಯಾಗ್ರಾಹಕರ ಉದ್ಯಮ ಈಗ ಕವಲು ದಾರಿಯಲ್ಲಿದೆ. ಒಂದೆಡೆ ವ್ಯವಹಾರ ಇನ್ನೊಂದೆಡೆ ಕಲಾತ್ಮಕತೆ. ಇವರೆಡರ ಮಧ್ಯದಲ್ಲಿ ಛಾಯಾಗ್ರಾಹಕರ ಸಂಕಷ್ಟವೂ ಹೆಚ್ಚುತ್ತಿದೆ. ದೈನಂದಿನ ಚಟುವಟಿಕೆ, ಕರ್ತವ್ಯದ ಮಧ್ಯೆ ಛಾಯಾಗ್ರಾಹಕರು ಒಂದಷ್ಟು ಕಲಾತ್ಮಕತೆ ಚಿತ್ರಗಳನ್ನು ಸೆರೆ ಹಿಡಿದು ಜನರಿಗೆ ಕೊಟ್ಟರೆ, ಚಿತ್ರಾನುಭವ ದಕ್ಕಲಿದೆ. ಇಲ್ಲಿ 60 ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಆದರೆ, 10-15 ಚಿತ್ರಗಳು ಮಾತ್ರವೇ ಸ್ವಲ್ಪ ಗಮನ ಸೆಳೆಯುತ್ತವೆ. ಅದರಂತೆ ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ಪತ್ರಿಕಾ ಛಾಯಾಗ್ರಾಹಕರು ಕೊಡಲು ಸಾಧ್ಯವಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ, ಪತ್ರಿಕಾ ಛಾಯಾಗ್ರಾಹಕರ ಮಹತ್ವ ವಿವರಿಸಿದರು. ಸಂಘದ ಕಾರ್ಯದರ್ಶಿ ಶಿವರಂಜನ ಸತ್ಯಂಪೇಟೆ ಸ್ವಾಗತಿಸಿದರು. ಬಾಬುರಾವ ಕೋಬಾಳ ಪ್ರಾರ್ಥನೆ ಹಾಡಿದರು. ಪತ್ರಿಕಾ ಛಾಯಾಗ್ರಾಹಕ ರಾಜು ಉದನೂರು ಕಾರ್ಯಕ್ರಮ ನಿರೂಪಿಸಿದರು. ಸುರೇಶ ಬಡಿಗೇರ ವಂದಿಸಿದರು. ಈ ವೇಳೆಯಲ್ಲಿ ಛಾಯಾಚಿತ್ರಗಾರರಾದ ತುಳಜಾರಾಮ ಪವಾರ ಅವರನ್ನು ಸನ್ಮಾನಿಸಲಾಯಿತು. ದೇವೇಂದ್ರಪ್ಪ ಕಪನೂರು, ಛಾಯಾಚಿತ್ರಕಾರ ಆಯಾಜ್‌ ಇನ್ನೂಹಲವರು ಇದ್ದರು. ಬಳಿಕ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಛಾಯಾಚಿತ್ರಗಳನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.