ಬಿಜೆಪಿ ಬಂದರೆ ಮಾಲಿಕಯ್ಯ ಮಂತ್ರಿ


Team Udayavani, Apr 21, 2018, 3:04 PM IST

g4-bjp.jpg

ಕಲಬುರಗಿ: ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಪಕ್ಷಕ್ಕೆ ಆಗಮಿಸಿದ್ದರಿಂದ ಆನೆಬಲ ಬಂದಂತಾಗಿದೆ. ಅವರು ಬಿಜೆಪಿಗೆ ಬರುವುದಾಗಿ ವರ್ಷದ  ಮೊದಲೇ ಹೇಳಿದ್ದರು. ಮಧ್ಯಂತರ ಚುನಾವಣೆ ಮಾಡಿ ಜನರಿಗೆ ಹೊರೆ ಮಾಡುವುದು ಬೇಡ ಎಂದು ನಾನೇ ಹೇಳಿದ್ದೆ. 

ಹೀಗಾಗಿ ಈಗ ಪಕ್ಷಕ್ಕೆ  ಸೇರ್ಪಡೆಗೊಂಡು ಅಭ್ಯರ್ಥಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುತ್ತದೆ. ನಾನು ಮುಖ್ಯಮಂತ್ರಿಯಾಗುತ್ತೇನೆ. ನನ್ನ ಮೊದಲ ಸಂಪುಟದಲ್ಲಿ  ಮಾಲಿಕಯ್ಯ ಗುತ್ತೇದಾರ ಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಪಟ್ಟಣದ ಜಾಗಿರದಾರ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲಿಕಯ್ಯ ಗುತ್ತೇದಾರ ಪಕ್ಷಕ್ಕೆ ಬರುವ ವಿಚಾರ  ಎಂ.ವೈ. ಪಾಟೀಲ್‌ ಅವರಿಗೂ ತಿಳಿದಿತ್ತು. ಮೂರು ಬಾರಿ ಸೋತರೂ ಹಿರಿಯರು ಎನ್ನುವ ಕಾರಣಕ್ಕೆ ಎಂ.ವೈ. ಪಾಟೀಲ್‌ ಅವರಿಗೆ ಗೌರವ ನೀಡಿ,  ಸ್ಥಾನಮಾನ ನೀಡುವುದಾಗಿ ತಿಳಿಸಿದ್ದೆವು. 

ಆದರೆ ಅವರು ಮಾಲಿಕಯ್ಯ ಗುತ್ತೇದಾರ ಆಗಮನವಾಗುತ್ತಿದ್ದಂತೆ ಪಕ್ಷ ತೊರೆದು ತಮ್ಮ ಕಾಲಿನ ಮೇಲೆ ತಾವೇ  ಕಲ್ಲು ಹಾಕಿಕೊಂಡಿದ್ದಾರೆ ಎಂದು ಹೇಳಿದರು. ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಮನೆಯಲ್ಲೇ ಜಗಳ ಹಚ್ಚುವ ಕುತಂತ್ರಿಗಳು  ಕಾಂಗ್ರೆಸ್ಸಿಗರು.

ನನ್ನ ಸಹೋದರರ ಮನ ಕೆಡಿಸುವ ಪ್ರಯತ್ನ ಮಾಡಿದ್ದರು. ಆದರೆ ನಾವು ಜೇನಿನ ಗೂಡಿನಂತೆ ಸದಾ ಒಂದಾಗಿದ್ದೇವೆ. ಸ್ವಾರ್ಥ  ರಾಜಕಾರಣ, ಪುತ್ರ ವ್ಯಾಮೋಹ, ಹಿಂದುಳಿದ ವರ್ಗಕ್ಕೆ ಅನ್ಯಾಯ ಹೀಗೆ ಅನೇಕ ಕಾರಣಗಳಿಂದ ಕಾಂಗ್ರೆಸ್‌ ಪಕ್ಷ ತ್ಯಜಿಸಿದ್ದೇನೆ. ಈ ಬಾರಿ ಹೈಕ ಭಾಗ  ಕಾಂಗ್ರೆಸ್‌ ಮುಕ್ತವಾಗುವುದು ನಿಶ್ಚಿತ ಎಂದರು. 

ಮುಖಂಡ ಬಿ.ಜಿ. ಪುಟ್ಟಸ್ವಾಮಿ, ರಾಜಕುಮಾರ ಪಾಟೀಲ್‌ ತೆಲ್ಕೂರ, ದೊಡ್ಡಪ್ಪಗೌಡ ಪಾಟೀಲ, ಅವ್ವಣ್ಣ  ಮ್ಯಾಕೇರಿ, ಅಶೋಕ ಬಗಲಿ, ಮಲ್ಲಿಕಾರ್ಜುನ ನಿಂಗದಳ್ಳಿ, ಶೈಲೇಶ ಗುಣಾರಿ, ಶೋಭಾ ಬಾಣಿ, ಬಸವರಾಜ ಸಪ್ಪನಗೋಳ, ರಮೇಶ ನೀಲಗಾರ, ಚಂದಮ್ಮ  ಪಾಟೀಲ್‌, ಡಾ| ಜ್ಯೋತಿ, ವಿಶ್ವನಾಥ ರೇವೂರ, ನಿತೀನ್‌ ಗುತ್ತೇದಾರ, ಬಿ.ವೈ. ಪಾಟೀಲ್‌, ಶಿವಪುತ್ರಪ್ಪ ಕರೂರ, ರಾಜಶೇಖರ ಹಿರೇಮಠ, ಪಾಶಾ ಮಣೂರ, ಶ್ರೀಶೈಲ ಬಳೂರ್ಗಿ ಇದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.