ಕಾಂಗ್ರೆಸ್ ವಿಜಯೋತ್ಸವ: ಗೆದ್ದವರ ಸಂಭ್ರಮಾಚರಣೆ
Team Udayavani, Apr 10, 2017, 3:28 PM IST
ವಾಡಿ: ಪಟ್ಟಣದ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಸಂಭ್ರಮ ಮುಗಿಲು ಮುಟ್ಟಿತು.
ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಯ ತೀವ್ರ ಪೈಪೋಟಿ ಮಧ್ಯೆ ಜಯಭೇರಿ ಬಾರಿಸಿದ ವಾರ್ಡ್ 13ರ ನೇತಾಜಿ ನಗರದ ಬಿಜೆಪಿ ಅಭ್ಯರ್ಥಿ ಭೀಮಶಾ ಜಿರೋಳಿ ಕಣ್ಣೀರು ಸುರಿಸಿ ಬೆಂಬಲಿಗರನ್ನು ಅಪ್ಪಿಕೊಂಡ ದೃಶ್ಯ ಕಂಡು ಬಂದಿತು.
ಗೆಲುವಿನ ಘೋಷಣೆಯಾಗುತ್ತಿದ್ದಂತೆ ಖುಷಿಯಿಂದ ಕುಣಿದು ಕುಪ್ಪಳಿಸಿದ್ದು ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು, ಅಂಬೇಡ್ಕರ್ ವೃತ್ತಕ್ಕೆ ಬಂದು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಬಾಜಾ ಭಜಂತ್ರಿಗಳು ಮತ್ತು ಹಲಿಗೆಗಳೊಂದಿಗೆ ತಮ್ಮ ಬಡಾವಣೆಗಳಿಗೆ ತೆರಳಿ ಸಂಭ್ರಮಿಸಿದರು. ನೂರಾರು ಜನ ಕಾರ್ಯಕರ್ತರು ಹಾಗೂ ಬೆಂಬಲಿಗರು ವಿಜಯೋತ್ಸವದಲ್ಲಿ ಪಾಲ್ಗೊಂಡು ಪರಸ್ಪರ ಗುಲಾಲು ಎರಚಿಕೊಂಡು ಸಂತಸಪಟ್ಟರು. ಕಾಂಗ್ರೆಸ್ ಮತ್ತು ಬಿಜೆಪಿಯ ಮುಖಂಡರು ಅಭ್ಯರ್ಥಿಗಳನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ