ಶಿಕ್ಷಣ ಅಭಿವೃದ್ಧಿಗೆ ಮಠಗಳ ಕೊಡುಗೆ ಅಪಾರ
Team Udayavani, Feb 19, 2018, 10:59 AM IST
ಕಾಳಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಮಾಡುವಂತಹ ಕೆಲಸಗಳನ್ನು ಮಠ ಮಂದಿರಗಳು ಮಾಡುತ್ತಿವೆ ಎಂದು ಶಾಸಕ ಹಾಗೂ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಹೇಳಿದರು.
ಪಟ್ಟಣದ ಶ್ರೀ ಶಿವಬಸವೇಶ್ವರ ದಕ್ಷಿಣಕಾಶಿ ವಿದ್ಯಾಭಿವೃದ್ಧಿ ಟ್ರಸ್ಟ್ ಸಂಚಾಲಿತ ಶಿವಬಸವೇಶ್ವರ ಹಿರಿಯ ಹಾಗೂ ಕಾಳಪ್ಪಗೌಡ ಪ್ರೌಢಶಾಲೆ 17ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳೆದ 17 ವರ್ಷಗಳಿಂದ ಕಾಳಗಿ ಪಟ್ಟಣದಲ್ಲಿ ಪೂಜ್ಯ ಶಿವಬಸವ ಶಿವಾಚಾರ್ಯರು ತಮ್ಮ ಮಠದಲ್ಲಿ ಅನ್ನ ದಾಸೋಹದ ಜತೆಗೆ ಸಾವಿರಾರು ಮಕ್ಕಳಿಗೆ ಅಕ್ಷರ ದಾಸೋಹ ನೀಡುತ್ತಾ ಬಂದಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಶಿವಬಸವೇಶ್ವರ ಶಾಲೆಯಲ್ಲಿ ಮಾನವಿಯ ಮೌಲ್ಯ, ಉತ್ತಮ ಸಂಸ್ಕಾರ, ಶಿಸ್ತು-ಸಂಯಮ ಎದ್ದು ಕಾಣುತ್ತಿದೆ. ಮುಂಬರುವ ದಿನಗಳಲ್ಲಿ ಶ್ರೀಮಠ ಬೃಹತ್ ಜ್ಞಾನಭಂಡಾರವಾಗಿ ಬೆಳೆಯಬೇಕು.
ಅದಕ್ಕೆ ಬೇಕಾದ ಸಕಲ ಸೌಲಭ್ಯ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸೊಂತ ಪೂಜ್ಯ ಶಿವಕುಮಾರ ಶಿವಾಚಾರ್ಯರು ದಕ್ಷಿಣಕಾಶಿ ದಿನದರ್ಶಿಕೆ ಬಿಡುಗಡೆ ಮಾಡಿದರು.
ಸಂಸ್ಥೆ ಅಧ್ಯಕ್ಷ ಪೂಜ್ಯ ಶಿವಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಶರಣಗೌಡ ಪೊಲೀಸ್ಪಾಟೀಲ ಮಾತನಾಡಿದರು. ಸುಗೂರ(ಕೆ) ವೆಂಕಟೇಶ್ವರ ದೇವಸ್ಥಾನದ
ಪವನದಾಸ ಮಹಾರಾಜರು, ಜೇಮ್ ಸಿಂಗ್ ಮಹಾರಾಜರು, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಸಲಗೂರ, ತಾಪಂ ಸದಸ್ಯೆ ರತ್ನಮ್ಮ ಗುತ್ತೇದಾರ, ಸಂಸ್ಥೆ ಪ್ರಧಾನ ಸತ್ಯನಾರಾಯಣ ವನಮಾಲಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವಶರಣಪ್ಪ ಕಮಲಾಪುರ, ಚಂದ್ರಶೇಖರ ಹರಸೂರ, ಶಿವಶರಣಪ್ಪ ಗುತ್ತೇದಾರ, ದೀಪಸಿಂಗ ಕಾರಬಾರಿ, ಸಂಸ್ಥೆ ಆಡಳಿತಾಧಿಕಾರಿ ಶರಣು ಪಾಟೀಲ ಮಳಗಿ ಇದ್ದರು. ಶಿಕ್ಷಕಿ ನಾಗವೇಣಿ ಹಿರೇಮಠ ಪ್ರಾರ್ಥನೆ ಗೀತೆ ಹಾಡಿದರು. ಸತೀಶ ಪಾಟೀಲ ಸ್ವಾಗತಿಸಿದರು.
ಶರಣು ಕೋರವಾರ ಬಹುಮಾನ ವಿತರಿಸಿದರು. ಲಕ್ಷ್ಮೀàಕಾಂತ ಗಂಗಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಬಾಬುರಾವ ಪೂಜಾರಿ ನಿರೂಪಿಸಿದರು, ಪ್ರಕಾಶ ಮಠಪತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ