ದೇಶಕ್ಕೆ ರೈತರು-ಕಾರ್ಮಿಕರ ಕೊಡುಗೆ ಅಪಾರ
Team Udayavani, May 29, 2022, 12:42 PM IST
ಜೇವರ್ಗಿ: ದೇಶದ ಅಭಿವೃದ್ಧಿಯಲ್ಲಿ ಅದಾನಿ, ಅಂಬಾನಿ ಕೊಡುಗೆಗಿಂತಲೂ ರೈತರು ಹಾಗೂ ಕೂಲಿ ಕಾರ್ಮಿಕರ ಕೊಡುಗೆ ಅಪಾರವಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪ್ಯಾಧ್ಯಕ್ಷೆ ಕೆ.ನೀಲಾ ಹೇಳಿದರು.
ತಾಲೂಕಿನ ಕೋಳಕೂರ ಗ್ರಾಮದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಂತ ಕೂಲಿಕಾರರ ಸಂಘದ ನೂತನ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಣ್ಣು, ಕಿವಿ ಹಾಗೂ ಕರಳು ಇಲ್ಲದ ಸರ್ಕಾರಗಳಿಂದ ಜನ ಬೇಸತ್ತು ಹೋಗಿದ್ದಾರೆ ಎಂದರು.
ರೈತರು, ಕೂಲಿಕಾರ್ಮಿಕರು, ಬಡವರ ಕಷ್ಟಗಳಿಗೆ ಸ್ಪಂದಿಸದ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ದಿನೇದಿನೇ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ, ಅಡುಗೆ ಎಣ್ಣೆ ದುಬಾರಿಯಾಗಿದೆ. ಅನ್ನದಾತ ಬೀದಿಗೆ ಬಂದಿದ್ದಾನೆ. ಡಿಜಿಟಲ್ ಇಂಡಿಯಾ ಮಾಡುತ್ತೇನೆ ಎಂದವರು ದೇಶವನ್ನು ದಿವಾಳಿ ಮಾಡುತ್ತಿದ್ದಾರೆ. ಚುನಾವಣೆ ಬಂದಾಗ ರೈತರು, ಕೂಲಿಕಾರ್ಮಿಕರನ್ನು ನೆನಪು ಮಾಡಿಕೊಳ್ಳುವ ರಾಜಕಾರಣಿಗಳು ಬೇಸಿಗೆ ಕಾಲದಲ್ಲಿ ಒಮ್ಮೆಯಾದರೂ ಬಂದು ರೈತರ, ಕೂಲಿ ಕಾರ್ಮಿಕರ ಸಮಸ್ಯೆ ಆಲಿಸುವ ಕೆಲಸ ಮಾಡದಿರುವುದು ದುರ್ದೈವದ ಸಂಗತಿ ಎಂದರು. 200 ದಿನಗಳ ಕಾಲ ಉದ್ಯೋಗ ಕಾತ್ರಿ ಕೆಲಸ ನೀಡಬೇಕು. 600 ವೇತನ ಹೆಚ್ಚಳ ಮಾಡಬೇಕು ಹಾಗೂ ಸಮಯಕ್ಕೆ ಸರಿಯಾಗಿ ಕೂಲಿ ಹಣವನ್ನು ಖಾತೆಗೆ ಜಮಾ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ರೈತರು, ಕೂಲಿಕಾರರ ಸಹಕಾರ ಅಗತ್ಯವಾಗಿದೆ. ಸರ್ಕಾರಗಳು ರೈತರಿಗೆ ಸೌಲಭ್ಯ ಕೊಟ್ಟು ಅನುಕೂಲ ಕಲ್ಪಿಸಿಕೊಡುವುದಿಲ್ಲವೋ ಅಲ್ಲಿಯ ವರೆಗೆ ರೈತರು ಸುಧಾರಣೆಯಾಗಲು ಸಾಧ್ಯವಿಲ್ಲ. ಸಮಸ್ಯೆಗಳ ವಿರುದ್ಧ ಸಂಘರ್ಷ ಮಾಡಿ, ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಇದೇ ವೇಳೆ ಕರ್ನಾಟಕ ಪ್ರಾಂತ ರೈತ ಕೂಲಿಕಾರ ಸಂಘದ ಗ್ರಾಮ ಘಟಕದ ನೂತನ ಅದ್ಯಕ್ಷರಾಗಿ ಬಸವರಾಜ ನಡುವಿನಕೇರಿ ಅವರನ್ನು ನೇಮಿಸಲಾಯಿತು. ಜನವಾದಿ ಸಂಘಟನೆಯ ಮುಖಂಡರಾದ ಜಗದೇವಿ ನೂಲ್ಕರ್, ಜಗದೇವಿ ಚಂದನಕೇರಾ, ಚಂದ್ರಪ್ಪ ಹಾವನೂರ, ಬಾಬು ಹಾವನೂರ, ಲಿಂಗರಾಜ ಹಾವನೂರ, ಸಿದ್ಧರಾಮ ಹರವಾಳ, ಮಲ್ಲಯ್ಯಸ್ವಾಮಿ ನಂದೂರಮಠ, ರುದ್ರಯ್ಯ ಕುರನಳ್ಳಿ, ಸಿದ್ಧಣ್ಣ ಹಂಗರಗಿ, ಬಸವರಾಜ ಕಟ್ಟಿ, ನಿಂಗಣ್ಣ ಆಡೀನ್, ಮಲ್ಲಿಕಾರ್ಜುನ ಗುತ್ತಾ, ಬಸವರಾಜ, ರಾಜಶೇಖರ ಬೂಸಾ, ಶ್ರೀಶೈಲ ಕುಂಬಾರ, ಭೀಮಾಶಂಕರ ಬಿದನೂರ, ರಾಜು ತಳವಾರ, ಶರಣಮ್ಮ ಪರಸಗೊಂಡ ಹಾಗೂ ಗ್ರಾಮ ಘಟಕದ ಪದಾಕಾರಿಗಳು, ರೈತರು, ಕೂಲಿಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ