ಕುಸಿದ ಅಂತರ್ಜಲ ಮಟ್ಟ ಮಳೆಗಾಲದಲ್ಲೂ ನೀರಿನ ಬವಣೆ!
•ಮಲ್ಲಾಬಾದನಲ್ಲಿ ಕಿಲೋ ಮೀಟರ್ ಗಟ್ಟಲೇ ಅಲೆದು ತರಬೇಕು ನೀರು
Team Udayavani, Jul 23, 2019, 9:44 AM IST
ಅಫಜಲಪುರ: ಮಲ್ಲಾಬಾದ ಗ್ರಾಮದಲ್ಲಿ ಖಾಸಗಿ ಹೊಲದಿಂದ ನೀರು ಪಡೆದ ಗ್ರಾಮಸ್ಥರು.
ಅಫಜಲಪುರ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿ ಕಾಡಿತ್ತು. ಆದರೆ ಮಳೆಗಾಲ ಆರಂಭವಾಗುತ್ತಿದ್ದಂತೆ ನೀರಿನ ಸಮಸ್ಯೆ ನೀಗಿ ಎಲ್ಲೆಡೆ ನೀರು ಲಭ್ಯವಾಗುತ್ತದೆ ಎಂದುಕೊಂಡಿದ್ದ ಜನರಿಗೆ ಇನ್ನೂ ಬರಗಾಲದ ಶಾಕ್ ಬಿಟ್ಟು ಹೋಗಿಲ್ಲ. ಮಳೆ ಬಂದರೂ ತಪ್ಪಿಲ್ಲ ನೀರಿನ ಬವಣೆ.
ತಾಲೂಕಿನಾದ್ಯಂತ ಕುಡಿಯುವ ನೀರಿನ ಬವಣೆ ಇದೆ. ಅದರಲ್ಲೂ ಮಲ್ಲಾಬಾದ, ಮಾತೋಳಿ, ಚಿಂಚೋಳಿ, ರೇವೂರ(ಕೆ), ರೇವೂರ(ಬಿ), ಹೊಸೂರ, ರಾಮನಗರ, ಚವಡಾಪುರ, ಗೊಬ್ಬೂರ(ಬಿ), ಚಿಣಮಗೇರಾ, ಆನೂರ, ಮಾಶಾಳ, ಭೈರಾಮಡಗಿ ಸೇರಿದಂತೆ ಹತ್ತಾರು ಊರುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುವಾಗಿ ಕಾಡುತ್ತಿದೆ.
ಮಳೆ ಬಂದರೂ ಕೊಳವೆ ಬಾವಿಗಳು, ತೆರೆದ ಬಾವಿಗಳಿಗೆ ನೀರು ಬಂದಿಲ್ಲ. ಅಂತರ್ಜಲ ಮಟ್ಟ ವೃದ್ದಿಯಾಗಿಲ್ಲ. ಹೀಗಾಗಿ ಜನಸಾಮಾನ್ಯರು ಮತ್ತೆ ಬೇಸಿಗೆಯಲ್ಲಿ ನೀರಿಗಾಗಿ ಅಲೆದಾಡಿದಂತೆ ಮಳೆಗಾಲದಲ್ಲೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದಿದೆ.
ತಾಲೂಕಿನ ಮಲ್ಲಾಬಾದ ಗ್ರಾಪಂ ವ್ಯಾಪ್ತಿಯಲ್ಲಿ ಸಾಕಷ್ಟು ನೀರಿನ ಸಮಸ್ಯೆ ಉದ್ಭವಿಸಿದೆ. ಇಲ್ಲಿ ನೀರು ತರಬೇಕಾದರೆ ಕಿಲೋಮೀಟರ್ಗಟ್ಟಲೇ ಅಲೆಯಬೇಕು. ಖಾಸಗಿಯವರ ಹೊಲ ಗದ್ದೆಗಳಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ರಾಪಂನವರು ಟ್ಯಾಂಕರ್ ನೀರು ಪೂರೈಸುತ್ತಿದಾರೂ ಸಮಸ್ಯೆಗೆ ಪರಿಹಾರ ಮಾತ್ರ ಸಿಗುತ್ತಿಲ್ಲ.
ಒಟ್ಟಿನಲ್ಲಿ ತಾಲೂಕಿನಾದ್ಯಂತ ಮಳೆ ಇದ್ದರೂ ಕೂಡ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಲ್ಲೂ ನದಿ ದಡದಲ್ಲಿರುವ ಊರುಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮಳೆ ಬಂದರೂ ನೀರಿನ ಸಮಸ್ಯೆ ಕಾಡುತ್ತಿರುವ ಬಗ್ಗೆ ಜನಸಾಮಾನ್ಯರು ಚಿಂತಾಕ್ರಾಂತರಾಗಿದ್ದಾರೆ.
•ಮಲ್ಲಿಕಾರ್ಜುನ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ