ಏಕ ಧರ್ಮದ ಸಿದ್ಧಾಂತ ಮನೆಯಲ್ಲೇ ಕೇಳ್ಳೋದಿಲ್ಲ


Team Udayavani, Aug 26, 2018, 11:10 AM IST

gul-5.jpg

ಕಲಬುರಗಿ: ಕೆಲ ಸಂಸ್ಥೆಗಳು ತಮ್ಮ ತತ್ವಗಳನ್ನು ದೇಶದ ಜನತೆ ಮೇಲೆ ಹೇರಲು ಹೊರಟಿದ್ದು, ಅದನ್ನು ವಿರೋಧಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ವಾಗ್ಧಾಳಿ ನಡೆಸುವ ಮೂಲಕ ಮನುಸ್ಮೃತಿಯನ್ನು ಖಂಡಿಸಿದರು.

ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಂವಿಧಾನ ಸುಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಂವಿಧಾನ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಡಾ| ಬಿ.ಆರ್‌.ಅಂಬೇಡ್ಕರ್‌ ರಚಿಸಿರುವ ಸಂವಿಧಾನ ರಕ್ಷಿಸುವುದು ಎಲ್ಲ ಸಮಾಜಗಳ, ವರ್ಗಗಳ ಜವಾಬ್ದಾರಿ ಆಗಿದೆ. ಆದರೆ, ಕೆಲ ಸಂಸ್ಥೆಗಳು ಏಕ ಧರ್ಮದ ಸಿದ್ಧಾಂತವನ್ನು ಸ್ಥಾಪಿಸಿ ಅದರ ತತ್ವ ದೇಶದ ನಾಗರಿಕರ ಮೇಲೆ ಹೇರಲು ಮುಂದಾಗಿವೆ. ಇಂತಹ ತತ್ವವನ್ನು ಮೊದಲು ತಮ್ಮ ಮನೆಯಲ್ಲೇ ಅಳವಡಿಸಿಕೊಂಡು ನೋಡಲಿ. ಅವರ ಮನೆಯ ಹೆಣ್ಣು ಮಕ್ಕಳೇ ದಂಗೆ ಏಳುತ್ತಾರೆ ಎಂದರು. 

ಸಂವಿಧಾನ ಬದಲಾವಣೆ ಮತ್ತು ಬುದ್ಧಿಜೀವಿಗಳ ಕುರಿತು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಅವರು, ಹೆಗಡೆ ಅವರಿಗೆ ಏಕಧರ್ಮದ ತತ್ವ ಮಾತ್ರ ಗೊತ್ತಿದೆ. ಅವರಿಗೆ ಜಾತ್ಯತೀತ ಮೌಲ್ಯಗಳು, ತತ್ವಗಳು ಗೊತ್ತಿಲ್ಲ ಎಂದು ಟೀಕಿಸಿದರು.

ದೇಶದಲ್ಲಿ ಗೌರಿ ಲಂಕೇಶ, ಡಾ| ಎಂ.ಎಂ. ಕಲಬುರ್ಗಿ, ದಾಬೋಲ್ಕರ್‌, ಪನಸಾರೆ ಅವರಂತ ವಿಜಾರವಾದಿಗಳ ಹತ್ಯೆ ನಡೆದಿವೆ. ಕೇಂದ್ರದಲ್ಲಿ ದಲಿತರು, ದುರ್ಬಲರು, ಅಲ್ಪಸಂಖ್ಯಾತರ ವಿರೋಧಿಗಳು ಅಧಿಕಾರದಲ್ಲಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಮನುಷ್ಯರಿಗೆ ಬೆಲೆ ಇಲ್ಲದಂತಾಗಿದ್ದು, ಹಲ್ಲೆ, ದೌರ್ಜನ್ಯ ಮತ್ತು ಕೊಲೆ ಕೃತ್ಯಗಳನ್ನು ಎಸಗಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಮರಿ ಮೊಮ್ಮಗ ರಾಜರತ್ನ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನವನ್ನು ಬದಲಾವಣೆ ಮಾಡುವ ಷಡ್ಯಂತ್ರದಲ್ಲಿ ತೊಡಗಿದ್ದು, ಮನುಸ್ಮೃತಿಯನ್ನು ಸ್ಥಾಪಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಕಚೇರಿಯಿಂದ ಕೇವಲ 15 ಕಿ.ಮೀ. ದೂರದಲ್ಲಿರುವ ಜಂತರ್‌ ಮಂತರ್‌ನಲ್ಲಿ ಸಂವಿಧಾನ ಪ್ರತಿ ಸುಡಲಾಗಿದೆ. ಆದರೂ, ಪ್ರಧಾನಿ ಮೋದಿ ಮೌನ ವಹಿಸುವ ಮೂಲಕ ಸಂವಿಧಾನ ಸುಟ್ಟವರಿಗೆ ಬೆಂಬಲ ಕೊಟ್ಟಿದ್ದಾರೆ ಎಂದು ದೂರಿದರು.

ಮೋದಿ ಅವರನ್ನು ಬದಲಾಯಿಸಿ ಎಂದು ನಾನು ಹೇಳುವುದಿಲ್ಲ. ಯಾಕೆಂದರೆ, ಮೋದಿ ಜಾಗದಲ್ಲಿ ನಾಳೆ ಮತ್ತೂಬ್ಬರು ಬರ್ತಾರೆ. ಹೀಗಾಗಿ ಮೋದಿಯಂತಹ ಉತ್ಪನ್ನಗಳನ್ನು ಉತ್ಪಾದಿಸುವ ಆರ್‌ಎಸ್‌ಎಸ್‌ ಎನ್ನುವ ಫ್ಯಾಕ್ಟರಿಯನ್ನು ಬಂದ್‌ ಮಾಡಬೇಕಿದೆ ಎಂದರು.
 
ಮಾಜಿ ಶಾಸಕ ಬಿ.ಆರ್‌.ಪಾಟೀಲ, ಫಾದರ್‌ ಲೋಬೋ, ಗುರಮೀತ್‌ ಸಿಂಗ್‌, ಬಾಬಾ ಖಾನ್‌, ತಿಪ್ಪಣ್ಣಪ್ಪ ಕಮಕನೂರ, ದಸಂಸ ರಾಜ್ಯ ಸಂಚಾಲಕ ಡಿ.ಜಿ .ಸಾಗರ ಮಾತನಾಡಿದರು. ಶಾಸಕ ಎಂ.ವೈ. ಪಾಟೀಲ, ಸಂವಿಧಾನ ರಕ್ಷಣಾ ಸಮಿತಿ ಅಧ್ಯಕ್ಷ ವಿಠಲ ದೊಡ್ಮನಿ, ಕೆ.ನೀಲಾ, ಅಲ್ಲಮ ಪ್ರಭು ಪಾಟೀಲ, ರಾಜಕುಮಾರ ಕಪನೂರ, ಮಾರುತಿ ಮಾನ್ಪಡೆ ಹಾಗೂ ಮತ್ತಿತರರು ಇದ್ದರು. 

ಬಹಿರಂಗ ಸಮಾವೇಶಕ್ಕೂ ಮುನ್ನ ನಗರೇಶ್ವರ ಶಾಲೆಯಿಂದ ಜಗತ್‌ ವೃತ್ತದವರೆಗೂ ಬೃಹತ್‌ ರ್ಯಾಲಿ ನಡೆಸಲಾಯಿತು. ಜಿಲ್ಲೆಯ ಹಲವು ಭಾಗಗಳಿಂದ ಆಗಮಿಸಿದ್ದ ಸಾವಿರಾರು ಜನರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.