ಕಲಾ ತಂಡಗಳ ನೃತ್ಯದ ಸೊಬಗು


Team Udayavani, Mar 5, 2018, 11:37 AM IST

GUL-8.jpg

ಸೇಡಂ: ತಾಲೂಕಿನ ಮಳಖೇಡದಲ್ಲಿ ರಾಷ್ಟ್ರಕೂಟರ ಉತ್ಸವದ ನಿಮಿತ್ತ ನಡೆದ ಮೆರವಣಿಗೆ ಇಡೀ ಉತ್ಸವದ ಕೇಂದ್ರ ಬಿಂದುವಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಕಲಾ ತಂಡಗಳು ನೃತ್ಯದ ಸೊಬಗಿನಿಂದ ಜನರನ್ನು ತಮ್ಮತ್ತ ಸೆಳೆದರು.

ರಾಷ್ಟ್ರಕೂಟರ ಕೋಟೆಯಲ್ಲಿ ನಿರ್ಮಿಸಲಾಗಿರುವ ಕವಿರಾಜಮಾರ್ಗ ಕೃತಿ ಶಿಲಾಕೃತಿ ಬಳಿ ಮೆರವಣಿಗೆಗೆ ಡೊಳ್ಳು ಬಾರಿಸುವ ಮೂಲಕ ವೈದ್ಯಕೀಯ ಶಿಕ್ಷಣ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆ, ಗಂಗಾಧರ ಸ್ವಾಮೀಜಿ ಕಲ್ಯಾಣ ಮಂಟಪದ ಎದುರಿಗಿನ ಕಾರ್ಯಕ್ರಮದ ವೇದಿಕೆಗೆ ತಲುಪಿತು. ಕಾಸರಭೋಸಗಾದ ಭೀಮರಾಯ ಭಜಂತ್ರಿ ಅವರ ಮಹಿಳಾ ತಂಡದ ಚಿಟ್ಟಹಲಗೆ ವಾದನ ಸಾಮಾನ್ಯ ಮಹಿಳೆಯರ ಹುಬ್ಬೇರಿಸುವಂತಿತ್ತು. ಇನ್ನು ವೀರಗಾಸೆ ಕುಣಿತ, ಚಿತ್ರದುರ್ಗ ತಿಪ್ಪೆಸ್ವಾಮಿ ತಂಡದ ಗಾರುಡಿ ಗೊಂಬೆ, ತೀರ್ಥ ತಾಂಡದ ಶಾರುಬಾಯಿ ತಂಡದ ಲಂಬಾಣಿ ನೃತ್ಯ ಗಮನಸೆಳೆದವು. ಸ್ಥಳೀಯ ಕಲಾವಿದ ಮಲ್ಲಪ್ಪ ಅವರ ತಂಡದ ಹಲಗೆ ವಾದನ. 

ರೇವಣಸಿದ್ದಯ್ಯ ತಂಡದ ಪುರವಂತಿಕೆ, ಕಲಬುರಗಿಯ ಸಂಜು ಬರಗಾಲಿ ತಂಡದ ಡೊಳ್ಳು ಕುಣಿತ, ಮಳಖೇಡ ಭಾಗ್ಯವಂತಿ ಕಲಾ ತಂಡದ ಕೋಲಾಟ, ಮಂಡ್ಯದ ಸವಿತಾ ಚೀರಕುನ್ನಯ್ಯ ತಂಡದ ಪೂಜಾ ಕುಣಿತ, ಮಂಡ್ಯ ರಾಜಮ್ಮ ತಂಡದ ಪಟ ಕುಣಿತ, ಚಾಮರಾಜನಗರ ಕುಮಾರ ತಂಡದ ಸೋಮನ ಕುಣಿತ, ಕಲಬುರಗಿ ನಾಗು ತಂಡದ ಚಿಲಿಪಿಲಿ ಗೊಂಬೆ, ಚಿತ್ರದುರ್ಗ ಮನೋಜನ ತಂಡದ ಕೀಲು ಕುದುರೆ, ಅಫಜಲಪುರ ಮಳೆಪ್ಪ ತಂಡದ ಹೆಜ್ಜೆ ಕುಣಿತ, ಕುರಕುಂಟಾ ಅಕ್ಕನಾಗಮ್ಮ ತಂಡದ ಮಹಿಳಾ ಡೊಳ್ಳು ಮತ್ತು ಆಳಂದನ ಬಲಭೀಮ ಮುದ್ರೆ ತಂಡದ ಗೋಂದಳಿ ನೃತ್ಯ ಇಡೀ ಉತ್ಸವಕ್ಕೆ ಮೆರುಗು ನೀಡಿತು.

ಸಚಿವ ಡಾ| ಶರಣಪ್ರಕಾಶ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಮುಖಂಡ ರಾಜಶೇಖರ ಪುರಾಣಿಕ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಹಜರತ್‌ ಸೈಯ್ಯದ್‌ ಶಹಾ ಮುಸ್ತಫಾ ಖಾದ್ರಿ, ಗ್ರಾಪಂ ಅಧ್ಯಕ್ಷ ನಾಗರಾಜ ನಂದೂರ, ಅಬ್ದುಲ್‌ ಗಫೂರ್‌, ಕರೆಪ್ಪ ಪಿಲ್ಲಿ, ಶ್ರೀನಿವಾಸ ತೆಲ್ಕೂರ, ಗುರುನಾಥರೆಡ್ಡಿ ಹೆಜ್ಜೆ ಹಾಕಿದರು. 

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.