ಹರನೂರ ಕೂಲಿ ಕಾರ್ಮಿಕರ ಧರಣಿ ಅಂತ್ಯ
Team Udayavani, Mar 17, 2022, 3:19 PM IST
ಜೇವರ್ಗಿ: ಉದ್ಯೋಗ ಖಾತ್ರಿ ಸಂಪೂರ್ಣ ಜಾರಿಗೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕಿನ ಹರನೂರ ಗ್ರಾಮ ಪಂಚಾಯಿತಿ ಕಚೇರಿ ಎದುರು ಕಳೆದ ಶುಕ್ರವಾರದಿಂದ ನಡೆಸಲಾಗುತ್ತಿದ್ದ ಧರಣಿಯನ್ನು ಬುಧವಾರ ಅಧಿಕಾರಿಗಳ ಭರವಸೆ ಮೇರೆಗೆ ಅಂತ್ಯಗೊಳಿಸಲಾಯಿತು.
60 ವರ್ಷ ದಾಟಿದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು ಕನಿಷ್ಟ 7,500ರೂ. ಮಾಸಾಶನ ಮಂಜೂರಿ ಮಾಡಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಬೆಳಗ್ಗೆ 9ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸಬೇಕು ಎಂಬ ಸರ್ಕಾರದ ಆದೇಶ ರದ್ದುಪಡಿಸಬೇಕು. ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿಗದಿ ಪಡಿಸಿದ 150 ದಿನಗಳ ಕಾಲ ನಿರಂತರ ಕೆಲಸ ನೀಡಬೇಕು. ಡಾ| ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ಕೂಡಲೇ ಕಟಾವು ಮಾಡಿ ಬೆಂಬಲ ಬೆಲೆಯಲ್ಲಿ ಖರೀದಿಸಿ, ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯ ಮಾಡಬೇಕು ಸೇರಿದಂತೆ ಸ್ಥಳಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಆರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು.
ಬುಧವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ಅಬ್ದುಲ್ ನಬಿ, ಧರಣಿ ನಿರತರ ಸಮಸ್ಯೆ ಆಲಿಸಿ ಸ್ಥಳೀಯ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ರೈತರ, ಕೂಲಿಕಾರ್ಮಿಕರ ಕೆಲವು ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ರೈತ ಮುಖಂಡರಾದ ಪರಶುರಾಮ ಬಡಿಗೇರ, ಮಲ್ಕಪ್ಪ ಹರನೂರ, ಸಕ್ರೆಪ್ಪ ಹರನೂರ, ರೇವು ಜಾಧವ ರೇವನೂರ, ಶಂಕರಲಿಂಗ ಹನ್ನೂರ, ಯಲ್ಲಾಲಿಂಗ ತಳವಾರ, ರಸೂಲಬೀ ಹರನೂರ, ತಾರಾಬಾಯಿ ರಾಠೊಡ, ಬಸಮ್ಮ ಮ್ಯಾಗೇರಿ, ಸುನಂದಾ ಬಳಗಾರ, ಶಾರದಾ ರಾಠೊಡ, ಭೀಮಬಾಯಿ ರೇವನೂರ, ಚಂದ್ರಬಾಯಿ ಇಜೇರಿ, ರಾಜು ಸಾಥಖೇಡ ರೇವನೂರ, ಶ್ರೀನಿವಾಸ ದಾಸರ ಹಾಗೂ ರೇವನೂರ, ಹರನೂರಿನ ರೈತರು, ಕೂಲಿಕಾರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ