ತಾಪಂ ಅಧ್ಯಕ್ಷರ ಗ್ರಾಮದಲ್ಲೇ ಸೌಲಭ್ಯ ಮರೀಚಿಕ


Team Udayavani, Jan 4, 2019, 5:30 AM IST

gul-2.jpg

ಚಿತ್ತಾಪುರ: ತಾಲೂಕಿನ ರಾಜೋಳಾ ತಾಪಂ, ಭೀಮನಳ್ಳಿ ಗ್ರಾಪಂ ವ್ಯಾಪ್ತಿಯ ರಾಮತೀರ್ಥ ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿದ್ದು, ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ.

ಇದೇ ಗ್ರಾಮದವರಾದ ಜಗದೇವರೆಡ್ಡಿ ಪಾಟೀಲ ತಾಪಂ ಹಾಲಿ ಅಧ್ಯಕ್ಷರಾಗಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎನ್ನುವುದು ಗ್ರಾಮಸ್ಥರ ಅಸಮಾಧಾನವಾಗಿದೆ. ಗ್ರಾಮದ ಮಹಿಳೆಯರು ರಾತ್ರಿ ಅಥವಾ ಬೆಳಗಿನ ಜಾವ ಗ್ರಾಮದ ಸುತ್ತಮುತ್ತಲಿನ ರಸ್ತೆ ಬದಿ, ಹೊಲಗಳನ್ನು ಶೌಚಕ್ಕೆ ಬಳಸುತ್ತಿದ್ದಾರೆ. 

ದೇಶದ ತುಂಬಾ ಸ್ವತ್ಛ ಭಾರತ ಕೂಗು ಕೇಳಿಬರುತ್ತಿದ್ದರೂ, ರಾಮತೀರ್ಥಕ್ಕೆ ಮಾತ್ರ ಅನ್ವಯವಾಗುವ ಯಾವ ಲಕ್ಷಣ ಕಂಡುಬಂದಿಲ್ಲ. ಗ್ರಾಮದಲ್ಲಿ ಇಲ್ಲಿಯವರೆಗೆ ಚರಂಡಿ ನಿರ್ಮಿಸಿಲ್ಲ. ಹೀಗಾಗಿ ಮನೆಗಳ ಬಚ್ಚಲು ನೀರು ರಸ್ತೆಗಳ ಮೇಲೆಯೇ ಹರಿಯುತ್ತಿದೆ. ಇದರಿಂದ ದುರ್ನಾತ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎನ್ನುತ್ತಾರೆ ಗ್ರಾಮದ ಮಹಿಳೆ ನಾಗಮ್ಮ ಹಾಗೂ ರಮೇಶ.

ರಾಮತೀರ್ಥ ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳಿವೆ. ಒಂದೊಂದು ಅಂಗನವಾಡಿ ಕೇಂದ್ರದ ಕಿಟಕಿ, ಬಾಗಿಲು ಹಾಕಲು ಹಾಗೂ ಸುಣ್ಣಬಣ್ಣ ಬಡಿಯಲು ಸೇರಿದಂತೆ ಇತರೆ ಕೆಲಸಕ್ಕೆ ತಲಾ 50 ಸಾವಿರ ರೂ. ಬಿಡುಗಡೆಯಾಗಿದೆ. ಆದರೆ ಇಲ್ಲಿಯ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮಟ್ಟದ ಸುಣ್ಣ ಹಚ್ಚಿದ್ದಾರೆಯೇ ಹೊರತು ಕಿಟಕಿ, ಬಾಗಿಲು ದುರಸ್ತಿ, ಪರ್ಸಿ ಅಳವಡಿಕೆ ಸೇರಿದಂತೆ ಇತರೆ ಕೆಲಸಗಳನ್ನು ಮಾಡಿಲ್ಲ.

ಗ್ರಾಮದಲ್ಲಿ ಸಿಸಿ ರಸ್ತೆ ಮಾಡಲು ಅನುದಾನ ಬಿಡುಗಡೆಯಾಗಿದೆ. ಆದರೆ ಇಲ್ಲಿ ರಸ್ತೆಯೇ ಆಗಿಲ್ಲ. ಆದರೆ ಬಿಲ್‌ ಮಾತ್ರ ಆಗಿದೆ. ಎಸ್‌ಸಿ ಓಣಿಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ರಂಗ ಮಂದಿರ ಕಟ್ಟಡಕ್ಕೆ ಬಾಗಿಲು, ಕಿಟಕಿ, ಪರ್ಸಿ ಹಾಕಲು ತಲಾ 2 ಲಕ್ಷ ರೂ. 2016-17ನೇ ಸಾಲಿನ ವಿಶೇಷ ಅಭಿವೃದ್ಧಿ ಅನುದಾನ (ಎಸ್‌.ಸಿ.ಪಿ) ಯೋಜನೆಯಲ್ಲಿ ಬಿಡುಗಡೆ ಆಗಿದೆ. ಇಲ್ಲಿ ಕಿಟಕಿ, ಬಾಗಿಲು, ಪರ್ಸಿ ಸೇರಿದಂತೆ ಇತರೆ ದುರಸ್ಥಿ ಕೆಲಸಗಳೆ ಆಗಿಲ್ಲ.

ಆದರೆ 2 ಲಕ್ಷ ರೂ. ಬಿಲ್‌ ಗುಳುಂ ಆಗಿದೆ. ಮುಖ್ಯ ರಸ್ತೆಯಿಂದ ಮೋನಪ್ಪ ವಾಡ್‌ರವರ ಮನೆವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡಲು 3 ಲಕ್ಷ ರೂ. ಬಿಡುಗಡೆ ಆಗಿತ್ತು. ಆದರೆ ಇಲ್ಲಿ ರಸ್ತೆಯನ್ನೇ ಮಾಡಿಲ್ಲ. 2017-18ನೇ ಸಾಲಿನ 3054 ಅನುದಾನದಲ್ಲಿ ಬಿಲ್‌ ಮಾತ್ರ ಆಗಿದೆ. 2017-18ನೇ ಸಾಲಿನ ಒಂದು ಕೋಟಿ ರೂ. ಅನಿರ್ಭಂದಿತ ಅನುದಾನದಲ್ಲಿ ರಾಮತೀರ್ಥ ತಾಂಡಾದ ಕಸನಿಬಾಯಿ ಮನೆಯಿಂದ ರಾಮು ಕಾರ್‌ಬಾರಿ ಮನೆಯವರೆಗೆ 2 ಲಕ್ಷ ರೂ. ವೆಚ್ಚದ ಚಂರಡಿ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ.

ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡು ಕೋಣೆಗಳ ಶೌಚಾಲಯ ನಿರ್ಮಾಣ ಹಾಗೂ ನೀರಿನ ಸೌಕರ್ಯ ಒದಗಿಸಲು 2016-17ನೇ ಸಾಲಿನ ಒಂದು ಕೋಟಿ ಅನಿರ್ಭಂದಿತ ಯೋಜನೆಯಲ್ಲಿ ಮಾಡಿದ ಕೆಲಸಗಳು ಕಳಪೆ ಮಟ್ಟದಿಂದ ಕೂಡಿವೆ. ಕುಲಕರ್ಣಿ ಅವರ ಮನೆಯಿಂದ ಮಸೀದಿ ವರೆಗೆ ಸಿಸಿ ರಸ್ತೆ ನಿರ್ಮಾಣ 2.50 ಲಕ್ಷ ರೂ. ಹಾಗೂ ಅಯ್ಯಣಗೌಡ ಮನೆಯಿಂದ ನಡುಗಟ್ಟಿವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡಲು 2.50 ಲಕ್ಷ ರೂ. 2016-17ನೇ ಸಾಲಿನ 3054 ಲೆಕ್ಕ ಶಿರ್ಷಿಕೆಯಲ್ಲಿ ಕೆಲಸ ಮಾಡದೇ ಬಿಲ್‌ ಆಗಿದೆ. ರಾಮತೀರ್ಥ ತಾಂಡಾದಲ್ಲಿ ನರಸಿಂಗ್‌ ಚವ್ಹಾಣ ಮನೆಯಿಂದ ವಿಜಯಕುಮಾರ ಮನೆ ವರೆಗೆ ಸಿಸಿ ರಸ್ತೆಗೆ 2 ಲಕ್ಷ ರೂ. ಹಾಗೂ ಚರಂಡಿ ನಿರ್ಮಾಣಕ್ಕೆ 2 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ.

ಆದರೆ ಇಲ್ಲಿ ಕಳಪೆ ಮಟ್ಟದ ಚರಂಡಿ ಕಾಮಗಾರಿ ಮಾಡಿ ಸಿಸಿ ರಸ್ತೆ ನಿರ್ಮಾಣ ಮಾಡದೇ ಬಿಲ್‌ ಎತ್ತಿದ್ದಾರೆ. 2013-14ನೇ ಸಾಲಿನಲ್ಲಿ ಎಸ್‌ಸಿ ಓಣಿಯಲ್ಲಿ ಕಿರು ನೀರು ಸರಬರಾಜು ಟ್ಯಾಂಕ್‌ ನ್ನು ನಿರ್ಮಾಣ ಮಾಡಿ ಅಲ್ಲಿಂದ ತೆಗೆದುಕೊಂಡು ತಮ್ಮ ಹೊಲದ ಪಕ್ಕದಲ್ಲಿ ಹಾಕಿಕೊಂಡಿದ್ದಾರೆ. ನೀರಿನ ಟ್ಯಾಂಕ್‌ ನಿರ್ಮಾಣ ಮಾಡಿ ಗ್ರಾಪಂಗೆ ಹಸ್ತಾಂತರ ಮಾಡದೇ ಜಾಗದ ಮಾಲೀಕನಿಗೆ ಉದ್ಯೋಗ ನೀಡುತ್ತೇವೆ ಎಂದು ಆಮಿಷವೊಡ್ಡಿ ಬಿಲ್‌ ಮಾಡಿಕೊಂಡಿದ್ದಾರೆ. ಹೀಗೆ ಹತ್ತಾರು ಕೆಲಸಗಳನ್ನು ಸ್ವತಃ ತಾವೇ ಮಾಡುವುದಾಗಿ ಹೇಳಿ ಹೀಗೆಲ್ಲ ಕಳಪೆ ಹಾಗೂ ಕಾಮಗಾರಿ ಮಾಡದೇ ಬಿಲ್‌ ಎತ್ತಿ ತಿಂದಿದ್ದಾರೆ ಎಂದು ಗ್ರಾಪಂ ಸದಸ್ಯ ಅಯ್ಯಪ್ಪ ಪವಾರ್‌ ರಾಮತೀರ್ಥ
ಆರೋಪಿಸಿದ್ದಾರೆ.

ನಮ್ಮ ಓಣ್ಯಾಗ್‌ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವತ್ಛತೆ, ಶೌಚಾಲಯ, ಕಲ್ಪಿಸಿ ಅಂತಾ ಹೇಳಿ ಹೇಳಿ ಸಾಕಾಗ್ಯಾದ್‌. ತಲ್ಯಾಗಿನ ಕೂದಲು ಬೆಳ್ಳಗಾಗಿ ನಾಲ್ಕು ಮಕ್ಕಳಾಗಿ, ಅವರ ಮದುವೆ ಮಾಡಿಸಿದರೂ ಇಲ್ಲಿಯವರೆಗೆ ನಮ್ಮ ಸಮಸ್ಯೆ ಮಾತ್ರ ಬಗೆಹರಿದಿಲ್ಲ.
 ಬಸವರಾಜ, ಗ್ರಾಮದ ನಿವಾಸಿ

„ಎಂ.ಡಿ ಮಶಾಖ್

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.