![modi (4)](https://www.udayavani.com/wp-content/uploads/2024/07/modi-4-4-415x256.jpg)
ಎಡೆ ಹೊಡೆಯುತ್ತಿದ್ದಾನೆ ರೈತ
Team Udayavani, Jul 5, 2018, 10:38 AM IST
![gul-2.jpg](https://www.udayavani.com/wp-content/uploads/2018/07/5/gul-2-620x257.jpg)
ಚಿಂಚೋಳಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ,ಉದ್ದು, ಹೆಸರು, ಸೋಯಾ ಉತ್ತಮ ಫಸಲು ಬಂದಿದೆ. ಆದರೆ ಮಳೆ ಅಭಾವ ಮತ್ತು ತೇವಾಂಶ ಕೊರತೆ ಆತಂಕದಲ್ಲಿ ರೈತರು ತಮ್ಮ ಹೊಲದಲ್ಲಿ ಬೆಳೆದ ಬೆಳೆಗಳ ಮಧ್ಯೆ ಎಡೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾನೆ.
ತಾಲೂಕಿನ ಐನಾಪುರ, ಸುಲೇಪೇಟ, ಕೋಡ್ಲಿ, ಚಿಮ್ಮನಚೋಡ, ಚಿಂಚೋಳಿ ನಿಡಗುಂದಾ ಹೋಬಳಿಯಲ್ಲಿ ಬರುವ ಗ್ರಾಮಗಳಲ್ಲಿ ಮುಂಗಾರಿನ ಬೆಳೆಗಳು ಅಲ್ಪ ಮಳೆಯಿಂದಾಗಿ ಉತ್ತಮವಾಗಿ ಬೆಳೆದಿವೆ. ಈಗ ಒಂದು ವಾರದಿಂದ ಮಳೆ ಅಭಾವ ಉಂಟಾಗಿದ್ದರಿಂದ ಬೆಳೆಗಳು ಬಾಡದಂತೆ ಬೆಳೆಗಳ ಸಾಲಿನಲ್ಲಿ ತೇವಾಂಶ ಕಾಪಾಡಿಕೊಳ್ಳುವುದಕ್ಕಾಗಿ ರೈತರು ಬೆಳೆಗಳ ಸಾಲುಗಳ ಮಧ್ಯೆ ಎಡೆ ಹೊಡೆಯುತ್ತಿದ್ದಾರೆ.
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 84,427 ಹೆಕ್ಟೇರ್ ಕ್ಷೇತ್ರದಲ್ಲಿ ಈಗಾಗಲೇ ಶೇ. 75ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಆದರೆ ತೊಗರಿ ಬಿತ್ತನೆಗೆ ಜುಲೈ ತಿಂಗಳ ವರೆಗೆ ಅವಕಾಶವಿರುವುದರಿಂದ ರೈತರು ಹೆಚ್ಚು ತೊಗರಿ ಬಿತ್ತನೆಯಲ್ಲಿ ತೊಡಗಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಹೆಚ್. ಗಡಿಗಿಮನಿ ತಿಳಿಸಿದ್ದಾರೆ.
ಚಿಮ್ಮನಚೋಡ, ಹಸರಗುಂಡಗಿ, ಕನಕಪುರ, ಮಿರಿಯಾಣ, ಕೊಡಂಪಳ್ಳಿ, ಗಡಿಕೇಶ್ವಾರ, ಸುಲೇಪೇಟ, ಮೋಘಾ ಗ್ರಾಮಗಳ ಹೊಲಗಳಲ್ಲಿ ಎಡೆ ಹೊಡೆಯುವ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಸದ್ಯ ಮಳೆ ಅಗತ್ಯವಿದೆ ಎಂದು ರೈತರು ಹೇಳುತ್ತಾರೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.