

Team Udayavani, Jul 5, 2018, 10:38 AM IST
ಚಿಂಚೋಳಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ,ಉದ್ದು, ಹೆಸರು, ಸೋಯಾ ಉತ್ತಮ ಫಸಲು ಬಂದಿದೆ. ಆದರೆ ಮಳೆ ಅಭಾವ ಮತ್ತು ತೇವಾಂಶ ಕೊರತೆ ಆತಂಕದಲ್ಲಿ ರೈತರು ತಮ್ಮ ಹೊಲದಲ್ಲಿ ಬೆಳೆದ ಬೆಳೆಗಳ ಮಧ್ಯೆ ಎಡೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾನೆ.
ತಾಲೂಕಿನ ಐನಾಪುರ, ಸುಲೇಪೇಟ, ಕೋಡ್ಲಿ, ಚಿಮ್ಮನಚೋಡ, ಚಿಂಚೋಳಿ ನಿಡಗುಂದಾ ಹೋಬಳಿಯಲ್ಲಿ ಬರುವ ಗ್ರಾಮಗಳಲ್ಲಿ ಮುಂಗಾರಿನ ಬೆಳೆಗಳು ಅಲ್ಪ ಮಳೆಯಿಂದಾಗಿ ಉತ್ತಮವಾಗಿ ಬೆಳೆದಿವೆ. ಈಗ ಒಂದು ವಾರದಿಂದ ಮಳೆ ಅಭಾವ ಉಂಟಾಗಿದ್ದರಿಂದ ಬೆಳೆಗಳು ಬಾಡದಂತೆ ಬೆಳೆಗಳ ಸಾಲಿನಲ್ಲಿ ತೇವಾಂಶ ಕಾಪಾಡಿಕೊಳ್ಳುವುದಕ್ಕಾಗಿ ರೈತರು ಬೆಳೆಗಳ ಸಾಲುಗಳ ಮಧ್ಯೆ ಎಡೆ ಹೊಡೆಯುತ್ತಿದ್ದಾರೆ.
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 84,427 ಹೆಕ್ಟೇರ್ ಕ್ಷೇತ್ರದಲ್ಲಿ ಈಗಾಗಲೇ ಶೇ. 75ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಆದರೆ ತೊಗರಿ ಬಿತ್ತನೆಗೆ ಜುಲೈ ತಿಂಗಳ ವರೆಗೆ ಅವಕಾಶವಿರುವುದರಿಂದ ರೈತರು ಹೆಚ್ಚು ತೊಗರಿ ಬಿತ್ತನೆಯಲ್ಲಿ ತೊಡಗಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಹೆಚ್. ಗಡಿಗಿಮನಿ ತಿಳಿಸಿದ್ದಾರೆ.
ಚಿಮ್ಮನಚೋಡ, ಹಸರಗುಂಡಗಿ, ಕನಕಪುರ, ಮಿರಿಯಾಣ, ಕೊಡಂಪಳ್ಳಿ, ಗಡಿಕೇಶ್ವಾರ, ಸುಲೇಪೇಟ, ಮೋಘಾ ಗ್ರಾಮಗಳ ಹೊಲಗಳಲ್ಲಿ ಎಡೆ ಹೊಡೆಯುವ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಸದ್ಯ ಮಳೆ ಅಗತ್ಯವಿದೆ ಎಂದು ರೈತರು ಹೇಳುತ್ತಾರೆ.
Ad
ಅಕ್ಟೋಬರ್ದಲ್ಲಿ ಸಂಪುಟ ಪುನಾರಚನೆ… ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಡಾ.ಅಜಯಸಿಂಗ್
Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್ ತೋರಿಸಿ ದರೋಡೆ
Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್ ತಡೆ
Ravi Teja: ಟಾಲಿವುಡ್ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್ ನಿಧನ
ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ
Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ
Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ
Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್
You seem to have an Ad Blocker on.
To continue reading, please turn it off or whitelist Udayavani.