15 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ


Team Udayavani, Dec 23, 2018, 12:43 PM IST

gul-3.jpg

ಕಲಬುರಗಿ: ರಾಜ್ಯ ಚುನಾವಣಾ ಆಯೋಗವು ಜ. 15 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳಿಸುತ್ತಿದೆ. ಈ ಅವಧಿಯೊಳಗಾಗಿ ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರೆದ ರಾಜಕೀಯ ಪಕ್ಷದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜಕೀಯ ಪಕ್ಷದವರು ಬೂತ್‌ ಮಟ್ಟದ ಏಜೆಂಟರ ಮಾಹಿತಿ ನೀಡಿಲ್ಲ. ಡಿ. 26 ರಂದು ಕರೆದ ರಾಜಕೀಯ ಪಕ್ಷದ ಮುಖಂಡರ ಸಭೆಯಲ್ಲಿ ಕಡ್ಡಾಯವಾಗಿ ಏಜೆಂಟರ ಪಟ್ಟಿ ಸಲ್ಲಿಸಬೇಕು ಎಂದರು.

ಜಿಲ್ಲೆಯಲ್ಲಿ ಅ. 10ರಂದು ಮತದಾರರ ಕರಡು ಯಾದಿ ಪ್ರಕಟಿಸಲಾಗಿದೆ. ಅದರ ಪ್ರಕಾರ ಜಿಲ್ಲೆಯಲ್ಲಿ 101 ಮತಗಟ್ಟೆಗಳನ್ನು ಹೆಚ್ಚಿಗೆ ರೂಪಿಸುವ ಮೂಲಕ ಜಿಲ್ಲೆಯಲ್ಲಿ ಒಟ್ಟು 2368 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಕರಡು ಮತದಾರರ ಯಾದಿಯಂತೆ ಜಿಲ್ಲೆಯಲ್ಲಿ 1063102 ಪುರುಷ, 1033331 ಮಹಿಳೆ ಹಾಗೂ 344 ಇತರೆ ಮತದಾರರು ಸೇರಿದಂತೆ ಒಟ್ಟು 2096777 ಮತದಾರರಿದ್ದು 10490 ವಿಕಲಚೇತನ ಮತದಾರೆಂದು ಗುರುತಿಸಲಾಗಿದೆ ಎಂದರು.

ಅ. 11 ರಿಂದ ಡಿ. 22 ರ ವರೆಗೆ ಕರಡು ಮತದಾರರ ಪಟ್ಟಿ ಪರಿಷ್ಕರಣೆಗೆ ಆಹ್ವಾನಿಸಿದ ಆಕ್ಷೇಪಣೆಗಳನ್ವಯ ಈ ಅವಧಿಯಲ್ಲಿ 21082 ನೂತನ ಮತದಾರರನ್ನು ಸೇರಿಸಲಾಗಿದೆ. 15552 ಮತದಾರರನ್ನು ಪಟ್ಟಿಯಿಂದ ತಗೆದುಹಾಕಲಾಗಿದೆ. 5946 ಜನರ ಹೆಸರು ಅಥವಾ ವಿಳಾಸ ತಿದ್ದುಪಡಿ ಮಾಡಲಾಗಿದ್ದು, 411 ಮತದಾರರು ತಮ್ಮ ಹೆಸರನ್ನು ಬೇರೆಡೆ ವರ್ಗಾಯಿಸಿಕೊಂಡಿದ್ದಾರೆ ಎಂದು ಹೇಳಿದರು. 

ಜಿಲ್ಲೆಯಲ್ಲಿ ಮತಗಟ್ಟೆವಾರು ಅತಿ ಹೆಚ್ಚು ಮತ್ತು ಅತಿ ಕಡಿಮೆ ಹೊಸ ಹೆಸರುಗಳ ನೋಂದಣಿ, ಹೆಸರು ತೆಗೆದುಹಾಕುವ ಪ್ರಕ್ರಿಯೆಯನ್ನು ಗಮನಿಸಲಾಗುತ್ತಿದೆ. ಯಾವುದಾದರು ಮತಗಟ್ಟೆಯಲ್ಲಿ ಸಂಶಯ ಕಂಡುಬಂದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಪರಿಶೀಲಿಸಲಾಗುತ್ತಿದೆ.

ಜಿಲ್ಲೆಯಲ್ಲಿರುವ ಹೆಸರು ಮತ್ತು ಭಾವಚಿತ್ರ ಡುಪ್ಲಿಕೇಟ್‌ ಹೊಂದಿರುವವರ ವಿವರ ಮಾಹಿತಿ ಚುನಾವಣಾ ಆಯೋಗವು ನೀಡಿದೆ. ಅವುಗಳನ್ನು ಪರಿಶೀಲಿಸಲಾಗಿದೆ. ಚುನಾವಣೆ ಆಯೋಗವು ವಿವಿಧ ಮತಕ್ಷೇತ್ರಗಳ ಹಾಗೂ ಜಿಲ್ಲೆಯಲ್ಲಿ ಹೆಸರು ಮತ್ತು ಭಾವಚಿತ್ರ ಡುಪ್ಲಿಕೇಟ್‌ ಇರುವವರನ್ನು ಗುರುತಿಸಲು ಇಆರ್‌ಓ ನೆಟ್‌ ಎಂಬ ತಂತ್ರಾಂಶ ಅಭಿವೃದ್ಧಿ ಪಡಿಸಿದೆ.

ಮುಂದಿನ ದಿನಗಳಲ್ಲಿ ಈ ತಂತ್ರಾಂಶ ಜಿಲ್ಲೆಯಲ್ಲೂ ಅಳವಡಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಕೆಲವರು 35 ರಿಂದ 40ವರ್ಷ ವಯಸ್ಸಿನವರು ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ. ಇಂಥವರು ಈ ಹಿಂದೆ ಯಾವುದೇ ಮತಕ್ಷೇತ್ರದಲ್ಲಿ ಹೆಸರು ನೋಂದಾಯಿಸಿಕೊಂಡಿರುತ್ತಾರೆ. ಅಲ್ಲಿನ ಮತದಾರರ ಚೀಟಿ ಸಲ್ಲಿಸಿದಲ್ಲಿ ಹೆಸರು ವರ್ಗಾಯಿಸಬಹುದು. ಹಳೆಯ ಕೆ.ಟಿ. ಸರಣಿಯ ಮತದಾರರ ಚೀಟಿ ಇದ್ದರೂ ಸಹ ಸಲ್ಲಿಸಿ ನೂತನ ಚೀಟಿ ತಡೆಯಬಹುದಾಗಿದೆ ಎಂದರು.  ಚುನಾವಣಾ ಶಾಖೆ ಶಿರಸ್ತೇದಾರ ಸಂಜಯ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.

 ಮತದಾರ ಪಟ್ಟಿಗೆ ಭಾವಚಿತ್ರ ಸೇರಿಸಿಕೊಳ್ಳಿ 
ಕಲಬುರಗಿ: ಗುಲಬರ್ಗಾ ಉತ್ತರ ಹಾಗೂ ದಕ್ಷಿಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಹೆಸರಿದ್ದು,
ಭಾವಚಿತ್ರವಿಲ್ಲದ ಮತದಾರರು ಎರಡು ದಿನದೊಳಗೆ ತಮ್ಮ ಭಾವಚಿತ್ರವನ್ನು ಸಂಬಂಧಿಸಿದ ಬಿ.ಎಲ್‌.ಒ.ಗಳಿಗೆ ಸಲ್ಲಿಸಿ
ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಸೇರಿಸಿಕೊಳ್ಳಬೇಕು ಎಂದು ಗುಲಬರ್ಗಾ ಉತ್ತರ ಹಾಗೂ ಗುಲಬರ್ಗಾ ದಕ್ಷಿಣ ಕ್ಷೇತ್ರದ ಮತದಾರರ ನೋಂದಣಾಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ 3375 ಮತದಾರರ ಹಾಗೂ ಗುಲಬರ್ಗಾ ದಕ್ಷಿಣ ವಿಧಾನಸಭೆ ಕ್ಷೇತ್ರಗಳಲ್ಲಿ 665 ಮತದಾರರ ಭಾವಚಿತ್ರ ಇರುವುದಿಲ್ಲ. ಈ ಬಗ್ಗೆ ಪಾಲಿಕೆ ಅಂತರ್ಜಾಲ gulbargacity.mrc.gov.in ನಲ್ಲಿ ಪಟ್ಟಿ ಲಭ್ಯವಿದೆ. ಭಾವಚಿತ್ರ ಇಲ್ಲದ ಮತದಾರರು ಕಾಲಮಿತಿಯೊಳಗೆ ಸಂಬಂಧಿಸಿದ ಬಿ.ಎಲ್‌.ಪ. ಗಳಿಗೆ ಭಾವಚಿತ್ರ ಸಲ್ಲಿಸದಿದ್ದಲ್ಲಿ, ಈ ವಿಳಾಸದಲ್ಲಿ ಮತದಾರರು ವಾಸವಿರುವುದಿಲ್ಲ ಎಂದು ಪರಿಗಣಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಅರ್ಹ ಮತದಾರರೆ ಆಗಿದ್ದಲ್ಲಿ ನಮೂನೆ-6ಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.