ವಿಜ್ಞಾನ ಕಿಟ್ ಯೋಜನೆ ಅಂತಿಮಕ್ಕೆ ಸೂಚನೆ


Team Udayavani, Jan 30, 2019, 6:48 AM IST

gul-1.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಆರು ಜಿಲ್ಲೆಗಳ 5517 ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಗಣಿತ, ವಿಜ್ಞಾನ ವಿಷಯಗಳ ಕಿಟ್‌ಗಳನ್ನು ಪೂರೈಸುವ ಸಲುವಾಗಿ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ತಾಂತ್ರಿಕ ವಿಷಯಗಳ ಕುರಿತು ಚರ್ಚಿಸಿ ಅಂತಿಮಗೊಳಿಸಬೇಕೆಂದು ಹೈ.ಕ.ಪ್ರ.ಅ. ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ್‌ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹೈ.ಕ.ಪ್ರ.ಅ. ಮಂಡಳಿ ಸಭಾಂಗಣದಲ್ಲಿ ವಿಜ್ಞಾನ ಹಾಗೂ ಗಣಿತ ಕಿಟ್‌ಗಳನ್ನು ಖರೀದಿಸುವ ಸಂಬಂಧ ವಿವಿಧ ಸಂಸ್ಥೆಗಳೊಂದಿಗೆ ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ವಿಜ್ಞಾನ ವಿಷಯಗಳಲ್ಲಿ ಮಾಡಿ ಕಲಿ ತತ್ವವನ್ನಾಧರಿಸಿ ಗುಣಾತ್ಮಕ ಶಿಕ್ಷಣ ನೀಡಲು ಎಂಟು ವಿದ್ಯಾರ್ಥಿಗಳಿಗೆ ಒಂದು ಕಿಟ್ ಒದಗಿಸಲು ಯೋಜನೆ ರೂಪಿಸಲಾಗಿದ್ದು, ವಿಜ್ಞಾನ ಮತ್ತು ಗಣಿತ ವಿಷಯಗಳ ಪಠ್ಯಗಳನ್ನಾಧರಿಸಿ ಕಿಟ್‌ಗಳಲ್ಲಿ ಇರಬೇಕಾದ ಉಪಕರಣಗಳು ಹಾಗೂ ಪ್ರಾತ್ಯಕ್ಷಿಕೆಗಳ ಖಚಿತ ಮಾಹಿತಿ ಸಂಗ್ರಹಿಸಬೇಕೆಂದರು.

ವಿಜ್ಞಾನ ಉಪಕರಣಗಳನ್ನು ಹೊಂದಿರುವ ಲ್ಯಾಬ್‌ ಇನ್‌ ಎ ಬಾಕ್ಸ್‌ ಎನ್ನುವ ಉಪಕರಣಗಳನ್ನು ಈಗಾಗಲೇ ರಾಜ್ಯದ ಗೌರಿಬಿದನೂರ ಹಾಗೂ ಇತರ ಜಿಲ್ಲೆಗಳ ಶಿಕ್ಷಣ ಇಲಾಖೆಯಲ್ಲಿ ಬಳಸಲಾಗುತ್ತಿದೆ. ಈ ಉಪಕರಣಗಳು ಮಕ್ಕಳಿಗೆ ವಿಷಯ ತಿಳಿಯುವಲ್ಲಿ ಎಷ್ಟರ ಮಟ್ಟಿಗೆ ಅನುಕೂಲವಾಗಿವೆ ಎನ್ನುವುದರ ಕುರಿತು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಸಂಗ್ರಹಿಸಬೇಕು. ಮಕ್ಕಳಿಗೆ ಉಪಯೋಗವಾಗಿದ್ದಲ್ಲಿ ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ವಿಜ್ಞಾನ ಕಿಟ್ ಪೂರೈಸಲು ಅಗಸ್ತ್ಯಾ ಮತ್ತು ಇಂಡಿಯನ್‌ ಲಿಟ್ರಸಿ ಪ್ರೊಜೆಕ್ಟ್‌ನವರು ಮುಂದೆ ಬಂದಿದ್ದು, ಗಣಿತ ಕಿಟ್‌ಗಳು ಪೂರೈಸುವವರು ಹಾಗೂ ಗಣಿತ ಕಿಟ್ ಕುರಿತು ಯಾವುದೇ ಸಿದ್ಧತೆಗಳು ಇಲ್ಲದ ಕಾರಣ ಗಣಿತ ಕಿಟ್‌ಗಳನ್ನು ಮುಂದಿನ ವರ್ಷದಿಂದ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕೆಂದು ಹೇಳಿದರು.

ಹೈ.ಕ. ಭಾಗದ 1130 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸೆಸ್‌ ಪ್ರಾರಂಭಿಸಲು ಸಹ ಯೋಜನೆ ಹಮ್ಮಿಕೊಳ್ಳಲಾಗಿದೆ. ಸ್ಮಾರ್ಟ್‌ ಕ್ಲಾಸೆಸ್‌ ಪ್ರಾರಂಭಿಸಲು ಅವಶ್ಯಕವಿರುವ ಉಪಕರಣಗಳ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಮತ್ತು ನಿರ್ದೇಶಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು. ಇದರಿಂದ ಮಕ್ಕಳಿಗೆ ಯಾವ ರೀತಿಯಲ್ಲಿ ಉಪಯೋಗವಾಗಲಿದೆ ಎನ್ನುವ ಕುರಿತು ವರದಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ| ಡಿ. ಷಣ್ಮುಖ ಮಾತನಾಡಿ, ಶಾಲೆಗಳಿಗೆ ವಿಜ್ಞಾನ ಮತ್ತು ಗಣಿತ ಕಿಟ್‌ಗಳನ್ನು ಪೂರೈಸಲು 1.88 ಕೋಟಿ ರೂ. ಗಳ ಪ್ರಸ್ತಾವನೆಯನ್ನು ಎಚ್.ಕೆ.ಅರ್‌.ಡಿ.ಬಿ.ಗೆ ಸಲ್ಲಿಸಲಾಗಿದೆ. ವಿಜ್ಞಾನದ ಒಂದು ಕಿಟ್ನ್ನು ಎರಡು ವರ್ಷಗಳ ಕಾಲ ಬಳಸಬಹುದಾಗಿದೆ. ಇವುಗಳಲ್ಲಿರುವ ರಾಸಾಯನಿಕ ವಸ್ತುಗಳನ್ನು ಎರಡು ವರ್ಷಗಳ ಕಾಲ ಬಳಸಬಹುದಾಗಿದ್ದು, ಸುಮಾರು 40 ರಿಂದ 50 ಪ್ರತಿಶತ ಉಪಕರಣಗಳು ಮುಂದಿನ ದಿನಗಳಲ್ಲಿ ಮರು ಬಳಸಬಹುದು. ಒಂದು ಶಾಲೆಗೆ 30 ಕಿಟ್‌ಗಳನ್ನು ಸರಬರಾಜು ಮಾಡಿದಲ್ಲಿ ವಿಜ್ಞಾನ ಶಿಕ್ಷಕರು ಪಠ್ಯಕ್ರಮಕ್ಕೆ ಅನುಗುಣವಾಗಿ ಕಿಟ್‌ನಲ್ಲಿರುವ ಪ್ರಾತ್ಯಕ್ಷಿಕೆಗಳನ್ನು ಬಳಸಿಕೊಳ್ಳಬಹುದು. ಇದಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡಬೇಕಾಗುವುದು ಎಂದರು.

ಎಚ್.ಕೆ.ಆರ್‌.ಡಿ.ಬಿ. ಉಪ ಕಾರ್ಯದರ್ಶಿ ಡಾ| ಬಿ. ಸುಶೀಲಾ, ಜಂಟಿ ನಿರ್ದೇಶಕ ಬಸವರಾಜ, ಶಿಕ್ಷಣ ಸಲಹೆಗಾರ ಎಂ.ಬಿ. ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಟಿ. ನಾರಾಯಣಗೌಡ, ಇಂಡಿಯನ್‌ ಲಿಟ್ರಸಿ ಪ್ರೊಜೆಕ್ಟ್‌ನ ಪ್ರೀತಿ, ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಡಾ| ಜಗನ್ನಾಥ ಉಮಾಪತಿ ಡೆಂಗಿ, ಅಗಸ್ತ್ಯಾ ಫೌಂಡೇಶನ್‌ನ ಬಾಬುರಾವ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಬ್ದುಲ್‌ ಗನಿ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.