ಫರ್ಸಿ ನಾಡಲ್ಲಿ ಮಂಜು ಮುಸುಕಿದ ವಾತಾವರಣ
Team Udayavani, Dec 20, 2018, 11:25 AM IST
ಶಹಾಬಾದ: ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ ಉದ್ಯಮಗಳ ಮೂಲಕ ತನ್ನ ಛಾಪು
ಮೂಡಿಸಿರುವ ನಗರದಲ್ಲಿ ಬುಧವಾರ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಂತೆ ಆಗಿದ್ದು ನೋಡುಗರಿಗೆ
ಆಶ್ಚರ್ಯ ಉಂಟಾದರೆ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗಿತ್ತು.
ನಗರದಲ್ಲಿ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣದಿಂದ ಎಲ್ಲಿಲ್ಲದ ಅಚ್ಚರಿ ಉಂಟಾಯಿತು. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅದೃಶ್ಯವಾಗಿ ಕಾಣುತ್ತಿದ್ದನ್ನು ಕಂಡು ರೋಮಾಂಚನವಾಯಿತು.
ವಾಯುವಿಹಾರಕ್ಕೆ ಹೊರಟ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ತಕ್ಷಣ “ಉದಯವಾಣಿ’ಗೆ ತಿಳಿಸಿದರು. ತಮ್ಮ ಮೊಬೈಲ್ ಕ್ಯಾಮಾರದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದರು.
ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆಯನ್ನು ಉತ್ಪತ್ತಿ ಮಾಡಿದರೆ, ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಬಾಣೆಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೇ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆಯ ಪಾಠ ಕಲಿಸಿದೆ ಎಂದು ಹೇಳುತ್ತಾರೆ ನಾಗರಾಜ.
ಮಡಿಕೇರಿ, ಶೈಂಗೇರಿ, ಆಗುಂಬೆ, ಚಾರ್ಮುಡಿ ಘಾಟ್ಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೇ ಸಾಮಾನ್ಯವಾಗಿ ಕಂಡು ಬರುವ ದೃಶ್ಯಗಳು. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಟಿಯಾಗಿ ಕೆಲ ಸಮಯದವರೆಗೆ ಕಣ್ಣನ್ನು
ಮಿಟುಕಿಸದೇ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸಿದರು. ಈ ಮಂಜು ಮುಸುಕಿದ ವಾತಾವರಣದಿಂದ ಸಣ್ಣೂರ ರಸ್ತೆಯಲ್ಲಿ ವಾಹನ ಚಾಲಕರಿಗೆ ತೊಂದರೆಯಾದರೆ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ದ್ವಿಚಕ್ರ ಸವಾರರು ಬಿದ್ದು ಸಣ್ಣ ಪುಟ್ಟ ಅಪಘಾತಗಳಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?