ಆಟೋಟಗಳು ಪಠ್ಯದಷ್ಟೇ ಮುಖ್ಯ: ಮತ್ತಿಮಡು
Team Udayavani, Dec 3, 2018, 10:52 AM IST
ಕಲಬುರಗಿ: ಸ್ವಾಮಿ ನಾರಾಯಣ ಗುರುಕುಲ ಇಂಟರನ್ಯಾಷನಲ್ ಶಾಲೆಯಲ್ಲಿ ನಡೆದ ಗುರುಕುಲ ಒಲಿಂಪಿಕ್ಸ್ -2018 ಕ್ರೀಡಾಕೂಟದ ಚಾಂಪಿಯನ್ ಆಗಿ ಸ್ವಾಮಿ ನಾರಾಯಣ ಗುರುಕುಲ ಇಂಟರನ್ಯಾಷನಲ್ ಶಾಲೆ ಹೊರ ಹೊಮ್ಮಿತು. ಆದರೆ ಈ ಚಾಂಪಿಯನ್ಶಿಪ್ ಪಟ್ಟವನ್ನು ಮಳಖೇಡದ ಆದಿತ್ಯ ಬಿರ್ಲಾ ಪಬ್ಲಿಕ್ ಶಾಲೆಗೆ ಬಿಟ್ಟು ಕೊಡಲಾಯಿತು.
ರನ್ನರ್ ಆಪ್ ಪ್ರಶಸ್ತಿಯು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಪ್ಪ ಪಬ್ಲಿಕ್ ಶಾಲೆಗೆ ನೀಡಲಾಯಿತು. ಪೂಜ್ಯ ಋಷಿ ಚರಣದಾಸ್ ಜಿ. ಸ್ವಾಮೀಜಿ ಹಾಗೂ ಆಡಳಿತ ಮಂಡಳಿ ನಿರ್ಧಾರದಂತೆ ಚಾಂಪಿಯನ್ ಕಪ್ನ್ನು ಆದಿತ್ಯ ಬಿರ್ಲಾ ಪಬ್ಲಿಕ್ ಶಾಲೆಗೆ ಹಾಗೂ ರನ್ನರ್ ಕಪ್ನ್ನು ಅಪ್ಪ ಪಬ್ಲಿಕ್ ಶಾಲೆಗೆ ನೀಡಲಾಯಿತು.
ಗುರುಕುಲ -2018 ಇದನ್ನು ಭಗವಾನ ಶ್ರೀ ಸ್ವಾಮಿ ನಾರಾಯಣ ಸ್ಮರಣೆಯಲ್ಲಿ ಈ ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ ಹಾಗೂ ಮೌಲ್ಯಗಳ ಬೆಳವಣಿಗೆಗಾಗಿ ನೀಡಲಾಗುವುದು ಎಂದು ರವಿವಾರ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿವರಣೆ ನೀಡಲಾಯಿತು.
ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಪರಮ ಪೂಜ್ಯ ಶ್ರೀ ಸುಖವಲ್ಲಭದಾಸ್ ಜೀ ಸ್ವಾಮೀಜಿ ವಹಿಸಿದ್ದರು. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.
ನಂತರ ಮಾತನಾಡಿದ ಅವರು, ದೈಹಿಕ ಪರಿಶ್ರಮ ಕಡಿಮೆಯಾಗಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನದಷ್ಟೇ ಆಟೋಟಗಳು ಮುಖ್ಯವಾಗಿವೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಅಶೋಕ ಸಗರ, ಬಸವರಾಜ ಮಾಲಿಪಾಟೀಲ್, ಜಯಶವರೂ, ವಿಧೇಹ ಸ್ವರೂಪ ಸ್ವಾಮೀಜಿ, ಹಾಗರಗಾ ಗ್ರಾಮ ಪಂಚಾಯಿತಿ ಸದಸ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ