ಜಯತೀರ್ಥರ ಮೂಲವೃಂದಾವನ ಅಪಪ್ರಚಾರ ನಿಲ್ಲಿಸಿ


Team Udayavani, Jun 24, 2022, 2:30 PM IST

13miss-conduct

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ತೀರಲ್ಲಿರುವ ಸುಕ್ಷೇತ್ರ ಮಳಖೇಡದ ಶ್ರೀ ಜಯತೀರ್ಥರ ಮೂಲ ವೃಂದಾವನ ಕುರಿತು ಕೆಲವರು ನಡೆಸುತ್ತಿರುವ ಅಪಪ್ರಚಾರ ನಿಲ್ಲಿಸಬೇಕು ಮತ್ತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರ ಕಲ್ಯಾಣ ಕರ್ನಾಟಕದ ಸಮಸ್ತ ಆಸ್ತಿಕ, ವೈಚಾರಿಕ, ಸಾಂಸ್ಕೃತಿಕ ಲೋಕ, ಶ್ರೀ ಜಯತೀರ್ಥರ ಭಕ್ತ ವೃಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ಮಾಡಿದ ಸಮಸ್ತ ಆಸ್ತಿಕ, ವೈಚಾರಿಕ, ಸಾಂಸ್ಕೃತಿಕ ಲೋಕ, ಶ್ರೀ ಜಯತೀರ್ಥರ ಭಕ್ತ ವೃಂದದವರು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಜುಲೈ 17,18,19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವ ವೃಂದಾನದ ಗಡ್ಡೆಯಲ್ಲಿ ರಘುವರ್ಯ ತೀರ್ಥರ ವೃಂದಾವನಕ್ಕೆ ಜಯತೀರ್ಥರ ವೃಂದಾವನ ಎಂದು ಬಿಂಬಿಸಿ ಆರಾಧನೆ ಮಾಡಲು ಯೋಜಿಸಿ ಕೆಲವರು ಹೇಳಿಕೆ ನೀಡಿದ್ದಾರೆ. ಸರಕಾರ ಇದನ್ನು ತಡೆಯಬೇಕು. ಇಲ್ಲದಿದ್ದರೇ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಾಂಸ್ಕೃತಿಕ ಲೋಕದ ನೇತೃತ್ವ ವಹಿಸಿದ್ದ ಡಾ| ಶ್ರೀಶೈಲ ನಾಗರಾಳ, ಟೀಕಾಚಾರ್ಯರ ವೃಂದಾವನ ಇರೋದು ಮಳಖೇಡದಲ್ಲಿ ಎಂದು ಎಲ್ಲರಿಗೂ ಗೊತ್ತು. ಹೀಗಿದ್ದರೂ ಅದ್ಯಾಕೆ ಇಂತಹ ಸಂಗತಿಯನ್ನು ವಿವಾದಕ್ಕೆ ತಂದರೋ? ವಿವಾದ ಮಾಡುವುದನ್ನು ಕೈಬಿಟ್ಟು ಶತಮಾನಗಳ ಐತಿಹ್ಯ, ಜನರ ನಂಬಿಕೆಗಳನ್ನು ಎಲ್ಲರು ಒಪ್ಪಲೇಬೇಕು. ವಿವಾದ ಇನ್ನಷ್ಟು ಗಂಭೀರ ಸ್ವರೂಪ ಪಡೆಯುವ ಮುನ್ನವೇ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಉತ್ತರಾದಿ ಮಠದ ರಘೋತ್ತಮ ಘಂಟಿ, ಅರವಿಂದ ನವಲಿ, ಮುಕುಂದ ದೇಶಪಾಂಡೆ, ಪ್ರಶಾಂತ ಕೋರಳ್ಳಿ, ಶರಣ ಸಾಹಿತ್ಯ ಪರಿಷತ್‌ ಚಿತ್ತಾಪುರದ ಡಾ| ಮಲ್ಲಿನಾಥ ತಳವಾರ, ರಂಗಾಯಣದ ನಿರ್ದೇಶಕ ಪ್ರಭಾಕರ ಜೋಶಿ, ಸಾಹಿತಿ ಬಳಗದ ಡಾ| ಕಾಶೀನಾಥ ಹಿರೇಮಠ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಪವನ ಫಿರೋಜಾಬಾದ್‌, ಗುಂಡಾಚಾರ್ಯ ನರಿಬೋಳ, ದಾಸ ಸಾಹಿತ್ಯ ಅಕಾಡೆಮಿಯ ರವಿ ಲಾತೂರಕರ್‌, ಪಾರಾಯಣ ಸಂಘಗಳ ಸದಸ್ಯರು, ಪಂ. ಗೋಪಾಲಾಚಾರ್ಯ, ಪಂ. ಹಣಮಂತಾಚಾರ್ಯ, ವಿಷ್ಣುದಾಸಾಚಾರ್ಯ ಖಜೂರಿ, ಚಿತ್ತಾಪುರದ ಸತ್ಯಾತ್ಮ ಸೇನೆ ಸದಸ್ಯರು, ಜೇವರ್ಗಿ, ಕಲಬುರಗಿಯ 52 ಸಂಘಟನೆಗಳ ಸದಸ್ಯರು, ಪ್ರಮುಖರು ಭಾಗಿಯಾಗಿದ್ದರು.

ನಮಗೆ ಬುದ್ಧಿ ಬಂದಾಗಿನಿಂದ ಜಯತೀರ್ಥರ ವೃಂದಾವನ ಸೇಡಂ ತಾಲೂಕಿನ ಕಾಗಿಣಾ ನದಿ ತೀರಲ್ಲಿರುವ ಸುಕ್ಷೇತ್ರ ಮಳಖೇಡದಲ್ಲಿದೆ ಎಂದು ಅರಿತಿದ್ದೇವೆ. ಇದಕ್ಕೆ ಸಾಕಷ್ಟು ಪುರಾವೆಗಳಿವೆ. ನಾವು ಎಲ್ಲ ರೀತಿಯ ಧಾರ್ಮಿಕ ಕಾರ್ಯಗಳನ್ನು ಇಲ್ಲಿಯೇ ಮಾಡುತ್ತಾ ಬಂದಿದ್ದೇವೆ. ಈಗ ಏಕಾಏಕಿಯಾಗಿ ಆನೆಗೊಂದಿಯಲ್ಲಿ ವೃಂದಾವನ ಇದೆ. ಅಲ್ಲಿ ಜುಲೈನಲ್ಲಿ ಆರಾಧನೆ ಮಾಡುತ್ತೇವೆ ಎನ್ನುವ ಕೆಲವರ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಕೂಡಲೇ ಸರಕಾರ ಮಧ್ಯ ಪ್ರವೇಶಿಸಬೇಕು. ಇಲ್ಲದಿದ್ದರೇ ದೊಡ್ಡ ಹೋರಾಟವೇ ಆಗುತ್ತದೆ. -ರಾಮಾಚಾರ್ಯ ಘಂಟಿ, ಉತ್ತರಾದಿ ಮಠಾಧಿಕಾರಿ

ಮಳಖೇಡ ವಿಚಾರದಲ್ಲಿ ಅನಗತ್ಯ ವಿವಾದ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ. ಇದು ಸರ್ವಥಾ ಸರಿಯಲ್ಲ. ಮಾಧ್ವ ಸಂಪ್ರದಾಯದ ಮಹಾನ್‌ ಯತಿಗಳು ಮಳಖೇಡದಲ್ಲಿರೋದು ಎಲ್ಲರಿಗೂ ತಿಳಿದ ವಿಚಾರ. ಹೀಗಿದ್ದರೂ ವಿವಾದ ಎಬ್ಬಿಸುವುದು ಸರಿಯಲ್ಲ. ಇದನ್ನು ಖಂಡಿಸುತ್ತೇವೆ. ಯಾವುದೇ ಇತಿಹಾಸವನ್ನು ಸುಳ್ಳಿನಿಂದ ಸತ್ಯ ಮಾಡಲು ಸಾಧ್ಯವಿಲ್ಲ. -ಡಾ| ಗುರು ಮಧ್ವಾಚಾರ್ಯ ನವಲಿ, ಮುಖ್ಯಸ್ಥ, ಸಂಸ್ಕೃತ ವಿಭಾಗ ಎನ್‌ವಿ ಸಂಸ್ಥೆ

ಮಳಖೇಡ ಉತ್ತರಾದಿ ಮಠದ ಶ್ರದ್ಧಾಕೇಂದ್ರವಾಗಿದೆ. ಟೀಕಾರಾಯರ ಗದ್ದುಗೆಗೆ ಬಹಳ ವರ್ಷಗಳಿಂದ ಭಕ್ತರು ನಡೆದುಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ವಿವಾದ ಉಂಟು ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಸರ್ಕಾರ ವಿವಾದ ಇತ್ಯರ್ಥ ಮಾಡಬೇಕು. -ಎಂ ಎಸ್‌.ಪಾಟೀಲ ನರಿಬೋಳ, ಪೇಜಾವರ ಸೇನೆ ಅಧ್ಯಕ್ಷ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.