ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾಪುರುಷ: ಸುಶೀಲಾ
Team Udayavani, Feb 16, 2018, 11:47 AM IST
ಸೇಡಂ: ಸಂತ ಸೇವಾಲಾಲ ಮಹಾರಾಜರು ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾನ್ ವ್ಯಕ್ತಿತ್ವ ಹೊಂದಿದವರು ಎಂದು ಸಹಾಯಕ ಆಯುಕ್ತೆ ಡಾ| ಸುಶೀಲಾ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪ್ರಥಮ ಬಾರಿಗೆ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡು ಸಂತ ಸೇವಾಲಾಲ ಮಹಾರಾಜರ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸೇವಾಲಾಲ ಮಹಾರಾಜರು ಕೇವಲ ಬಂಜಾರಾ ಸಮಾಜಕ್ಕೆ ಸೀಮಿತವಲ್ಲ.
ಅವರ ಆದರ್ಶಮಯ ಬದುಕು ಇಡೀ ಜೀವ ಸಂಕುಲಕ್ಕೆ ದಾರಿಮಾಡಿ ಕೊಡುವಂತದ್ದು. ಯುವ ಜನತೆ ಅವರ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದರು. ತೋಟಗಾರಿಕೆ ಮಹಾಮಂಡಳಿ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ, ಉಪನ್ಯಾಸಕ ಪಿ.ಜಿ. ರಾಠೊಡ ಮಾತನಾಡಿದರು.
ತಾಪಂ ಅಧ್ಯಕ್ಷೆ ಸುರೇಖಾ ಪುರಾಣಿಕ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚವ್ಹಾಣ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ ಹೂಡಾ, ಪ್ರೋಬೇಷನರಿ ತಹಶೀಲ್ದಾರ್ ಅಜುಂತಬಸುಮ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೊಡ, ಬಂಜಾರ ಸಮಾಜದ ತಾಲೂಕಾಧ್ಯಕ್ಷ ರಾಜು ಚವ್ಹಾಣ, ನಗರಧ್ಯಕ್ಷ ಅಶೋಕ ಪವಾರ, ಗೋಪಾಲ ರಾಠೊಡ, ಹೆಮ್ಲಾ ನಾಯಕ ಇದ್ದರು. ಸುಬ್ಬಣ್ಣ ಜಮಖಂಡಿ ಸ್ವಾಗತಿಸಿದರು. ಶಿವಶಂಕರಯ್ಯಸ್ವಾಮಿ ನಿರೂಪಿಸಿದರು. ಶರಣಯ್ಯಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್