ತೇಲ್ಕೂರ ಅವಳಿ ಜಿಲ್ಲೆಯ ಭರವಸೆ ಬೆಳಕು
Team Udayavani, Aug 20, 2022, 2:38 PM IST
ಸೇಡಂ: ಸಂಪೂರ್ಣ ಮುಚ್ಚಿದ್ದ ಹಾಗೂ ಯಾವುದಕ್ಕೂ ಉಪಯೋಗಿಲ್ಲ ಎಂದು ಭಾವಿಸಿದ್ದ ಡಿಸಿಸಿ ಬ್ಯಾಂಕ್ಗೆ ಜೀವನೀಡಿ ಕಲಬುರಗಿ-ಯಾದಗಿರಿ ಅವಳಿ ಜಿಲ್ಲೆಗಳ ಪಾಲಿಗೆ ಭರವಸೆಯ ಬೆಳಕಾಗಿದ್ದಾರೆ ಎಂದು ಸಂಸದ ಡಾ|ಉಮೇಶ ಜಾಧವ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆ ಆಗುತ್ತಿರುವವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ನೂರಾರು ಜನರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.
ಮೋದಿ ನೇತೃತ್ವದಲ್ಲಿ ದೇಶ ಸದೃಢವಾಗುತ್ತಿದೆ. ದೇಶಕ್ಕೆ ಶ್ರೇಷ್ಠ ಪ್ರಧಾನಿ ಸಿಕ್ಕಿದ್ದಾರೆ. ಅದೇ ರೀತಿ ಶಾಸಕ ರಾಜಕುಮಾರ ಪಾಟೀಲ ಹಿಡಿದ ಕಾರ್ಯ ಪೂರ್ಣವಾಗುವವರೆಗೂ ಬಿಡುವವರಲ್ಲ. ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಕಾರ್ಯಕರ್ತರು ಅವರಿಗೆ ಶಕ್ತಿಯಾಗಿ ನಿಲ್ಲಬೇಕು ಎಂದು ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆ, ರಾಜ್ಯ ಸರ್ಕಾರದ ಕೊಡುಗೆಗಳು ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕ್ಷೇತ್ರದ ಬಗ್ಗೆ ಇರುವ ಕಾಳಜಿ ನೋಡಿ ಅನೇಕ ಪಕ್ಷಗಳ ಜನರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.
ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ದೀಪ ಹಚ್ಚಿ ಹುಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಪರ್ವ ಆರಂಭವಾಗಿದೆ. ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಕೆಲವು ಅನಿವಾರ್ಯ ಕಾರಣಕ್ಕೆ ಕೆಲ ಕೆಲಸಗಳು ಆಗಿರದಿದ್ದರೆ ಚಿಂತಿಸುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳು ಜರುಗಲಿವೆ ಎಂದರು.
ಬಿಜೆಪಿ ತಾಲೂಕಾಧ್ಯಕ್ಷ ಪರ್ವತರೆಡ್ಡಿ ಪಾಟೀಲ, ನಗರಾಧ್ಯಕ್ಷ ಸತೀಶ ಪಾಟೀಲ ತರನಳ್ಳಿ, ಪ್ರಮುಖರಾದ ಧರ್ಮಣ್ಣ ಇಟಗಾ, ಶಿವುಕುಮಾರ ಪಾಟೀಲ (ಜಿಕೆ) ತೇಲ್ಕೂರ, ಕಲ್ಯಾಣಪ್ಪ ಪಾಟೀಲ, ನಾಗಪ್ಪ ಕೊಳ್ಳಿ, ಮುಕುಂದ ದೇಶಪಾಂಡೆ, ರಾಮುನಾಯಕ್ ರಾಠೊಡ, ಓಂಪ್ರಕಾಶ ಪಾಟೀಲ, ವಿಜಯಕುಮಾರ ಆಡಕಿ, ವೆಂಕಟಯ್ಯ ಮುಸ್ತಾಜರ, ವಿಜಯಕುಮಾರ ಶರ್ಮಾ, ಆನಂದ ಚಂದಾಪೂರ, ರಾಜು ಕಟ್ಟಿ, ಮಲ್ಲಿಕಾರ್ಜುನ ದಳಪತಿ, ರುದ್ರಮುನಿ ರಾಮತೀರ್ಥಕರ್, ಶಿವಲಿಂಗಪ್ಪ ಶಟ್ಟಿ, ಸಿದ್ಧಲಿಂಗ ಗೌತಮ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ