ಭಾರತೀಯರ ಬಗ್ಗೆ ವಿದೇಶಿಗರಿದ್ದ ಕಲ್ಪನೆಯೇ ಬೇರೆ


Team Udayavani, Aug 28, 2018, 11:41 AM IST

gul-6.jpg

ಕಲಬುರಗಿ: ಭಾರತದ ದೇವತೆಗಳಂತೆಯೇ ಇಲ್ಲಿನ ಮನುಷ್ಯರು ಕೂಡ ನಾಲ್ಕು ತಲೆಗಳು, ಹತ್ತಾರು ಕೈ-ಕಾಲುಗಳು, ಎಂಟು ಭುಜ ಹೊಂದಿದ್ದಾರೆ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳ ಸಾಮಾನ್ಯ ಜನತೆ ಭಾವಿಸಿದ್ದರು ಎಂದು ಬೆಂಗಳೂರು ನಾಸಾದ ಖ್ಯಾತ ಸಂಶೋಧಕ, ಇತಿಹಾಸ ತಜ್ಞ ಡಾ| ಎಸ್‌. ಶೆಟ್ಟರ ಹೇಳಿದರು.

ನಗರದ ಮಾತೋಶ್ರೀ ನೀಲಗಂಗಮ್ಮ ಗು. ಅಂದಾನಿ ಆರ್ಟ್‌ ಗ್ಯಾಲರಿಯಲ್ಲಿ ದಿ ಐಡಿಯಲ್‌ ಫೈನ್‌ ಆರ್ಟ್‌ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ 2016 ಮತ್ತು 2017ನೇ ಸಾಲಿನ “ದೃಶ್ಯಭೂಷಣ” ಪ್ರಶಸ್ತಿ ಪ್ರದಾನ ಮತ್ತು ಕಲಾವಿದರ ಕೃತಿಗಳ ಪ್ರದರ್ಶನ ಉದ್ಘಾಟಿಸಿದ ಅವರು,  ನಂದಕುಮಾರಸ್ವಾಮಿ ಮತ್ತು ಶಿಲ್ಪಕಲೆ ಕುರಿತು ಉಪನ್ಯಾಸ ನೀಡಿದರು.

ಭಾರತೀಯ ಕಲೆ ಹಾಗೂ ಸಂಸ್ಕೃತಿಗೆ ಪುರಾತನ ಇತಿಹಾಸವಿದ್ದು, ಭಾರತೀಯ ಕಲೆ ಹಾಗೂ ಸಂಸ್ಕೃತಿಯನ್ನು ಆನಂದ ಕುಮಾರಸ್ವಾಮಿ 19ನೇ ಶತಮಾನದಲ್ಲಿ ಹೊರಜಗತ್ತಿಗೆ ಪರಿಚಯಿಸಿದ ಮೊದಲಿಗರು.  ನಂತರ ಪಾಶ್ಚಿಮಾತ್ಯ ರಾಷ್ಟ್ರಗಳ ವಿದ್ಯಾವಂತರು ಮತ್ತು ಕಲಾಸಕ್ತರ ಅಧ್ಯಯನದಿಂದ ಭಾರತದ ಬಹು ಸಂಸ್ಕೃತಿ ಹೊರಗಡೆ ಬಂತು. ಪಾಶ್ಚಿಮಾತ್ಯ ದೇಶಗಳ ಸಾಮಾನ್ಯ ನಾಗರಿಕರು ಭಾರತದ ದೇವತೆಗಳಂತೆ ಇಲ್ಲಿನ ಮನುಷ್ಯರಿಗೂ ಹಲವು ತಲೆಗಳು, ಕೈ-ಕಾಲುಗಳು, ಭುಜಗಳಿವೆ ಎಂದು ತಿಳಿದುಕೊಂಡಿದ್ದರು. ಭಾರತೀಯ ಕಲೆಯಲ್ಲೇ ದೈವಿಶಕ್ತಿ ಇದೆ ಎಂದು ಹೇಳಿದರು. ಕಲಾವಿದರು ದೊಡ್ಡ ಪ್ರತಿಭಾವಂತರಾದರೂ ಒಬ್ಬರನ್ನು ಮತ್ತೂಬ್ಬರು ಮೆಚ್ಚುವುದಿಲ್ಲ. ಅವರೊಬ್ಬರು ಜಗಳಗಂಟರು ಎಂದು ಡಾ| ಶೆಟ್ಟರ ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ದಿ| ಐಡಿಯಲ್‌ ಫೈನ್‌ ಸೊಸೈಟಿ ಕಾರ್ಯದರ್ಶಿ ಮತ್ತು ಖ್ಯಾತ ಕಲಾವಿದ ಡಾ| ವಿ.ಜಿ. ಅಂದಾನಿ ಮಾತನಾಡಿ, ಕಲಾವಿದರಿಗೆ ಕೆಲವೇ ಕೆಲವು ಪ್ರಶಸ್ತಿಗಳು ಸೀಮಿತವಾಗಿದೆ. ಹೀಗಾಗಿ ಎಲೆಮರೆ ಕಾಯಿಯಂತೆ ಇರುವ
ಕಲಾವಿದರನ್ನು ಗುರುತಿಸಿ ಅವರಿಗೆ ಸಂಸ್ಥೆಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಮುಂದಿನ ವರ್ಷದಿಂದ ಹಿರಿಯ ಕಲಾವಿದ ಎಂ.ಬಿ. ಪಾಟೀಲ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಮರಣಿಕೆ ಹಾಗೂ 10,000 ರೂ. ನೀಡಲಾಗುವುದು ಎಂದು ಹೇಳಿದರು.
 
ಸಮಾರಂಭದಲ್ಲಿ ಬೆಂಗಳೂರಿನ ಕಲಾವಿದ ಕೆ.ಎಸ್‌.ಅಪ್ಪಾಜಯ್ಯ ಅವರಿಗೆ 2016ನೇ ಸಾಲಿನ ಹಾಗೂ ಬೀದರ ಜಿಲ್ಲೆಯ ಹುಮನಾಬಾದನ ಎಂ.ವಿ. ಕಂಬಾರ ಅವರಿಗೆ 2017ನೇ ಸಾಲಿನ “ದೃಶ್ಯಭೂಷಣ” ಪ್ರಶಸ್ತಿಯನ್ನು ಡಾ| ಎಸ್‌.
ಶೆಟ್ಟರ ವಿತರಿಸಿ ಸನ್ಮಾನಿಸಿದರು. ಪ್ರಾಂಶುಪಾಲ ಶೇಷಿರಾವ್‌ ಬಿರಾದಾರ, ರಾಜಶೇಖರ ಎಸ್‌., ಡಾ| ಸತೀಶ ವಲ್ಲೆಪೂರೆ ಇದ್ದರು. ವಿದ್ಯಾರ್ಥಿ ಅನುಷಾ ಪ್ರಾರ್ಥನೆ ಗೀತೆ ಹಾಡಿದರು. ಎಚ್‌.ವಿ. ಮಂತಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.