26ರಂದು ಹೈದರಾಬಾದ ಕರ್ನಾಟಕ ಬಂದ್‌


Team Udayavani, Feb 19, 2018, 11:25 AM IST

gul-4.jpg

ಕಲಬುರಗಿ: ಹೈದ್ರಾಬಾದ್‌ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಜಾರಿಗೆ ಬಂದಿರುವ 371ಜೆ ವಿಧಿ ಜಾರಿಗೆ ಅಧಿಕಾರಿಗಳು ಇಲ್ಲದ ಸಲ್ಲದ ನಿಯಮಾವಳಿ ರೂಪಿಸುತ್ತ ಅನ್ಯಾಯ ಎಸಗುತ್ತಿರುವುದನ್ನು ಸರಿಪಡಿಸುವಂತೆ ಹಾಗೂ
ಕಲಂ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಫೆ. 26ರಂದು ಹೈ.ಕ ಭಾಗದ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೈ.ಕ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವೈಜನಾಥ ಪಾಟೀಲ ಹೇಳಿದರು. ನಗರದ ಹಿಂದಿ ಪ್ರಚಾರಸಭಾದಲ್ಲಿ ನಡೆದ ಹೈ.ಕ ಹೋರಾಟ ಸಮಿತಿ ವಿಭಾಗೀಯ ಸಭೆಯಲ್ಲಿ ಅವರು ಮಾತನಾಡಿದರು. ಲೋಪ-ದೋಷ ಎತ್ತಿಕೊಂಡು ಪದೇ-ಪದೇ ಬೆಂಗಳೂರಿಗೆ ಅಲೆದಾಡುವಂತಾಗುತ್ತಿದೆ. 

ಗ್ರಾಪಂ ಡಾಟಾ ಎಂಟ್ರಿ ನೇಮಕಾತಿಯಲ್ಲಿ 371ನೇ ಜೆ ಮೀಸಲಾತಿ ಪಾಲನೆ ಮಾಡದೇ ಇದ್ದ ಸಂದರ್ಭದಲ್ಲಿ ಹೋರಾಟಕ್ಕೆ ಧುಮುಕಿದಾಗ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆಯೇ ಹೊರತು ಅಧಿಸೂಚನೆ ರದ್ದುಪಡಿಸಿಲ್ಲ. ಅದೇ ರೀತಿ ನ್ಯಾಯಾಧೀಶರ ನೇಮಕಾತಿಯಲ್ಲೂ 371ನೇಜೆ ಮೀಸಲಾತಿ ಪಾಲನೆ ಮಾಡಿಲ್ಲ. ಪ್ರತಿಯೊಂದಕ್ಕೂ ಹೋರಾಟದ ಅನಿವಾರ್ಯ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ಬಂದ್‌ವೊಂದೇ ಪರಿಹಾರ ಎಂಬುದನ್ನು ಮನಗಂಡು ವಿಭಾಗೀಯ ಬಂದ್‌ ಚಳವಳಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು.
 
ಹಿಂದುಳಿದ ಹೈದ್ರಾಬಾದ್‌ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ 371ನೇ (ಜೆ) ಕಲಂನಡಿ ನೇಮಕಾತಿಗಳಲ್ಲಿ ಅನ್ಯಾಯ ಆಗುತ್ತಿದೆ. ರಾಜ್ಯ ಸರ್ಕಾರ ತಪ್ಪುಗಳನ್ನು ಸರಿಪಡಿಸದೇ ಹೋದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟಕ್ಕೂ ಹಿಂದೇಟು ಹಾಕುವುದಿಲ್ಲ. ಅಲ್ಲದೇ ಜತೆಗೆ ಕಾಂಗ್ರೆಸ್‌ ಪಕ್ಷವನ್ನು ತ್ಯಜಿಸುವ ಕುರಿತೂ ಚಿಂತನೆ ನಡೆಸುವುದಾಗಿ ಹೇಳಿದರು. 

ಎಐಸಿಸಿಐ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಜನಾಶೀರ್ವಾದ ಯಾತ್ರೆ ಬಹಿರಂಗ ಸಮಾವೇಶದಲ್ಲಿ 371ನೇ (ಜೆ) ಜಾರಿ ಕುರಿತು ಸುಳ್ಳು ಹೇಳಿಕೆ ನೀಡಿದರು. ಅದಕ್ಕೆ ಸ್ಥಳೀಯ ನಾಯಕರು ನೀಡಿದ ತಪ್ಪು ಮಾಹಿತಿಯೇ ಕಾರಣ ಎಂದು ವೈಜನಾಥ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

371ನೇ (ಜೆ) ಮೀಸಲಾತಿ ಅನ್ಯಾಯ ವಿರೋಧಿಸಿ ಮಾಜಿ ಸಚಿವ ಡಾ| ವೈಜನಾಥ ಪಾಟೀಲ ಅವರು ಕಾಂಗ್ರೆಸ್‌ ಪಕ್ಷ ತ್ಯಜಿಸಿ, ಹೋರಾಟ ಸಮಿತಿ ನೇತೃತ್ವದಲ್ಲಿಯೇ ಚುನಾವಣೆ ಕಣಕ್ಕಿಳಿಯಲು ಸಹ ಸಭೆಯಲ್ಲಿ ಚರ್ಚೆ ಆಯಿತು.

371ನೇ (ಜೆ)ಯಡಿ ನೇಮಕಾತಿಯಲ್ಲಿ ಹೈದ್ರಾಬಾದ್‌ ಕರ್ನಾಟಕದವರಿಗೆ ಈಗಲೂ ಸಹ ಅನ್ಯಾಯ ಆಗುತ್ತಿದೆ. ಗ್ರಾಪಂ ಡಾಟಾ ಎಂಟ್ರಿ ಆಪರೇಟರ್‌ 6022 ಹುದ್ದೆಗಳ ನೇಮಕಾತಿ ಕುರಿತು 371ನೇ (ಜೆ) ಮೀಸಲಾತಿ ಕಡೆಗಣಿಸಲಾಯಿತು. ಹೋರಾಟ ಮಾಡಿದ್ದರಿಂದ ಅದನ್ನು ತಡೆಯಲಾಗಿದೆ. 

ಆದಾಗ್ಯೂ, ಅರ್ಜಿ ಸಲ್ಲಿಸಿದವರು ಇಲ್ಲಿಯವರೆಗೆ ಯಾವುದೇ ಕ್ರಮ ಇರದೇ ಇರುವುದರಿಂದ ನೊಂದಿದ್ದಾರೆ. ಕೂಡಲೇ ನೇಮಕಾತಿಯನ್ನು 371ನೇ (ಜೆ)ಯಡಿ ಕೈಗೊಳ್ಳಬೇಕು. 100 ಜನ ನ್ಯಾಯಾಧೀಶರ ನೇಮಕಾತಿಯಲ್ಲಿಯೂ 371ನೇ (ಜೆ) ಮೀಸಲಾತಿ ಕಡೆಗಣಿಸಲಾಗಿದೆ.

ಶಿಕ್ಷಕರ ನೇಮಕಾತಿಯಲ್ಲಿಯೂ ಈ ಭಾಗದವರಿಗೆ ಅನ್ಯಾಯ ಆಗಿದೆ. ಅನ್ಯಾಯ ಆದಾಗ ನ್ಯಾಯಾಲಯಕ್ಕೆ ಹೋಗಿ
ತಡೆಯಾಜ್ಞೆ ತರಬೇಕು. ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಭೆಯಲ್ಲಿ ಕಳವಳ ವ್ಯಕ್ತಪಡಿಸಲಾಯಿತು.
 
ಅಲ್ಲಮಪ್ರಭು ಬೆಟ್ಟದೂರು, ಅಬ್ದುಲ್‌ ಹಮೀದ್‌, ಅಶೋಕ ಮಣ್ಣೂರ, ರಮೇಶ ಹೊಸಮನಿ, ಗುರುಶಾಂತ ಬಿರಾದಾರ,
ಶಿವಶಂಕರ ಗಾರಂಪಳ್ಳಿ, ಜಗನ್ನಾಥರೆಡ್ಡಿ, ವಂದನಾ ಜೈನ್‌, ಜಿಪಂ ಸದಸ್ಯ ಗೌತಮ ಪಾಟೀಲ ಸೇರಿದಂತೆ ಅನೇಕ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.