ಹೊಸ ಶಿಕ್ಷಣ ನೀತಿ ಸುಳ್ಳಿನ ದಂತಕತೆ
Team Udayavani, Aug 10, 2022, 6:31 PM IST
ಕಲಬುರಗಿ: ರಾಷ್ಟ್ರದಲ್ಲಿ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿ ವಿರೋಧಿಸಿ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಷ್ಟ್ರ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು “ಅಖೀಲ ಭಾರತ ಪ್ರತಿಭಟನಾ ದಿನ’ ಅಂಗವಾಗಿ ಇತ್ತೀಚೆಗೆ ಹೋರಾಟ ನಡೆಸಿದರು.
ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ಎಸ್. ಇಬ್ರಾಹಿಂಪುರ, ಎನ್ಇಪಿ-2020 ನೀತಿಯ ಶ್ರೇಷ್ಠತೆ ಶಿಕ್ಷಣದಲ್ಲಿ ಐತಿಹಾಸಿಕ ಕ್ರಾಂತಿ ಎಂಬಂತೆ ಹೆಣೆದ ಸುಳ್ಳಿನ ದಂತಕತೆಗಳ ಭಾಗವಾಗಿದೆ. ಕೇಂದ್ರ ಸರಕಾರ ಹೊಸ ನೀತಿ ಮೂಲಭೂತವಾಗಿ ಎಲ್ಲರಿಗೂ ಶಿಕ್ಷಣ ದೊರಕಿಸುವಂತೆ ಇರಬೇಕು. ಆದರೆ ಈಗಾಗಲೇ ಬಂದಿರುವ ಮತ್ತು ಬರುತ್ತಿರುವ ಶಿಕ್ಷಣ ನೀತಿಗಳು ದೇಶದ ಬಹುಸಂಖ್ಯಾತ ಜನಗಳಿಗೆ ಶಿಕ್ಷಣದ ಬಾಗಿಲುಗಳು ಮುಚ್ಚುವ ನೀತಿಗಳಾಗಿವೆ. ಎನ್.ಇ.ಪಿ-2020ರ ಶಬ್ದಾಡಂಭರದ ಡಾಕ್ಯುಮೆಂಟ್ ಓದಿದಾಗ ಹಲವು ವೈರುಧ್ಯಗಳಿಂದ ಕೂಡಿರುವುದು ಕಾಣುತ್ತದೆ. ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಉನ್ನತ ಶಿಕ್ಷಣ ಸಚಿವರು ಯಾವುದೇ ಚರ್ಚೆ, ಸಂವಾದಗಳನ್ನು ಮಾಡದೇ, ಅನುಷ್ಠಾನದ ರೂಪುರೇಷೆಗಳನ್ನು ರೂಪಿಸದೇ ಮತ್ತು ಪೂರ್ವ ತಯಾರಿಯಿಲ್ಲದೇ ಕೋವಿಡ್ ಸಂಕಷ್ಟ ಕಾಲದಲ್ಲಿ ಏಕಾಏಕಿ ರಾಜ್ಯದ ಉನ್ನತ ಶಿಕ್ಷಣದ ಮೇಲೆ ಎನ್ಇಪಿ-2020 ಹೇರಿದರು ಎಂದರು.
ಎಐಎಸ್ಇಸಿ ಜಿಲ್ಲಾ ಮುಖಂಡರಾದ ಅಶ್ವಿನಿ ಮಾತನಾಡಿ, ಎನ್ಇಪಿ-2020 ನೀತಿಯು ಶಿಕ್ಷಣ ವಿರೋಧಿ, ವಿದ್ಯಾರ್ಥಿ ವಿರೋಧಿಯಾದ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಐಎಸ್ಇಸಿ ಜಿಲ್ಲಾ ಸಮಿತಿಯ ಸದಸ್ಯರಾದ ವಿಶಾಲಾಕ್ಷಿ ಪಾಟೀಲ್, ಜಾನಕಿ ಎಸ್. ಗುದ್ದಿ, ಶಿವುಕುಮಾರ್ ಕುಸಾಳೆ, ವಿಜಯಾ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ