ಸಪ್ಪಣ್ಣಾರ್ಯರ ಜೀವನ ಅರಿವು ಅತ್ಯಗತ್ಯ


Team Udayavani, Aug 19, 2018, 10:36 AM IST

gul-3.jpg

ಸೇಡಂ: ಅಕ್ಷರದ ಅರಿವಿಲ್ಲದಿರುವಾಗ ಭಕ್ತಿ ದಾಸೋಹ ನೀಡಿದ ಕೊತ್ತಲ ಬಸವೇಶ್ವರ ದೇವಾಲಯದ ಲಿಂ| ಸಪ್ಪಣ್ಣಾರ್ಯ ಶಿವಯೋಗಿಗಳ ಜೀವನ ಅರಿವು ಅತ್ಯಗತ್ಯ ಎಂದು ಹಿರಿಯ ಸಾಹಿತಿ ಗವೀಶ ಹಿರೇಮಠ ಹೇಳಿದರು.

ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಪರಮ ಪೂಜ್ಯ ಲಿಂ| ಮಡಿವಾಳಯ್ಯ ಸಾಮೀಜಿ ಪುಣ್ಯಸ್ಮರಣೆ ಪ್ರಯುಕ್ತ ಶ್ರೀ ಕೊತ್ತಲ ಬಸವೇಶ್ವರ ಪಂಚಮಂಡಳಿ, ಮಡಿವಾಳೇಶ್ವರ ಭಜನಾ ಮಂಡಳಿ, ಸಪ್ಪಣಾರ್ಯ ದಾಸೋಹ ಸಮಿತಿ, ಲಾಯನ್ಸ್‌ ಕ್ಲಬ್‌, ರೆಡ್‌ ಕ್ರಾಸ್‌ ಸೊಸೈಟಿ, ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ, ಬಸವ ಬಳಗ, ಅಕ್ಕನ ಬಳಗ, ಯುವ ಬಳಗ ಸಹಯೋಗದಲ್ಲಿ ಹಮ್ಮಿಕೊಂಡ ಬೃಹತ್‌ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಅನ್ನದಾಸೋಹ, ಜ್ಞಾನದಾಸೋಹದೊಂದಿಗೆ ಭಕ್ತಿ ದಾಸೋಹ ನೀಡುವ ಮೂಲಕ ಭಕ್ತರಲ್ಲಿ ಧಾರ್ಮಿಕತೆ ಶಕ್ತಿ ತುಂಬುವ ಕೆಲಸ ಸಪ್ಪಣಾರ್ಯ ಶಿವಯೋಗಿಗಳು ಮಾಡಿದ್ದರು. ಅವರ ನೆನಪಲ್ಲಿ ನಾಟಕ ಗ್ರಂಥ ರಚಿಸಿರುವುದು ಪೂರಕವಾಗಿದೆ ಎಂದರು.

ಅಪರೂಪದ ಸಾಹಿತಿ ಎಂದೆನಿಸಿಕೊಂಡಿರುವ ಹಿರಿಯ ಸಾಹಿತಿ ಎಲ್‌.ಬಿ.ಕೆ. ಆಲ್ದಾಳ ಅವರ ಅಕ್ಷರಗುಚ್ಚದಲ್ಲಿ ಹೊರಬಂದಿರುವ ಸಪ್ಪಣಾರ್ಯ ಶಿವಯೋಗಿಗಳ ನಾಟಕ ಗ್ರಂಥ ನಿಜಕ್ಕೂ ಬರುವ ಪೀಳಿಗೆಗೆ ದಾರಿದೀಪವಾಗಲಿದೆ ಎಂದು ಹೇಳಿದರು.

ಸಿಪಿಐ ಪಂಚಾಕ್ಷರಿ ಸಾಲಿಮಠ ಮಾತನಾಡಿ, ಶತಮಾನದ ಹಿಂದೆ ಶರಣರು ನಡೆದುಹೋದ ದಾರಿಯನ್ನು ಗ್ರಂಥ ರೂಪದಲ್ಲಿ ತರುವ ಕೆಲಸ ನಿಜಕ್ಕೂ ಪ್ರಶಂಸನೀಯವಾದದ್ದು. ಮಹಾನ್‌ ಶರಣರ ಜೀವನ ಸಾಧನೆ ಇಂದಿನ ಜನತೆಗೆ ದಾರಿದೀಪವಾಗಬೇಕು ಎಂದರು.

ಸಂಸ್ಥಾನದ ಸದಾಶಿವ ಸ್ವಾಮೀಜಿ, ಸಾಹಿತಿ ಎಲ್‌.ಬಿ.ಕೆ. ಅಲ್ದಾಳ, ರೆಡ್‌ ಕ್ರಾಸ್‌ ಸಂಸ್ಥೆ ಅಧ್ಯಕ್ಷ ಡಾ| ಸದಾನಂದ ಬೂದಿ ಮಾತನಾಡಿದರು. ಲಾಯನ್ಸ್‌ ಕ್ಲಬ್‌ ಅಧ್ಯಕ್ಷ ರಮೇಶ ಮಾಲಪಾಣಿ, ವಿಶ್ವಹಿಂದು ಪರಿಷತ್‌ ತಾಲೂಕಾ ಉಪಾಧ್ಯಕ್ಷ ಅನೀಲರೆಡ್ಡಿ ಸಂಗೆಪಲ್ಲಿ, ಭಜರಂಗದಳ ಜಿಲ್ಲಾ ಸಂಯೋಜಕ ಪ್ರೇಮ ಚವ್ಹಾಣ, ಡಾ| ಆಶ್ರಪ್‌, ಡಾ| ಅಲ್ತಾಫ್‌ ಇದ್ದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಸ್ವಾಗತಿಸಿದರು, ಪ್ರದೀಪ ಪಾಟೀಲ ಹೊಸಳ್ಳಿ ನಿರೂಪಿಸಿದರು, ವಿಶ್ವಹಿಂದು ಪರಿಷತ್‌ ವಿಭಾಗೀಯ ಸಂ.ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.