ವರದಿ ಪಾಸಿಟಿವ್ ಬಂತು, ಇದನ್ನು ಕೇಳಿ ಆಘಾತಗೊಂಡು ವ್ಯಕ್ತಿ ಸಾವು ; ಆಮೇಲೆ ನೆಗೆಟಿವ್ ಬಂತು!
Team Udayavani, Jul 23, 2020, 8:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಗುರುವಾರ ವಿಚಿತ್ರ ಘಟನೆಯೊಂದು ನಡೆದಿರುವುದು ಇದೀಗ ವರದಿಯಾಗಿದೆ.
ತನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂಬ ಸುದ್ದಿ ಕೇಳಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಂತರ ಮರಣೋತ್ತರವಾಗಿ ನಡೆಸಿದ ಆಂಟಿಜನ್ RAPID ಪರೀಕ್ಷೆಯಲ್ಲಿ ಆ ವ್ಯಕ್ತಿಗೆ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿದೆ.
ಇಲ್ಲಿನ ಭವಾನಿ ನಗರದ ನಿವಾಸಿ, 55 ವರ್ಷದ ಆಟೋ ಚಾಲಕರೊಬ್ಬರು ಜು.8ರಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಗುರುವಾರ ಬೆಳಿಗ್ಗೆ, ಅಂದರೆ 15 ದಿನಗಳ ನಂತರ ಆರೋಗ್ಯ ಇಲಾಖೆಯವರು ವ್ಯಕ್ತಿಗೆ ಕರೆ ಮಾಡಿ ನಿಮಗೆ ಪ್ರಯೋಗಾಲಯದ ವರದಿಯಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ ಮಾತ್ರವಲ್ಲದೇ ಎಲ್ಲಿಗೂ ಹೊರಹೋಗಬೇಡಿ ಮನೆಯಲ್ಲಿ ಇರಿ ಎಂದು ಹೇಳಿದ್ದಾರೆ.
ಇತ್ತ, ತನಗೆ ಪಾಸಿಟಿವ್ ಬಂದಿದೆ ಎಂದು ವಿಷಯ ತಿಳಿಯುತ್ತಲೇ ಗಾಬರಿಗೊಂಡ ಆ ವ್ಯಕ್ತಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಮತ್ತು ಒದ್ದಾಡುತ್ತಾ ಸ್ವಲ್ಪ ಹೊತ್ತಿನಲ್ಲೇ ಸಾವಿಗೀಡಾಗಿದ್ದಾರೆ. ಅಷ್ಟರಲ್ಲಿ ಕೋವಿಡ್ ಯೋಧರೂ ಸಹ ಈ ವ್ಯಕ್ತಿಯ ಮನೆಗೆ ತಲುಪಿದ್ದು, ಈ ಘಟನೆ ನೋಡಿ ಅವರೂ ಗಾಬರಿಗೊಂಡಿದ್ದಾರೆ.
ಇದನ್ನೂ ಓದಿ: ಜು.23: ರಾಜ್ಯದಲ್ಲಿ ನಿತ್ಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೇರಿಕೆ; 97 ಸಾವು, 2071 ಚೇತರಿಕೆ
ಮೃತ ದೇಹವನ್ನು ಜಿಮ್ಸ್ ಆಸ್ಪತ್ರೆಗೆ ಸಾಗಿಸಿದ ಬಳಿಕ ಅಲ್ಲಿ ಮತ್ತೊಮ್ಮೆ ಆಂಟಿಜನ್ RAPID ಪರೀಕ್ಷೆ ನಡೆಸಲಾಗಿದೆ. ಆಗ ಕೋವಿಡ್ ನೆಗೆಟಿವ್ ವರದಿ ತೋರಿಸಿದೆ ಎಂದು ಕಲಬುರಗಿ ತಾಲೂಕ ವೈದ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ತಿಳಿಸಿದ್ದಾರೆ.
ಹಿನ್ನೆಲೆ ಏನು?: ಈ ಹಿಂದೆ ಮೃತ ವ್ಯಕ್ತಿಯ ಅಳಿಯನಿಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಇಡೀ ಕುಟುಂಬದದವರು ಜು.8ರಂದು ಗಂಟಲು ದ್ರವದ ಮಾದರಿ ನೀಡಿ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದರು. ಆದರೆ, 15 ದಿನಗಳಾದರೂ ವರದಿ ಬಗ್ಗೆ ಯಾರೂ ಏನೂ ಹೇಳಿರಲಿಲ್ಲ.
ಇದೀಗ ತನಗೆ ಕೋವಿಡ್ ಸೋಂಕು ಇದೆ ಎಂದು ಕೇಳಿಯೇ ಆಘಾತಗೊಂಡು ಸಾವಿಗೀಡಾದ ವ್ಯಕ್ತಿಯ ಮರಣೋತ್ತರ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದು ಅವರ ಕುಟುಂಬ ಸದಸ್ಯರನ್ನು ಆಘಾತಕ್ಕೀಡುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ