ಚರ್ಚೆಗೆ ಸೀಮಿತವಾದ ಸಭೆ ವ್ಯರ್ಥ


Team Udayavani, Sep 16, 2017, 9:55 AM IST

gul-2.jpg

ಕಲಬುರಗಿ: ಇಲ್ಲಿವರೆಗೆ ಎಂಟು ಸಾಮಾನ್ಯ ಸಭೆಗಳಾಗಿದ್ದು, ಹಿಂದಿನ ಸಭೆಯಲ್ಲಿ ಚರ್ಚೆಯಾದ ವಿಷಯಗಳು ಹಾಗೂ ದೂರುಗಳ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾದರೆ ಈ ಸಭೆಗಳು ಕೇವಲ ಚರ್ಚೆಗೆ ಸೀಮಿತವಾಗಿವೆಯೇ? ಹೀಗಾದಲ್ಲಿ ಅಧಿಕಾರಿ ವರ್ಗದಲ್ಲಿ ಇವರು ನಮಗೇನು ಮಾಡ್ತಾರೆ ಎನ್ನುವ ಧೋರಣೆ ಬೆಳೆಯುತ್ತಿದೆ. ಇಂತ ಸಭೆಗಳನ್ನು ನಡೆಸುವುದೇ ವ್ಯರ್ಥ ಎಂದು ಆಡಳಿತ ಹಾಗೂ ವಿರೋಧ ಪಕ್ಷದ ಜಿಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅಧ್ಯಕ್ಷತೆಯಲ್ಲಿ ನಡೆದ 8ನೇ ಸಾಮಾನ್ಯ ಸಭೆಯಲ್ಲಿ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಪಂನಲ್ಲಿ 1ರಿಂದ 2 ಕೋಟಿ ರೂ. ಅವ್ಯವಹಾರ ಆಗಿದೆ.  ದಕ್ಕೆ ಸಂಬಂಧಿಸಿದಂತೆ ಪಿಡಿಒ ಹಾಗೂ ಕಾರ್ಯದರ್ಶಿ ಅಮಾನತು ಬಿಟ್ಟರೆ ಮತ್ಯಾವುದೇ ಕ್ರಮವಾಗಿಲ್ಲ ಎಂದು ಸದಸ್ಯ ಶಿವಶರಣಪ್ಪ ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಯಡ್ರಾಮಿ ಕ್ಷೇತ್ರದ ಸದಸ್ಯ ದಂಡಪ್ಪ ಸಾಹು ಕುಳಗೇರಿ ಮಾತನಾಡಿ, ಮಳ್ಳಿ ಗ್ರಾಪಂ ಪಿಡಿಒ ಅವರನ್ನು ವರದಿ ಬರುವ ಮುಂಚೆಯೇ ಅಮಾನತ್ತುಮಾಡಲಾಗಿದೆ. ಒಳ್ಳೆಯ ಕೆಲಸ ಮಾಡುತ್ತಿದ್ದವರ ಮೇಲೆ ವಿನಾಕಾರಣ ಕ್ರಮ ಕೈಗೊಳ್ಳಲಾಗಿದೆ. ತಪ್ಪು ಎಸಗಿರುವುದರಲ್ಲಿ ನೋಡಲ್‌ ಅಧಿಕಾರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗಿಯಾಗಿರುತ್ತಾರೆ. ಅವರ ವಿರುದ್ಧವು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಔರಾದ ಕ್ಷೇತ್ರದ ಸದಸ್ಯೆ ವಿಜಯಲಕ್ಷ್ಮೀ ಹಾಗರಗಿ, ಕೈಗಾರಿಕೆ ಇಲಾಖೆಗೆ ಸಂಬಂಧಪಟ್ಟಂತೆ ಎರಡನೇ ಸಾಮಾನ್ಯ ಸಭೆಯಲ್ಲಿಯೇ ಮಾಹಿತಿ ಕೇಳಲಾಗಿದೆ. ಆದರೆ ಇಲ್ಲಿವರೆಗೂ ನೀಡಿಲ್ಲ ಎಂದರು. ಸದಸ್ಯೆ ಗೌರಮ್ಮ ಜೈಭೀಮ ಶಿಕ್ಷಣ ಇಲಾಖೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕೇಳಲಾಗಿತ್ತು. ಇಲ್ಲಿವರೆಗೂ ಉತ್ತರವೇ ಬಂದಿಲ್ಲ ಎಂದರು. ಇದಕ್ಕೆ ಶರಣಗೌಡ ಪಾಟೀಲ ಬೆಂಬಲಿಸಿ, ಮಾಹಿತಿ ನೀಡದ ಅಧಿಕಾರಿಗಳಿಗೆ ಪಂಚಾಯತ್‌ರಾಜ್‌ ಕಾಯ್ದೆ ಅನ್ವಯ ದಂಡ ಹಾಕಬೇಕು ಎಂದು ಹೇಳಿದರು. 

ಉತ್ತರ ನೀಡುವಂತೆ ಸೂಚನೆ: ಸದಸ್ಯರ ಆರೋಪಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಸುವರ್ಣ ಮಲಾಜಿ, ಜೇವರ್ಗಿ ಇಒ ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತಿರಿ ಎನ್ನುವುದನ್ನು ಸಭೆಗೆ ಸ್ಪಷ್ಟಪಡಿಸಿ ಎಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೋರ್ಲಪಾಟಿ ಅವರನ್ನು ಕೇಳಿದರು.

ಜೇವರ್ಗಿ ತಾಪಂ ಸಿಇಒ ವಿರುದ್ಧ ಈಗಾಗಲೇ ಅನೇಕ ಕರ್ತವ್ಯಲೋಪದ ದೂರುಗಳು ಕೇಳಿ ಬಂದಿವೆ. ಹೀಗಾಗಿ ಶಿಸ್ತುಕ್ರಮಕ್ಕೆ ಮುಂದಾಗಿದ್ದೇವೆ. ಉಳಿದಂತೆ ವರದಿ ತರಿಸಿಕೊಂಡು 15 ದಿನದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸದಸ್ಯ ಶಿವರಾಜ ರದ್ದೇವಾಡಗಿ ಮಾತನಾಡಿ, ಅವ್ಯವಹಾರಕ್ಕೆ  ಬಂಧಪಟ್ಟಂತೆ ತನಿಖಾ ವರದಿಯನ್ನು ಅಧಿಕಾರಿಗಳು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ನೀಡುತ್ತಾರೆ. ಆದ್ದರಿಂದ ಕೆಲವು ತನಿಖೆಗಳನ್ನು ಖುದ್ದಾಗಿ ಸಿಇಒ ಅವರೇ ಅವಲೋಕಿಸಬೇಕು ಎಂದರು.

ಸದಸ್ಯ ಶರಣಗೌಡ ಪಾಟೀಲ, ಪ್ರತಿ ಸಾಮಾನ್ಯ ಸಭೆಯಲ್ಲಿ ಶಿಕ್ಷಣ, ಕೃಷಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಮಾತ್ರ ಚರ್ಚೆಯಾಗುತ್ತದೆ. ಉಳಿದ ಇಲಾಖೆಗಳ ಚರ್ಚೆಯೇ ಆಗುವುದಿಲ್ಲ. ಆ ಇಲಾಖೆಗಳ ಅಧಿಕಾರಿಗಳ ಪರಿಚಯವೇ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೋದಾಗ ಅಧಿಕಾರಿಗಳು ತಮ್ಮನ್ನು ಒಳಗೆ ಬಿಡಲಿಲ್ಲ. ಇದು ನಾಚಿಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೋಕಾಶಿ ಮಾತನಾಡಿ, ಸೆ.8 ಹಾಗೂ 13ರಂದು ಧಾರಾಕಾರ ಮಳೆ ಬಂದಿದೆ. ಬೆಳೆ ಹಾನಿ ಕುರಿತು ವರದಿ ರೂಪಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು. ಮಳೆ ಹಾನಿಗೆ ಸಂಬಂಧಿಸಿದಂತೆ 22 ರೈತರು ಬೆಳೆವಿಮೆ ಕೋರಿ ಕಂಪನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.

ಜಿಪಂ ಇನ್ಮುಂದೆ ಇ ಆಡಳಿತ: ಕಲಬುರಗಿ ಜಿಪಂನಲ್ಲೂ ಇ ಆಡಳಿತ ಸೇವೆ ಕಾರ್ಯರೂಪಕ್ಕೆ ತರಲು ಮುಂದಾಗಲಾಗಿದೆ. ಇ ಆಡಳಿತ ಕಾರ್ಯರೂಪಕ್ಕೆ ಬಂದಲ್ಲಿ ಯಾವುದೇ ದೂರು ಯಾವ ಹಂತದಲ್ಲಿದೆ ಎನ್ನುವುದನ್ನು ನೋಡಬಹುದು ಎಂದು ಜಿಪಂ ಸಿಇಒ ತಿಳಿಸಿದರು. ಇದಕ್ಕೆ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಇ ಆಡಳಿತ ಇಷ್ಟೊತ್ತಿಗೆ ಕಾರ್ಯರೂಪಕ್ಕೆ ಬರಬೇಕಿತ್ತು. ಈಗಲಾದರೂ ಶೀಘ್ರವೇ ಆಡಳಿತದಲ್ಲಿ ಇ ಸೇವೆ ತನ್ನಿ ಎಂದು ಹೇಳಿದರು. ಜಿಪಂ ಯೋಜನಾಧಿಕಾರಿ ಇದ್ದರು. ಸಭೆ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ದಿ| ಧರ್ಮಸಿಂಗ್‌ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.