ಅನಿರೀಕಿತ ಮಳೆಯಿಂದಾದ ಸಮಸ್ಯೆ ಪರಿಶೀಲಿಸಿದ ಸಚಿವ
Team Udayavani, Dec 16, 2018, 11:09 AM IST
ಕಲಬುರಗಿ: ಕಳೆದ ಗುರುವಾರ ರಾತ್ರಿ ಸುರಿದ ಅನಿರೀಕ್ಷಿತ ಮಳೆಯಿಂದ ನಗರದ ಜೇವರ್ಗಿ ಕಾಲೋನಿಯ ದತ್ತ ನಗರದ
ಸಾರ್ವಜನಿಕ ಉದ್ಯಾನವನ ಸುತ್ತಮುತ್ತ ನೀರು ನಿಂತಿರುವ ಹಾಗೂ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ದತ್ತ ದೇವಸ್ಥಾನ ಸುತ್ತಮುತ್ತ ನಿಂತಿರುವ ನೀರನ್ನು ಪಂಪ್ಸೆಟ್ ಮೂಲಕ ಹೊರಹಾಕಬೇಕು. ಮಳೆಯಿಂದ
ಇಲ್ಲಿನ ರೈಲ್ವೆ ಮೇಲ್ಸೇತುವೆ ಬಳಿ ಚರಂಡಿ ಬ್ಲಾಕ್ ಆಗಿ ಕೊಳಚೆ ನೀರು ರಸ್ತೆ ಮೇಲೆ ಹರಿದಾಡುತ್ತಿದ್ದು, ದತ್ತ ನಗರ ಸೇರಿದಂತೆ ನಗರದ ಎಲ್ಲೆಡೆ ಕೂಡಲೇ ಚರಂಡಿಗಳನ್ನು ಸ್ವತ್ಛಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕಳೆದ ಗುರುವಾರ ರಾತ್ರಿ 46 ಮಿ.ಮೀ. ಮಳೆಯಾಗಿರುವ
ಹಿನ್ನೆಲೆಯಲ್ಲಿ ಸಹಜವಾಗಿ ಚರಂಡಿಗಳು ತುಂಬಿ ಹೋಗಿದ್ದು, ಸ್ವತ್ಛತೆ ಕೆಲಸ ಸಾಗಿದೆ. ಚರಂಡಿ ಸ್ಥಳಗಳನ್ನು ಕೆಲವರು
ಒತ್ತುವರಿ ಮಾಡಿಕೊಂಡಿರುವ ಕಾರಣ ಮಳೆ ಬಂದಾಗ ಈ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಸುದ್ದಿಗಾರರು ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಸಚಿವರು, ಚರಂಡಿಗಳು ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಎಚ್. ಕೆ.ಆರ್.ಡಿ.ಬಿ ಹಾಗೂ ನಗರೋತ್ಥಾನ ಯೋಜನೆಯಡಿ ನಗರದಲ್ಲಿ ಚರಂಡಿಗಳನ್ನು ನಿರ್ಮಿಸಲಾಗುತ್ತಿದ್ದು, 2019ರ ಜೂನ್ ವರೆಗೆ ಕಾಮಗಾರಿಗಳು ಮುಗಿಯಲಿವೆ ಎಂದರು.
ಇತ್ತೀಚೆಗೆ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಹೈಕ ಭಾಗದ ಶಾಸಕ, ಸಚಿವರ ಸಭೆಯಲ್ಲಿ 371 (ಜೆ)ನೇ ಮೀಸಲಾತಿಗೆ ಅನುಗುಣವಾಗಿ ಕೆಪಿಎಸ್ಸಿ ಮತ್ತು ಕೆಇಎ ಮೂಲಕ ತ್ವರಿತಗತಿಯಲ್ಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಕ್ರೈಸ್ ಸುಧಾರಣೆಗೆ ಡಿ. 18 ರಂದು ಸಭೆ: ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೆ„ಸ್ ಶಿಕ್ಷಣ ಸಂಸ್ಥೆ ಸುಧಾರಣೆಗೆ
ಸಂಬಂಧಿಸಿದಂತೆ ಡಿ. 18 ರಂದು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ನ ಶಾಸಕರ ಸಭೆ ಕರೆಯಲಾಗಿದೆ. ಅಲ್ಲಿ ಸುಧಾರಣೆಗೆ ರೂಪಿಸಲಾಗಿರುವ ಕರಡು ವರದಿ ಅಂತಿಮಗೊಳಿಸಿ ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಸುಧಾರಣೆ ಕ್ರಮ ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಮಹಾಪೌರರಾದ ಮಲ್ಲಮ್ಮ ಎಸ್. ವಳಕೇರಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ,
ಮಹಾನಗರ ಪಾಲಿಕೆ ಆಯುಕ್ತ ಆರ್.ಎಸ್. ಪೆದ್ದಪ್ಪಯ್ಯ, ಕಾರ್ಯಪಾಲಕ ಅಭಿಯಂತ ಶಿವಣಗೌಡ ಪಾಟೀಲ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ