ನಾಡಿನ ಹೆಸರು ಜಗತ್ತಿನಾದ್ಯಂತ ಹರಡಲಿ


Team Udayavani, Nov 21, 2017, 10:32 AM IST

gul-2.jpg

ಕಲಬುರಗಿ: ಕರುನಾಡಿನ ಹೆಸರು ಜಗತ್ತಿನಾದ್ಯಂತ ಹರಡುವಂತೆ ನಮ್ಮ ಕ್ರೀಡಾಪಟುಗಳು ಮಾಡಬೇಕು. ಅದಕ್ಕಾಗಿ ಇಂತಹ ವೇದಿಕೆಗಳನ್ನು ನಿರ್ಮಾಣ ಮಾಡಿ ಅವರಿಗೆ ತಮ್ಮ ಪ್ರತಿಭೆ ಗಟ್ಟಿಗಳಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ನೀಡಲಾಗುತ್ತಿದೆ ಎಂದು ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಿಂದ ಆರಂಭವಾದ ರಾಜ್ಯ ಮಟ್ಟದ 14 ಮತ್ತು 17 ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಲಾನ್‌ ಟೆನಿಸ್‌ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾಕೂಟದಲ್ಲಿ ಸೋಲು- ಗೆಲುವು ಪ್ರಮುಖ ಪಾತ್ರ ವಹಿಸುವುದಿಲ್ಲ. ತಮ್ಮ ಕ್ರೀಡೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೇ ಮುಂದುವರಿಸಿದಲ್ಲಿ ಒಂದಲ್ಲ ಒಂದು ದಿನ ಜಯಸಿಕ್ಕೆ ಸಿಗುತ್ತದೆ. ಅಲ್ಲಿಯವರೆಗೂ ಪರಿಶ್ರಮ ಪಡಬೇಕು.
ತರಬೇತಿ, ಏಕಾಗ್ರತೆ ಮತ್ತು ಶ್ರಮದಿಂದ ಉತ್ತಮ ಕ್ರೀಡಾಪಟು ಹೊರಬರುತ್ತಾನೆ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾರ ಮಲಾಜಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಾಂತಗೌಡ ಪಾಟೀಲ, ಕ್ರೀಡೆಗಳು ಶಿಕ್ಷಣದ ಒಂದು ಪ್ರಮುಖ ಭಾಗವಾಗಿದೆ. ಈ ಕ್ಷೇತ್ರಕ್ಕೆ ಶಿಕ್ಷಣ ಇಲಾಖೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿದೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಅಗತ್ಯ ಮೂಲ ಸೌಕರ್ಯಕಲ್ಪಿಸಲಾಗುತ್ತಿದ್ದು, ಕ್ರೀಡಾಪಟುಗಳನ್ನು ಕ್ರೀಡಾಂಗಣಕ್ಕೆ ಕರೆ ತರಲು ವಾಹನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಪಟುಗಳ ಯೋಗಕ್ಷೇಮ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿದೆ. ಯಾವುದೇ ಕುಂದು-ಕೊರತೆಗಳನ್ನು ನೋಡಿಕೊಳ್ಳಲು 40 ಜನ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ. ರಾಜ್ಯದ 34 ಜಿಲ್ಲೆಗಳನ್ನು ಸಂಪರ್ಕಿಸಿ ಇಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೋರಲಾಗಿತ್ತು. ಆದರೆ, ಕ್ರೀಡಾಕೂಟದಲ್ಲಿ ಹೆಚ್ಚು ತಂಡಗಳು ಭಾಗವಹಿಸಿಲ್ಲ ಎಂದು ಹೇಳಿದರು.

ಜಿಲ್ಲಾ ಕ್ರೀಡಾಧಿಕಾರಿ ಟಿ. ರವೀಂದ್ರಕುಮಾರ, ದೈಹಿಕ ಶಿಕ್ಷಣಾಧಿಕಾರಿ ವಿಜಯಕುಮಾರ, ತಾಲೂಕು ಮಟ್ಟದ ದೈಹಿಕಶಿಕ್ಷಣಾ ಧಿಕಾರಿಗಳಾದ ಎಂ.ಜಿ. ಬಿರಾದಾರ, ಎ.ಎಸ್‌. ವಗ್ಗಿ, ವೀರಭದ್ರಪ್ಪ ದೊಡ್ಡಮನಿ, ಎಸ್‌.ಎಂ. ಚೌಧರಿ, ನೀಲಕಂಠಪ್ಪ, ಜಿಲ್ಲಾ ಗ್ರೇಡ್‌ ಒನ್‌ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಾ| ಶಿವಲಿಂಗಪ್ಪ ಗೌಳಿ, ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ, ಶಿವಶರಣಪ್ಪ ಮಂಠಾಳೆ ಪಾಲ್ಗೊಂಡಿದ್ದರು.

ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ರಟಕಲ್‌ ಕಾರ್ಯಕ್ರಮ ನಿರೂಪಿಸಿದರು. ಎಂ.ಜಿ. ಬಿರಾದಾರ ವಂದಿಸಿದರು. ಕ್ರೀಡಾ
ಕೋಚ್‌ ತರಬೇತಿದಾರ ವಿಶ್ವನಾಥ ಮತ್ತಿತರರು ಕ್ರೀಡಾಕೂಟ ನಡೆಸಿಕೊಟ್ಟರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.