ಪಿಡಿಎ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಕೋಡ್‌ ಹ್ಯಾಕಥಾನ್‌


Team Udayavani, Jul 30, 2019, 9:32 AM IST

GB-TDY-1

ಕಲಬುರಗಿ: ನಗರದ ಪಿಡಿಎ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ 'ಹ್ಯಾಕಥಾನ್‌' ಪೋಸ್ಟರ್‌ಅನ್ನು ಎಚ್ಕೆಇ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಬಿಡುಗಡೆಗೊಳಿಸಿದರು.

ಕಲಬುರಗಿ: ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ವಿಭಾಗ ಹಾಗೂ ಗಣಕತಂತ್ರ ವಿಜ್ಞಾನ ವಿಭಾಗದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಮಟ್ಟದ ‘ಕೋಡ್‌ ಹ್ಯಾಕಥಾನ್‌’ ಎಂಬ 36 ಗಂಟೆಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ತಿಳಿಸಿದರು.

ನಗರದ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ‘ಹ್ಯಾಕಾಥಾನ್‌’ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ‘ಕೋಡಿಂಗ್‌’ ಚಾಣಾಕ್ಷತೆಯನ್ನು ಜಾಗೃತಗೊಳಿಸುವುದೇ ‘ಹ್ಯಾಕಥಾನ್‌’ ಮೂಲ ಉದ್ದೇಶವಾಗಿದೆ ಎಂದರು.

ಟೆಕ್ಯೂಪ್‌-3ರ ಅಡಿಯಲ್ಲಿ ಮೂರು ಹಂತಗಳಲ್ಲಿ ಕಾರ್ಯಾಗಾರ ನಡೆಯಲಿದೆ. ಆ.16ಕ್ಕೆ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುವುದು. ನಂತರ ಆ.24 ಮತ್ತು 25ರಂದು ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕೊನೆಯ ಹಂತದಲ್ಲಿ ‘ಕೋಡಿಂಗ್‌’ ಸೆ.7 ಮತ್ತು 8ರಂದು ಜರುಗಲಿದೆ. ವಿವಿಧ ರಾಜ್ಯಗಳ ಸುಮಾರು 50 ತಾಂತ್ರಿಕ ಮಹಾವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ಸುಮಾರು 200 ವಿದ್ಯಾರ್ಥಿಗಳು ಪಾಲ್ಗೊಳ್ಳುವರು ಎಂದು ವಿವರಿಸಿದರು.

ಕೋಡ್‌ ಹ್ಯಾಕಥಾನ್‌ ಕೇಂದ್ರ ಸರ್ಕಾರದ ‘ಸ್ಮಾರ್ಟ್‌ ಇಂಡಿಯಾ ಹ್ಯಾಕಾಥಾನ್‌’ನ ಗುಣಲಕ್ಷಣಗಳನ್ನು ಹೊಂದಿದೆ. ಇಲ್ಲಿ ಭಾಗವಹಿಸುವ ತಂಡಗಳು ಕೂಡ ಸಮಾಜಕ್ಕೆ ಒಳಿತಾಗುವಂತಹ ಸಾಫ್ಟ್‌ವೇರ್‌ ತಯಾರಿಸುವ ಗುರಿ ಹೊಂದಿರುತ್ತಾರೆ. ಜತೆಗೆ ಮಹಿಳಾ ಸಬಲೀಕರಣಕ್ಕೆ ಒತ್ತು ಕೊಡುವ ಹ್ಯಾಕಥಾನ್‌ ಪ್ರತಿ 6 ಜನ ವಿದ್ಯಾರ್ಥಿಗಳ ಗುಂಪುಗಳಲ್ಲಿ ಒಬ್ಬ ಮಹಿಳಾ ವಿದ್ಯಾರ್ಥಿ ಇರುವುದು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ, ಕೇವಲ ಮಹಿಳಾ ವಿದ್ಯಾರ್ಥಿಗಳೇ ಇರುವ ಗುಂಪಿಗೆ ಪ್ರಾಶಸ್ತ್ಯ ಕೊಡಲಾಗುವುದು ಎಂದರು.

ಸಂಸ್ಥೆಯ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಜಂಟಿ ಕಾರ್ಯದರ್ಶಿ ಗಂಗಾಧರ ಎಲಿ, ಆಡಳಿತ ಮಂಡಳಿ ಸದಸ್ಯರಾದ ವಿಜುಕುಮಾರ ದೇಶಮುಖ, ಡಾ| ಸಂಪತಕುಮಾರ ಲೋಯಾ, ಅನುರಾಧಾ ದೇಸಾಯಿ, ಸತೀಶ ಹಡಗಲಿಮಠ, ಅನಿಲಕುಮಾರ ಮರಗೋಳ, ಡಾ| ವೀರಭದ್ರ ನಂದ್ಯಾಳ, ಆಡಳಿತಾಧಿಕಾರಿ ಪ್ರೊ| ಸಿ.ಆರ್‌.ಬಡಾ, ಪ್ರಿನ್ಸಿಪಾಲ್ ಡಾ| ಎಸ್‌.ಎಸ್‌.ಹೆಬ್ಟಾಳ್‌, ಟೆಕ್ಯೂಪ್‌ ಸಂಚಾಲಕ ಪ್ರೊ| ಶರಣ ಪಡಶೆಟ್ಟಿ, ಸಂಯೋಜಕರಾದ ಮಾಹಿತಿ ವಿಭಾಗದ ಮುಖ್ಯಸ್ಥೆ ಡಾ| ಭಾರತಿ ಹರಸೂರ್‌, ಗಣಕತಂತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಸುವರ್ಣ ನಂದ್ಯಾಳ್‌ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.