ಪ್ರತಿ ವರ್ಷ ಅಪಘಾತಕ್ಕೆ ಮೃತಪಡುವವರ ಸಂಖ್ಯೆ 500
Team Udayavani, Feb 5, 2019, 6:49 AM IST
ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ಪ್ರತಿ ವರ್ಷ ಸರಾಸರಿ 350 ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಸುಮಾರು 500 ಜನರು ತಮ್ಮ ಅಮೂಲ್ಯ ಜೀವನ ಕಳೆದುಕೊಳ್ಳುತ್ತಿರುವುದು ಆತಂಕದ ವಿಷಯವಾಗಿದೆ. ಇದನ್ನು ತಪ್ಪಿಸಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲನೆಯಿಂದ ಮಾತ್ರ ಸಾಧ್ಯ ಎಂದು ಎಸ್ಪಿ ಎನ್.ಶಶಿಕುಮಾರ ಹೇಳಿದರು. ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ‘ರಸ್ತೆ ಸುರಕ್ಷೆ-ಜೀವನ ರಕ್ಷೆ’ ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಿ ಸುಮಾರು 4ರಿಂದ 5 ಸಾವಿರ ಜನರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಇಂತಹ ಅಪಘಾತ ಪ್ರಕರಣಗಳಿಂದ ತೊಂದರೆಗೆ ಈಡಾಗುತ್ತಿದ್ದಾರೆ. ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬದ ಪರಿಸ್ಥಿತಿ ಶೋಚನೀಯವಾಗಿದೆ. ಇಂತಹ ಸ್ಥಿತಿಗೆ ಯಾರು ಅವಕಾಶ ನೀಡದಂತೆ ಜಾಗೃತೆಯಿಂದ ವಾಹನ ಚಾಲನೆ ಮಾಡುವ ಮೂಲಕ ನಿಮ್ಮ ಪ್ರಾಣದೊಂದಿಗೆ ಸಹ ಪ್ರಯಾಣಿಕರ ಪ್ರಾಣ ಉಳಿಸಿ ಎಂದು ಕರೆ ನೀಡಿದರು.
ಸಾರಿಗೆ ಇಲಾಖೆ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಜೆ. ಪುರುಷೋತ್ತಮ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ದೇಶದಲ್ಲಿ 4 ಲಕ್ಷ ಅಫಘಾತ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದ 1 ಲಕ್ಷ ಜನ ತಮ್ಮ ಜೀವನ ಕಳೆದಕೊಳ್ಳುತ್ತಿದ್ದರೆ 2 ಲಕ್ಷ ಜನ ಗಾಯಾಳುಗಳಾಗುತ್ತಿದ್ದಾರೆ. ಅಪಘಾತಗಳಿಂದ ಸುಮಾರು 5000 ಕೋಟಿ ರೂ. ಆರ್ಥಿಕ ನಷ್ಟವಾಗುತ್ತಿದೆ. ಅಪಘಾತ ತಪ್ಪಿಸಲು ಅರಿವೆ ಮುಖ್ಯವಾಗಿದೆ. ಎಲ್ಲರು ರಸ್ತೆ ಸುರಕ್ಷತೆ ಬಗ್ಗೆ ಅರಿವು ಹೊಂದಬೇಕು ಹಾಗೂ ರಸ್ತೆ ಸಂಚಾರದ ನಿಯಮಗಳನ್ನು ಇತರರಿಗೂ ತಿಳಿಹೇಳಬೇಕು ಎಂದು ಹೇಳಿದರು.
ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ವಿ.ಟಿ.ಯು. ಪ್ರಾದೇಶಿಕ ಕೇಂದ್ರದ ಕೋರ್ಸ್ ಕೋಆರ್ಡಿನೇಟರ್ ಡಾ| ವಿ. ಶಂಭುಲಿಂಗಪ್ಪ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್.ಐ. ಭಾರತಿಬಾಯಿ ಸೇರಿದಂತೆ ಆರ್.ಟಿ.ಓ ಕಚೇರಿಯ ಮೋಟಾರು ನಿರೀಕ್ಷಕರಾದ ಈರಣ್ಣ, ಶರಣಯ್ಯ ಸ್ವಾಮಿ, ಸುರೇಶ ಶ್ರೀಮಂಡಲ ಭಾಗವಹಿಸಿದ್ದರು. ಆರ್ಟಿ0 ಕಚೇರಿ ಅಧಿಧೀಕ್ಷಕ ರಿಯಾಜ್ ಅಹ್ಮದ್ ಸ್ವಾಗತಿಸಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಸಂಬಂಧ ಕಿರುಚಿತ್ರ ಪ್ರದರ್ಶಿಸಲಾಯಿತು.
ಆಟೋ ಓಡಿಸಿದ ಎಸ್ಪಿ: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪ್ರದರ್ಶನಕ್ಕೆ ಇಡಲಾದ ಕೈನೆಟಿಕ್, ಶೀಗಲ್ ಕಂಪನಿಯ ವಿದ್ಯುತ್ ಚಾಲಿತ ಆಟೋಗಳಿಗೆ ಚಾಲನೆ ನೀಡಿದ ಎನ್. ಶಶಿಕುಮಾರ ನಂತರ ಆಟೋದಲ್ಲಿ ಇತರೆ ಅಧಿಕಾರಿಗಳನ್ನು ಕೂಡಿಸಿಕೊಂಡು ಸ್ವತಃ ಆಟೋ ಚಾಲನೆ ಮಾಡಿ ಎರಡು ಸುತ್ತು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ