ರೋಗಿಗಳಲಿ ದೇವರು ಕಾಣುವನೇ ನಿಜವಾದ ವೈದ್ಯ


Team Udayavani, Apr 23, 2017, 3:37 PM IST

gul1.jpg

ಕಲಬುರಗಿ: ರೋಗಿಗಳಲ್ಲಿ ದೇವರು ಕಾಣುವವರೇ ನಿಜವಾದ ವೈದ್ಯರು. ಅಂತವರಲ್ಲಿ ಡಾ| ಶರಣಬಸವಪ್ಪ ಕಾಮರೆಡ್ಡಿ ಒಬ್ಬರಾಗಿದ್ದಾರೆ ಎಂದು ಶಾಸಕ ಡಾ| ಎ.ಬಿ. ಮಲಕರೆಡ್ಡಿ ಹೇಳಿದರು. 

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಡಾ| ಶರಣಬಸವಪ್ಪ ಬಿ.ಕಾಮರೆಡ್ಡಿ ದಂಪತಿಗೆ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಹಿತೈಷಿಗಳ ಬಳಗವು ಶುಕ್ರವಾರ ವಿಶ್ವೇಶ್ವರಯ್ಯ ಭವನದಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. 

ಡಾ| ಕಾಮರೆಡ್ಡಿ ಅವರು ವೈದ್ಯಕೀಯ ಸೇವೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಮಾಡಲಿ ಎಂದು ಶುಭ ಹಾರೈಸಿದ ಡಾ| ಮಲಕರೆಡ್ಡಿ, ಇಷ್ಟೊಂದು ಜನಸಾಗರದ ನಡುವೆ ಸನ್ಮಾನಗೊಳ್ಳುತ್ತಿರುವುದು ನಿಜಕ್ಕೂ ಮಾದರಿಯಾಗಿದೆ ಎಂದರು. 

ಹಿತೈಷಿಗಳು, ವೈದ್ಯ ಕಾಮರೆಡ್ಡಿ ಅಭಿಮಾನಿಗಳ ಸಮ್ಮುಖದಲ್ಲಿ ಮುಗಳನಾಗಾಂವ ಕಟ್ಟಿಮನಿ ಸಂಸ್ಥಾನದ ಅಭಿನವ ಸಿದ್ಧಲಿಂಗ  ಸ್ವಾಮಿಗಳು ಗೌರವಿಸಿದರು. ನಂತರ ಮಾತನಾಡಿದ ಶ್ರೀಗಳು, ತಮ್ಮ ನೈಪುಣ್ಯತೆಯಿಂದ ರೋಗಿಗಳಿಗೆ ಮರು ಜೀವ ನೀಡುವ ಮೂಲಕ ಡಾ| ಕಾಮರೆಡ್ಡಿ ಅವರು ಸಂಜೀವಿನಿಯಾಗಿದ್ದಾರೆ, 

ಇಂತಹವರನ್ನು ಗುರುತಿಸಿ ಸಂಸ್ಥೆ ತನ್ನ ಆಡಳಿತ ಮಂಡಳಿಗೆ ನಾಮ ನಿರ್ದೆಶನ ಮಾಡಿದ್ದು ಶ್ಲಾಘನೀಯ ಎಂದರು. ಇವರ ಅವಧಿಯಲ್ಲಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಭೀಮಳ್ಳಿ ಮಾತನಾಡಿ, ಯುವಕರು ಆಗಿರುವ ಡಾ| ಕಾಮರೆಡ್ಡಿ ಅವರ ವೈದ್ಯಕೀಯ ಸೇವೆ ಶ್ಲಾಘನೀಯ ಎಂದರು.

ಶಾಸಕ ಬಿ.ಜಿ. ಪಾಟೀಲ, ಮಾಜಿ ಉಪ ಸಭಾಪತಿ ಚಂದ್ರಶೇಖರ ರೆಡ್ಡಿ ಮದನಾ ಮಾತನಾಡಿದರು. ಎಚ್‌ಕೆಇ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಜಿ.ಡಿ. ಅಣಕಲ್‌, ಆರ್‌.ಎಸ್‌. ಹೊಸಗೌಡ, ಅರುಣಕುಮಾರ ಪಾಟೀಲ, ಎನ್‌.ಡಿ. ಪಾಟೀಲ, ಡಾ| ದೇಶಮುಖ ಮತ್ತು ರೆಡ್ಡಿ ಸಮಾಜದ ಮುಖಂಡರಾದ ಲಿಂಗಾರೆಡ್ಡಿ ಬಾಸರೆಡ್ಡಿ, ಬಸವರೆಡ್ಡಿ ಇಟಗಿ,

ಭಾಗಣ್ಣಗೌಡ ಸಂಕನೂರ, ನಾಗರಡ್ಡಿ ಪಾಟೀಲ ಸೇಡಂ, ಪ್ರೊ| ಚೆನ್ನಾರೆಡ್ಡಿ  ಪಾಟೀಲ, ಸಿದ್ರಾಮರೆಡ್ಡಿ ಪಾಟೀಲ, ಲಿಂಗಣ್ಣಗೌಡ ಮಲ್ಹಾರ್‌, ವಿ.ಶಾಂತರೆಡ್ಡಿ , ಡಾ| ಪ್ರತಿಮಾ ಕಾಮರೆಡ್ಡಿ, ಬಸವರಾಜಪ್ಪ ಮಾಸ್ಟರ್‌ ಕಾಮರೆಡ್ಡಿ, ಡಾ| ರಾಜಶೇಖರ ಪಾಟೀಲ ಹರವಾಳ, ಪ್ರಮೋದ ರೆಡ್ಡಿ, ಚಂದ್ರಶೇಖರ ಪರಸರೆಡ್ಡಿ ನಾಲವಾರ, ಬಸವರಾಜ ಪಾಟೀಲ ಸೂಗುರ,

ಭೀಮರೆಡ್ಡಿ ಪಾಟೀಲ, ನಂದೀಶ ರೆಡ್ಡಿ, ಸಿದ್ದಲಿಂಗಪ್ಪ ರಸ್ತಾಪುರ, ಶರಣಗೌಡ ಪಾಟೀಲ ಯರಗೋಳ ಮುಂತಾದವರಿದ್ದರು. ಹೈಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ನೂರಾರು ವೈದ್ಯರು ಮತ್ತು ವೀರಶೈವ ರೆಡ್ಡಿ ಸಮಾಜದ ಪ್ರಮುಖರು ಹಾಜರಿದ್ದರು. ಮಹಿಪಾಲರರೆಡ್ಡಿ ಮುನ್ನೂರ ಪರಿಚಯಿಸಿದರು. ಕುಡಾ ಸದಸ್ಯರಾಗಿರುವ ಯುವ ನಾಯಕ ಪ್ರವೀಣ ಪಾಟೀಲ ಹರವಾಳ ಸ್ವಾಗತಿಸಿದರು.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.