ಜೇವರ್ಗಿಯಲ್ಲಿ ಕಮಲಜಾತ್ರೆ ಇಂದಿನಿಂದ


Team Udayavani, Feb 16, 2018, 11:23 AM IST

gul-7.jpg

ಜೇವರ್ಗಿ: ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಹೊಸ ಪ್ರಯೋಗವೊಂದನ್ನು ಮಾಡಲು ಹೊರಟ್ಟಿದ್ದು, ಉತ್ತರ ಪ್ರದೇಶ ಮಾದರಿಯಲ್ಲಿ ಕಮಲ ಜಾತ್ರೆ ನಡೆಸುತ್ತಿದೆ.

ಈ ಜಾತ್ರೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಫೆ.16, 17 ಹಾಗೂ 18 ರಂದು ನಡೆಯಲಿದ್ದು, ಪಟ್ಟಣದ ವಿಜಯಪುರ ರಸ್ತೆಯ ಶಿಕ್ಷಕರ ಕಾಲೋನಿ ಹತ್ತಿರದ ಗೋಗಿ ಲೇಔಟ್‌ ಬಡಾವಣೆಯ ಖಾಲಿ ನಿವೇಶನದಲ್ಲಿ ಜಾತ್ರೆಗಾಗಿ 500ಗಿ500 ಅಡಿಯ ಸ್ಥಳದಲ್ಲಿ ವೇದಿಕೆ, ವಿವಿಧ ಮಳಿಗೆಗಳು ಹಾಕಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಕಮಲ ಜಾತ್ರೆಯ ಸಿದ್ಧತೆ ವೀಕ್ಷಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ಪಟ್ಟಣದಲ್ಲಿ
ಕಮಲ ಜಾತ್ರೆ ಆಯೋಜನೆಯಿಂದ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು, ಸಂತಸವನ್ನುಂಟು ಮಾಡಿದೆ.

ಈ ಜಾತ್ರೆಯಲ್ಲಿ ಸರ್ವ ಜನಾಂಗದವರೂ ಯಾವುದೇ ಭೇದ-ಭಾವವಿಲ್ಲದೇ ಪ್ರತಿಯೊಬ್ಬರೂ ಭಾಗವಹಿಸಬಹುದು. ಮಹಿಳೆಯರಿಗೆ ಮೆಹಂದಿ, ಮಕ್ಕಳಿಗೆ ಬಲೂನ್‌ ಆಟ ಹಾಗೂ ವೃದ್ಧರಿಗೆ ಚಾಯ್‌ ಪೇ ಚರ್ಚಾ ಸೇರಿದಂತೆ ನಗೆ ಹಬ್ಬ, ಲೇಸರ್‌ ಶೋ, ಮಲ್ಲಗಂಬ, ಆಹಾರ ಮಳಿಗೆ ಸೇರಿದಂತೆ ಹಲವಾರು ಸಾಂಸ್ಕೃತಿಕ, ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಸರ್ಕಾರದ ಸಾಧನೆಗಳನ್ನು ಇಲ್ಲಿ ಬ್ಯಾನರ್‌, ಕ್ರೀಡೆಗಳ, ಲೇಸರ್‌ ಶೋ ಮೂಲಕ ಪ್ರದರ್ಶಿಸಲಾಗುವುದು. ಈ ಜಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ
ಪುತ್ಥಳಿ ಕೂಡ ಸ್ಥಾಪಿಸಿ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.

ಸೆಲ್ಫಿ ತೆಗೆದುಕೊಂಡ ನಂತರ ಕೆಲವೇ ನಿಮಿಷಗಳಲ್ಲಿಯೇ ಉಚಿತವಾಗಿ ಭಾವಚಿತ್ರ ನೀಡಲಾಗುವುದು. ಈ ಜಾತ್ರೆಯಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕ ಕೂಡ ಇರುವುದಿಲ್ಲ. ಆದರೆ ಅತ್ಯಂತ ಕಡಿಮೆ ದರದಲ್ಲಿ ಆಹಾರ ಮಳಿಗೆ ಕೂಡ ಲಭ್ಯ ಇರುತ್ತದೆ. ಈ ಜಾತ್ರೆಗೆ ಕ್ಷೇತ್ರದ ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ತಾಲೂಕಿನಾದ್ಯಂತ ಐದು ವಾಹನಗಳ ಮೂಲಕ ಪ್ರಚಾರ
ಕಾರ್ಯಕೈಗೊಳ್ಳಲಾಗಿದೆ. ಇದರ ಜೊತೆಗೆ ಬ್ಯಾನರ್‌, ಬಂಟಿಂಗ್ಸ್‌ ಮೂಲಕ ಮನೆ-ಮನೆಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ ಎಂದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.