ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಳಕ್ಕೆ ನ್ಯಾ| ವೀರಪ್ಪ ಕಳವಳ


Team Udayavani, Sep 25, 2022, 8:40 AM IST

2case

ಕಲಬುರಗಿ: ಈಚೆಗೆ ರಾಜ್ಯದ ಹೃಕೋರ್ಟ್‌ನಲ್ಲಿ ಇತ್ಯರ್ಥಗೊಳ್ಳುವ ಪ್ರಕರಣಗಳು ಹೆಚ್ಚಾಗಿ ಬಾಕಿ ಉಳಿಯುತ್ತಿವೆ. ಈ ನಿಟ್ಟಿನಲ್ಲಿ ಇನ್ನಷ್ಟು ಗಂಭೀರ ಪ್ರಯತ್ನ ನಡೆಯಬೇಕಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಜಿಲ್ಲಾ ಕೋರ್ಟ್‌ ಸಂಕೀರ್ಣದಲ್ಲಿ ನ್ಯಾಯವಾದಿಗಳ ಸಂಘ ಆಯೋಜಿಸಿದ್ದ 50ವರ್ಷಗಳ ಕಾಲ ವಕೀಲ ವೃತ್ತಿ ಮಾಡಿದ ಹಿರಿಯರ ವಕೀಲರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಕಲಬುರಗಿ ಹೈಕೋರ್ಟ್‌ ಪೀಠ ಆರಂಭವಾದಾಗ ಐದು ಸಾವಿರ ಪ್ರಕರಣಗಳು ಇದ್ದವು. ಈಗ 25ಸಾವಿರ ಪ್ರಕರಣಗಳು ಇವೆ. ಇಷ್ಟೊಂದು ಪ್ರಕರಣಗಳು ಇತ್ಯರ್ಥಗೊಳ್ಳಬೇಕಾದರೆ, ನ್ಯಾಯಾಧೀಶರು, ವಕೀಲರು ಎಲ್ಲರೂ ಸೇರಿಕೊಂಡು ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇದಕ್ಕೆ ಇಚ್ಛಾಶಕ್ತಿಯೂ ಬೇಕು. ಈ ಭಾಗದಲ್ಲಿನ ಪರಿಸರವೂ ಇದಕ್ಕೆ ಕಾರಣವಾಗುತ್ತದೆ. ಎಲ್ಲವನ್ನು ತೂಗಿಸಿಕೊಂಡು ಹೋದಾಗ ಈ ಭಾಗದಲ್ಲಿನ ಪ್ರಕರಣಗಳನ್ನು ಒಂದು ಚೌಕಟ್ಟಿನಲ್ಲಿ ವಿಲೇವಾರಿ ಮಾಡಬಹುದು ಎಂದರು.

ಈಗ ವಿಮಾನವೂ ಆಗಿದೆ: ಹಿಂದೆ ಕಲಬುರಗಿಗೆ ಬರಬೇಕೆಂದರೆ ಬೆಂಗಳೂರಿನಿಂದ ಹೈದ್ರಾಬಾದ್‌ ವರೆಗೆ ವಿಮಾನದಲ್ಲಿ ಬಂದು, ಅಲ್ಲಿಂದ ರಸ್ತೆ ಮೂಲಕ ಬರಬೇಕಿತ್ತು. ಇದೀಗ ಕೇವಲ ಒಂದು ಗಂಟೆಯಲ್ಲಿ ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಬರಬಹುದು. ಸರ್ಕಾರ ಇಷ್ಟೊಂದು ಸವಲತ್ತುಗಳನ್ನು ಒದಗಿಸಿಕೊಟ್ಟಿದೆ. ಹೀಗಾಗಿ, ನ್ಯಾಯದಾನ ಮಾಡುವಲ್ಲಿ ವಿಳಂಬವಾಗದಂತೆ ನೋಡಿ ಕೊಳ್ಳಬೇಕಿದೆ. ಕಾಲಮಿತಿಯಲ್ಲಿ ನ್ಯಾಯದಾನ ಸಿಕ್ಕರೆ ಕಕ್ಷಿದಾರರಿಗೂ ಅನುಕೂಲವಾಗುತ್ತದೆ ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿ ಗಳಾದ ಎಚ್‌.ಬಿ.ಪ್ರಭಾಕರ ಶಾಸ್ತ್ರಿ, ಬಿ. ಶ್ಯಾಮಪ್ರಸಾದ್‌, ಪಿ.ಎಸ್‌. ದಿನೇಶ್‌ ಕುಮಾರ್‌, ಎಚ್‌.ಟಿ. ನರೇಂದ್ರಪ್ರಸಾದ್‌, ಶಿವಶಂಕರ ಅಮರಣ್ಣವರ, ಅಶೋಕ ಎಸ್‌. ಕಿಣಗಿ, ಕರ್ನಾಟಕ ವಕೀಲರ ಪರಿಷತ್‌ ಅಧ್ಯಕ್ಷ ಕಾಶಿನಾಥ ಮೋತಕಪಲ್ಲಿ, ಜಿಲ್ಲಾ ನ್ಯಾಯವಾದಿಗಳ ಸಂಘದ 50ವರ್ಷ ವಕೀಲ ವೃತ್ತಿ ಪೂರೈಸಿದ ಹಿರಿಯರಿಗೆ ಸನ್ಮಾನ ನ್ಯಾಯವಾದಿಗಳಾಗಿ ವೃತ್ತಿಯಲ್ಲಿ 50 ವರ್ಷ ಪೂರೈಸಿದ ಹಿರಿಯ ವಕೀಲರಾದ ಗುರುಲಿಂಗಪ್ಪ ಮಹಾಗಾಂವ, ಸಿ.ವಿ. ಮಾಲಿಪಾಟೀಲ, ಬಿ.ಡಿ.ಹಂಗರಕಿ, ಮೋಹನರಾವ್‌ ಕಕ್ಕೇರಿ, ಡಿ.ಎಸ್‌. ಪಾಟೀಲ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಸನ್ಮಾನಿಸಿದರು.

ಯುವ ವಕೀಲರು ಪ್ರತಿಜ್ಞೆ ಮಾಡಲಿ ಈ ಭಾಗದಲ್ಲಿನ ನ್ಯಾಯದಾನ ಮತ್ತು ಪ್ರಕರಣಗಳ ಇತ್ಯರ್ಥಕ್ಕೆ ಯುವ ವಕೀಲರು ಪ್ರತಿಜ್ಞೆ ಮಾಡಬೇಕು. ಆಗಲೇ ಪ್ರಕರಣಗಳು ವಿಲೇವಾರಿ ವೇಗ ಪಡೆಯುತ್ತದೆ. ಅದೂ ಅಲ್ಲದೇ, ಕೆಲಸದ ಸಮಯವನ್ನು ಹೆಚ್ಚಳ ಮಾಡಬೇಕು. ಇದರಿಂದ ಕಕ್ಷಿದಾರರಿಗೆ ಸಮಯಕ್ಕೆ ಸರಿಯಾಗಿ ನ್ಯಾಯ ಸಿಗಲು ಸಾಧ್ಯವಿದೆ ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.

ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರವರೆಗೆ, ಮಧ್ಯಾಹ್ನ 2:30ರಿಂದ ಸಂಜೆ 4:45ರ ವರೆಗೆ ಕೋರ್ಟ್‌ ಕಲಾಪಗಳಲ್ಲಿ ಭಾಗವಹಿಸುವ ಪ್ರತಿಜ್ಞೆ ಮಾಡಬೇಕು. ಬೆಂಗಳೂರಿನಲ್ಲಿ ನಾವು ಬೆಳಗ್ಗೆ ನ್ಯಾಯಾಲಯಕ್ಕೆ ಬಂದರೆ ರಾತ್ರಿ 8:30ಕ್ಕೆ ವಾಪಸ್‌ ಮನೆಗೆ ತೆರಳುತ್ತೇವೆ. ಹೀಗಾಗಿ, ವಕೀಲರು ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಬೇಕು. ಉತ್ತಮವಾಗಿ ವಾದ ಮಾಡಿ ಪ್ರಕರಣಗಳನ್ನು ಗೆದ್ದರೆ ಮಾತ್ರವೇ ಉತ್ತಮ ಜೀವನ ನಡೆಸಲು ಮತ್ತು ನ್ಯಾಯಮೂರ್ತಿಗಳಾಗಲು ಸಾಧ್ಯ. ಈಗ ನಮ್ಮಲ್ಲಿ ಕೇವಲ ಶೇ. 60ರಷ್ಟು ಮಾತ್ರವೇ ಉತ್ತಮ ವಕೀಲರು ಸಿಗುತ್ತಾರೆ. ಆ ನಿಟ್ಟಿನಲ್ಲಿ ಎಲ್ಲರ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ಹಿರಿಯ ವಕೀಲರ ಸನ್ಮಾನ ಕಾರ್ಯಕ್ರಮದಲ್ಲಿ 50 ವರ್ಷ ವೃತ್ತಿ ಪೂರೈಸಿದ ವಕೀಲರನ್ನು ನ್ಯಾಯಮೂರ್ತಿ ವಿ. ವೀರಪ್ಪ ಸನ್ಮಾನಿಸಿದರು. ಅಧ್ಯಕ್ಷ ರಾಜಕುಮಾರ ಕಡಗಂಚಿ, ಪ್ರಧಾನ ಕಾರ್ಯದರ್ಶಿ ಪಿ.ಎನ್‌. ಕಪನೂರ ಇದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.