ಭಾಷಣ ಕೇಳಲು ಬಂದಿತ್ತು ಜನಸಾಗರ


Team Udayavani, Aug 17, 2018, 11:52 AM IST

1.jpg

ಕಲಬುರಗಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಭಾಷಣಕ್ಕೆ ನಿರೀಕ್ಷೆ ಮೀರಿ ಜನ ಬಂದಿರುವ ಹಾಗೂ ಅದೇ ಸಮಯಕ್ಕೆ ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಸಭೆಗೆ ಜನ ಬಾರದಿರುವ ಘಟನೆಗೆ 1980ರ ಘಟನೆಗೆ ಕಲಬುರಗಿ ಸಾಕ್ಷಿಯಾಗಿತ್ತು.

ಅದು 1980ರ ಇಸ್ವಿ. ಕಲಬುರಗಿ ಲೋಕಸಭೆ ಸ್ಥಾನಕ್ಕೆ ಉಪ ಚುನಾವಣೆ. ಇಂದಿರಾ ಗಾಂಧಿ ಪರಮಾಪ್ತ ಸಿ.ಎಂ. ಸ್ಟೀಫನ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರು. ಆಗ ಜನತಾ ಪಕ್ಷ ಹಾಗೂ ಇತರರ ಬೆಂಬಲಿತ ಅಭ್ಯರ್ಥಿಯಾಗಿ ಬಾಪುಗೌಡ ದರ್ಶನಾಪುರ ಸ್ಪರ್ಧಾ ಕಣದಲ್ಲಿದ್ದರು. 

ಆಗ ವಾಜಪೇಯಿ ನೂತನ ವಿದ್ಯಾಲಯ ಮೈದಾನದಲ್ಲಿ ದರ್ಶನಾಪುರ ಪರ ಮತಯಾಚಿಸುವ ಚುನಾವಣೆ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಸಭೆಗೆ ಸಾವಿರಾರು ಜನ ಸಮೂಹವೇ ಬಂದಿತ್ತು. ಇದು ಅವರ ಭಾಣಷದ ನಿಖರತೆ ಹಾಗೂ ವ್ಯಕ್ತಿತ್ವ ನಿರೂಪಿಸುತ್ತದೆ. ಇದೇ ಸಮಯಕ್ಕೆ ನೂತನ ವಿದ್ಯಾಲಯ ಮೈದಾನ ಕೂಗಳತೆ ದೂರದಲ್ಲೇ ಈಗಿನ ಟೌನ್‌ ಹಾಲ್‌ ಬಳಿ ಸ್ಟೀಫನ್‌ ಪರವಾಗಿ ಆಗಿನ ಮುಖ್ಯಮಂತ್ರಿ ಆರ್‌. ಗುಂಡೂರಾವ್‌ ಹಾಗೂ ಮತ್ತವರ ನಾಯಕರ ಚುನಾವಣಾ ಪ್ರಚಾರ ಸಭೆ ನಡೆದಿತ್ತು.
ಈ ಸಭೆಗೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬಾರದಿರುವುದನ್ನು ಹಿರಿಯ ನಾಯಕರು ಪಕ್ಷ ಬೇಧ ಮರೆತು ಈಗಲೂ ನೆನೆಯುತ್ತಾರೆ.

ಚುನಾವಣೆಗೆ ಹಿನ್ನೆಲೆ: 1980ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಧರ್ಮಸಿಂಗ್‌ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ ತೆಗೆದುಕೊಳ್ಳುವ ಮುನ್ನವೇ ರಾಜೀನಾಮೆ ನೀಡಿ  ಆ ಸ್ಥಾನವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪರಮಾಪ್ತ, ಕಾಂಗ್ರೆಸ್‌ ನ ಹಿರಿಯ ನಾಯಕ ಸಿ.ಎಂ. ಸ್ಟೀಫನ್‌ ಅವರಿಗೆ ಬಿಟ್ಟು ಕೊಡಲಾಯಿತು. 

ಹೀಗಾಗಿ ಲೋಕಸಭೆಗೆ ಉಪ ಚುನಾವಣೆ ನಡೆಯಿತು. ಸ್ಟೀಫನ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರೆ ಜನತಾ ಪಕ್ಷ ಸೇರಿ ಇತರರ ಬೆಂಬಲದಿಂದ ಬಾಪುಗೌಡ ದರ್ಶನಾಪುರ ಸ್ಪರ್ಧಿಸಿದ್ದರು. ಆಗ ದರ್ಶನಾಪುರ ಪರವಾಗಿ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪಾಲ್ಗೊಂಡು ಭಾಷಣ ಮಾಡಿ ಬಿಸಿಲೂರಿನ ಜನತೆಯ ಗಮನ ಸೆಳೆದಿದ್ದರು. ತಮ್ಮ ಭಾಷಣದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರು, ತಮ್ಮ ಭಾಷಣ ಕೇಳಲು ಸಾವಿರಾರು ಜನರು ಬರುತ್ತೀರಿ, ಆದರೆ ಮತಗಳಾಗಿ ಏಕೆ ಪರಿವರ್ತನೆಯಾಗುವುದಿಲ್ಲ ಎಂದು ಜನತೆಯನ್ನು ಪ್ರಶ್ನಿಸಿದ್ದರು.

ಇದನ್ನು ಸಹ ಕಲಬುರಗಿ ಜನ ಇನ್ನು ನೆನಪಿನಲ್ಲಿಟ್ಟುಕೊಂಡಿದ್ದಾರೆ. ದರ್ಶನಾ ಪುರ ಪರ ಮತಯಾಚಿಸಲು ಎರಡನೇ ಸಲ ಆಗಮಿದ್ದ ವಾಜಪೇಯಿ ಅವರು ಅದಕ್ಕಿಂತ ಮುಂಚೆ 1971-72ರಲ್ಲಿ ಜನ ಸಂಘದ ಅಧ್ಯಕ್ಷರಾಗಿ ಸಂಘದ ಸಂಘಟನೆ ಸಲುವಾಗಿ ಕಲಬುರಗಿಗೆ ಪ್ರಥಮ ಸಲ ಆಗಮಿಸಿದ್ದರು. ಸಂಘಟನಾ ಸಭೆಯಲ್ಲಿ ಪಾಲ್ಗೊಂಡವರು ಪೈಕಿ ಬಹುತೇಕರು ಈಗ ಇಲ್ಲ. ತದನಂತರ
1996ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ| ಬಸವರಾಜ ಪಾಟೀಲ್‌ ಸೇಡಂ ಪರ ಮತಯಾಚಿಸಲು ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ್ದರು.

 ಮುಂದೆ 1998-99ರಲ್ಲಿ ವಾಜಪೇಯಿ 13 ತಿಂಗಳು ಪ್ರಧಾನಿಯಾಗಿದ್ದಾಗ ಸೇಡಂ ಸಹ ಸಂಸದರಾಗಿದ್ದರು. ಮುಂದೆ 1999ರಲ್ಲಿ ಪ್ರಧಾನಿಯಾಗಿದ್ದರೆ ಸೇಡಂ ಗೆಲುವು ಸಾಧಿಸಿರಲಿಲ್ಲ. ಇದರ ನಡುವೆ 1993ರಲ್ಲಿ ರಾಯಚೂರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಾಜಪೇಯಿ ಅವರು ಬೀದರ್‌ ಮುಖಾಂತರ ಕಲಬುರಗಿಗೆ ಆಗಮಿಸಿ ಒಂದು ಗಂಟೆ ಕಾಲ ನಗರದಲ್ಲಿ ಕೆಲವು ಮುಖಂಡರೊಂದಿಗೆ ಚರ್ಚಿಸಿದ್ದರು. ತದನಂತರ ಅವಿಭಜಿತ ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಅತಿಥಿ ಗೃಹದಲ್ಲಿ ರಾತ್ರಿ ತಂಗಿ, ಮರುದಿನ ರಾಯಚೂರಿಗೆ ಪ್ರಯಾಣ ಬೆಳೆಸಿದ್ದರು.

ಹೀಗೆ ಒಟ್ಟು ನಾಲ್ಕು ಸಲ ಮಾಜಿ ಪ್ರಧಾನಿ ವಾಜಪೇಯಿ ಅವರು ಕಲಬುರಗಿಗೆ ಬಂದಿದ್ದು, ನಾಲ್ಕೂ ಸಲವೂ ಪ್ರಧಾನಿಯಾಗುವ ಮುಂಚೆಯೇ ಬಂದಿದ್ದರು ಎಂಬುದು ಒಂದು ವಿಶೇಷ ಎಂಬುದಾಗಿ ಬಿಜೆಪಿಯ ಹಿರಿಯ ತಲೆಮಾರಿನವರು ತಿಳಿಸಿದ್ದಾರೆ.

ಎನ್‌ವಿ ಮೈದಾನದಲ್ಲೇ ಸಭೆ: ಜನ ಸಂಘದ ಅಧ್ಯಕ್ಷರಾಗಿ ಸಂಘದ ಸಂಘಟನಾ ಸಭೆ ಹಾಗೂ ಎರಡು ಸಲ ಚುನಾವಣೆ ಪ್ರಚಾರ ಸಭೆ ನಡೆಸಿದ್ದು ನೂತನ ವಿದ್ಯಾಲಯ ಮೈದಾನದಲ್ಲೇ. ವಾಜಪೇಯಿ ಭಾಷಣ ಮಾಡಿದ್ದು ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಮೂರು ಸಭೆಗಳಲ್ಲಿಯೇ ಮಾತ್ರ ಎಂಬುದು ಮಗದೊಂದು ವಿಶೇಷವಾಗಿದೆ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.